![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 11, 2023, 1:13 AM IST
ಹೊಸದಿಲ್ಲಿ: ಇಸ್ರೋ ಮುಂದಿನ ವರ್ಷ ಕೈಗೊಳ್ಳಲು ಉದ್ದೇಶಿಸಿರುವ ಮಾನವಸಹಿತ ಗಗನ ಯಾತ್ರೆಗೆ ಸಿದ್ಧತೆ ಗಳು ಒಂದೊಂದಾಗಿ ಪ್ರಗತಿ ಕಾಣುತ್ತಿವೆ. ಅ. 21 ರಂದು ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿ ಮೊದಲ ಹಂತದ ಸರಣಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಗಗನ ನೌಕೆಯ ಮಾದರಿ ಯನ್ನು ನಭಕ್ಕೆ ಉಡಾವಣೆಗೊಳಿಸಿ ಅದು ಯಶಸ್ವಿಯಾಗಿ ಬಂಗಾಳಕೊಲ್ಲಿಯಲ್ಲಿ ಇಳಿಯು ವಂತೆ ಮಾಡುವ ಪ್ರಯತ್ನಗಳನ್ನು ನಡೆಸಲಾಗುತ್ತದೆ.
ಬಾಹ್ಯಾಕಾಶ ಹೊರವಲಯದ ಪರಿಮಿತಿಗೆ ಗಗನ ನೌಕೆಯ ಮಾದರಿಯನ್ನು ಕಳುಹಿಸಲಾಗುತ್ತದೆ. ಅನಂತರ ಅದನ್ನು ಸುರಕ್ಷಿತವಾಗಿ ಬಂಗಾಳಕೊಲ್ಲಿಗೆ ಇಳಿಸಲಾಗುತ್ತದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಹಾಯಕ ಸಚಿವ ಡಾ| ಜಿತೇಂದ್ರ ಸಿಂಗ್ ಹೇಳಿದ್ದಾರೆ. ಮಾದರಿ ನೌಕೆಯಲ್ಲಿ ಕ್ರ್ಯೂ ಎಸ್ಕೇಪ್ ಸಿಸ್ಟಮನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕ್ರ್ಯೂ ಎಸ್ಕೇಪ್ ಸಿಸ್ಟಮ್ ಎಂದರೇನು?
ಶುಕ್ರವಾರ ನಡೆಸಲು ಉದ್ದೇಶಿಸಲಾಗಿರುವ ಟಿವಿ-ಡಿ1 ಪರೀಕ್ಷಾರ್ಥ ಗಗನನೌಕೆಯ ಮಾದರಿಯಲ್ಲಿ ಇರುವ ಪೇ ಲೋಡ್ನಲ್ಲಿ ಗಗನಯಾನದಲ್ಲಿ ತೆರಳುವವರು, ಕ್ರ್ಯೂ ಎಸ್ಕೇಪ್ ಸಿಸ್ಟಮ್ ಸೇರ್ಪಡೆ ಮಾಡಲಾಗಿದೆ. ಗಗನನೌಕೆಯ ಮಾದರಿ ಬಂಗಾಳಕೊಲ್ಲಿಯಿಂದ 17 ಕಿ.ಮೀ. ಎತ್ತರದಲ್ಲಿರುವಾಗಲೇ ಅದರಲ್ಲಿ ಇರುವ ಸಿಬಂದಿ ಸುರಕ್ಷಿತವಾಗಿ ಇಳಿಯುವಂತೆ ಮಾಡಲಾಗುತ್ತದೆ. ಅದು ಯಶಸ್ವಿಯಾದರೆ ಮಾನವ ಸಹಿತ ಯಾತ್ರೆಯ ಒಂದು ಹಂತ ಯಶಸ್ವಿಯಾದಂತಾಗುತ್ತದೆ ಎಂದು ಇಸ್ರೋ ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.