![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 9, 2021, 4:23 PM IST
ನಾಗ್ಪುರ: ವೈದ್ಯನೆಂದು ಸುಳ್ಳು ಹೇಳಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿದ್ದ ಹಣ್ಣಿನ ವ್ಯಾಪಾರಿಯೊಬ್ಬನನ್ನು ಮಹಾರಾಷ್ಟ್ರದ ನಾಗ್ಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ.
ನಾಗ್ಪುರದ ಕಾಮತಿ ಪ್ರದೇಶದ ಚಂದನ್ ರಮೇಶ್ ಚೌಧರಿ ಎಂಬಾತನೇ ಈ ಕಿಲಾಡಿ. ಈತ ಹಣ್ಣು ಮತ್ತು ಐಸ್ ಕ್ರೀಮ್ ವ್ಯಾಪಾರ ಮಾಡುತ್ತಿದ್ದ. ನಂತರ ಇಲೆಕ್ಟ್ರೀಷಿಯನ್ ಆಗಿಯೂ ಕೆಲಸ ಮಾಡುತ್ತಿದ್ದ.
ಇದನ್ನೂ ಓದಿ:ಕೋವಿಡ್ ಹೊಡೆತಕ್ಕೆ ನಲುಗಿದ ಗೋವಾ ಪ್ರವಾಸೋದ್ಯಮ
ಅಷ್ಟೇ ಅಲ್ಲದೆ ಚಂದನ್ ಚೌಧರಿಯೂ ಓಂ ನಾರಾಯಣ ವಿವಿದೋದ್ಧೇಶ ಸಮಾಜ ಎಂಬ ದತ್ತಿ ಔಷಧಾಲಯವನ್ನೂ ನಡಸುತ್ತಿದ್ದ. ಅಲ್ಲಿ ಕಳೆದ ಐದು ವರ್ಷಗಳಿಂದ ಆಯುರ್ವೇದ ಪ್ರಕೃತಿ ಚಿಕಿತ್ಸೆ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆತನೊಂದಿಗೆ ಪರಿಚಯದ ವ್ಯಕ್ತಿಯೊಬ್ಬರು ಜಿಲ್ಲಾ ಪೊಲೀಸರಿಗೆ ದೂರು ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ನಂತರ ಪೊಲೀಸರು ಚಂದನ್ ನರೇಶ್ ಚೌಧರಿಯ ಔಷಧಾಲಯಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ, ಈತ ನಕಲಿ ವೈದ್ಯ ಎಂದು ಸಾಬೀತಾಗಿದೆ.
ಇದನ್ನೂ ಓದಿ: ನೀವು ಉಳಿಯುತ್ತಿರೋ ಇಲ್ಲವೋ ನಾನಂತೂ ಉಳಿಯಬೇಕು: ಸಚಿವ ಉಮೇಶ್ ಕತ್ತಿ
ಆತನ ಔಷಧಾಲಯದಿಂದ ಆಮ್ಲಜನಕ ಸಿಲಿಂಡರ್ಗಳು, ಸಿರಿಂಜುಗಳು ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.