ಠಾಕ್ರೆ ಬಣ ತ್ಯಜಿಸಿ ಏಕನಾಥ ಶಿಂಧೆ ಜತೆ ಸೇರಿದ ಸಂಸದ ಗಜಾನನ ಕೀರ್ತಿಕರ್
Team Udayavani, Nov 12, 2022, 9:25 AM IST
ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆಯ ಬಣ ಹೋರಾಟ ಮುಂದುವರಿದಿದೆ.ಲೋಕಸಭಾ ಸದಸ್ಯ ಗಜಾನನ ಕೀರ್ತಿಕರ್ ಅವರು ಬಣ ಬದಲಾಯಿಸಿದ್ದು, ಉದ್ಧವ್ ಠಾಕ್ರೆ ಅವರ ಪಾಳಯವನ್ನು ಬಿಟ್ಟು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಣವನ್ನು ಸೇರಿದ್ದಾರೆ.
ಶಿವಸೇನೆಯಲ್ಲಿದ್ದ 18 ಲೋಕಸಭಾ ಸದಸ್ಯರಲ್ಲಿ ಅಧಿಕಾರದಲ್ಲಿರುವ ಏಕನಾಥ್ ಶಿಂಧೆ ಅವರೊಂದಿಗೆ ಹೋಗುವ 13 ನೇ ಸಂಸದ ಕೀರ್ತಿಕರ್ ಆಗಿದ್ದಾರೆ. ಈಗಾಗಲೇ ಪಕ್ಷದ 56 ಶಾಸಕರ ಪೈಕಿ 40 ಶಾಸಕರ ಬೆಂಬಲ ಶಿಂಧೆ ಅವರಿಗಿದೆ.
ಏಕನಾಥ್ ಶಿಂಧೆ ಮಾಡಿದ್ದನ್ನು ಉದ್ಧವ್ ಠಾಕ್ರೆ ಅರ್ಥಮಾಡಿಕೊಳ್ಳಬೇಕು ಎಂದು ಗಜಾನನ ಕೀರ್ತಿಕರ್ ಹೇಳುತ್ತಿದ್ದರು.
ಇದನ್ನೂ ಓದಿ:ಸುರತ್ಕಲ್: ನಿತ್ಯ ವಾಕಿಂಗ್ ಜೊತೆಗೆ ನೂರಾರು ಪಾರಿವಾಳಗಳಿಗೆ ಕಾಳು ಹಾಕುವ ಪಕ್ಷಿ ಪ್ರೇಮಿ
“ಮುಂಬೈ ವಾಯುವ್ಯ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದ ಗಜಾನನ ಕೀರ್ತಿಕರ್ ಅವರು ಇಂದು ಅಧಿಕೃತವಾಗಿ ಪಕ್ಷಕ್ಕೆ ಪ್ರವೇಶಿಸಿದರು. ಈ ಸಂದರ್ಭದಲ್ಲಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು ಮತ್ತು ನಾವು ಅವರಿಗೆ ಸಾಮಾಜಿಕ ಮತ್ತು ರಾಜಕೀಯ ಪ್ರಗತಿಗೆ ಶುಭ ಹಾರೈಸಿದ್ದೇವೆ.” ಎಂದು ಶಿಂಧೆ ಅವರು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ
Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ
New Criminal ಕಾನೂನು ಜಾರಿ: ಪೊಲೀಸ್ ಠಾಣೆಗಳಲ್ಲಿ ಜು.1ಕ್ಕೆ ವಿಶೇಷ ಕಾರ್ಯಕ್ರಮ
NEET ಗದ್ದಲಕ್ಕೆ ಸಂಸತ್ ಕಲಾಪ ಬಲಿ; ಉಭಯ ಸದನದಲ್ಲಿ ಕೋಲಾಹಲ
NTA ಸುಧಾರಣೆಗೆ ಪೋಷಕರು, ವಿದ್ಯಾರ್ಥಿಗಳಿಂದ ಸಲಹೆ ಆಹ್ವಾನ
MUST WATCH
ಹೊಸ ಸೇರ್ಪಡೆ
Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ
Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ
Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ
Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ
Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.