Manipur: ಮತ್ತೆ ಗುಂಡಿನ ದಾಳಿ… ಹಿಂಸಾಚಾರ ನಾಲ್ವರು ವ್ಯಕ್ತಿಗಳ ಕೊಲೆ
Team Udayavani, Jan 11, 2024, 8:19 AM IST
ಇಂಫಾಲ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಹಿಂಸಾ ಘಟನೆಗಳು ಮತ್ತೆ ಮರುಕಳಿಸಿವೆ. ವಿಶೇಷವಾಗಿ ಬಿಷ್ಣುಪುರ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಬಡಿದಾಟಗಳು ಸಂಭವಿವೆ. ಜಿಲ್ಲೆಯ ಗ್ರಾಮವೊಂದರಲ್ಲಿ ಕೃಷಿ ಕೆಲಸಕ್ಕಾಗಿ ತೆರಳಿದ್ದವರು ಸಂಶಯಾಸ್ಪದ ರೀತಿಯಲ್ಲಿ ನಾಪತ್ತೆಯಾಗಿದ್ದರು. ಅವರ ಮೃತದೇಹ ಗುರುವಾರ ಪತ್ತೆಯಾದ ಬಳಿಕ ಎರಡು ಗುಂಪುಗಳ ನಡುವೆ ಭಾರೀ ಪ್ರಮಾಣದಲ್ಲಿ ಬಡಿದಾಟ ಮತ್ತು ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತೂಂದು ಘಟನೆಯಲ್ಲಿ ರಾಜ್ಯದ ಕೌಶಾಂಬಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅರಣ್ಯ ಪ್ರದೇಶಕ್ಕೆ ಕಟ್ಟಿಗೆ ತರಲು ತೆರಳಿದ್ದ ನಾಲ್ವರು ನಾಪತ್ತೆಯಾಗಿದ್ದಾರೆ. ಮಣಿಪುರದಲ್ಲಿ ಪದೇ ಪದೆ ಗಲಭೆ ನಡೆಯುವ ಬಿಷ್ಣುಪುರ ಮತ್ತು ಚುರ್ಚಂದಾಪುರ ಜಿಲ್ಲೆಗಳಿಗೆ ಹೊಂದಿಕೊಂಡು ಇರುವ ಅರಣ್ಯ ಪ್ರದೇಶಕ್ಕೆ ಅವರು ಕಟ್ಟಿಗೆ ಸಂಗ್ರಹಿಸಲು ತೆರಳಿದ್ದರು. ಪೊಲೀಸರು ಹೇಳುವ ಪ್ರಕಾರ ಉಗ್ರರು ಅವರನ್ನು ಹಿಡಿ ದಿಟ್ಟುಕೊಂಡಿರುವ ಸಾಧ್ಯತೆಗಳು ಇವೆ.
ಕಳೆದ ವರ್ಷದ ಮೇಯಿಂದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಭಾರೀ ಪ್ರಮಾಣದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಅದರಿಂದಾಗಿ 160ಕ್ಕೂ ಅಧಿಕ ಮಂದಿ ಅಸುನೀಗಿದ್ದಾರೆ. ಜ.14ರಂದು ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಇಂಫಾಲ್ನಿಂದಲೇ ಆರಂಭವಾಗುವ ಹಿನ್ನೆಲೆಯಲ್ಲಿ ಮಣಿಪುರದಾದ್ಯಂತ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.
ಇದನ್ನೂ ಓದಿ: December ತಿಂಗಳಲ್ಲಿ ಮದ್ಯ ಮಾರಾಟ; ಉಡುಪಿ: ದಾಖಲೆ ಪ್ರಮಾಣದಲ್ಲಿ ವಹಿವಾಟು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.