ನವದೆಹಲಿಯಲ್ಲಿ ಶೀಘ್ರವೇ ತಲೆಯೆತ್ತಲಿದೆ “ಭಾರತ ದರ್ಶನ ಪಾರ್ಕ್’
ಜನಪ್ರಿಯ ಸ್ಥಳಗಳ ಪ್ರತಿಕೃತಿ ಇರುವ "ಭಾರತ ದರ್ಶನ ಪಾರ್ಕ್'
Team Udayavani, Jan 4, 2020, 7:06 PM IST
ನವದೆಹಲಿ: ತ್ಯಾಜ್ಯ ವಸ್ತುಗಳಿಂದ ಅತ್ಯುತ್ಕೃಷ್ಟ ಪಾರ್ಕ್ ನಿರ್ಮಾಣಗೊಂಡಿರುವ ನವದೆಹಲಿಯಲ್ಲಿ ಶೀಘ್ರವೇ “ಭಾರತ ದರ್ಶನ ಪಾರ್ಕ್’ ತಲೆಯೆತ್ತಲಿದೆ. ಅದರಲ್ಲಿ ಮೈಸೂರು ಅರಮನೆ, ಒಡಿಶಾದ ಕೊನಾರ್ಕ್ ದೇಗುಲ, ಹೈದರಾಬಾದ್ನ ಚಾರ್ಮಿನಾರ್, ಮುಂಬೈನ ವಿಕ್ಟೋರಿಯಾ ಮೆಮೋರಿಯಲ್ ಹಾಲ್ ಸೇರಿದಂತೆ ಐತಿಹಾಸಿಕ ಮತ್ತು ಜನಪ್ರಿಯ ತಾಣಗಳ ಪ್ರತಿಕೃತಿ ನಿರ್ಮಾಣವಾಗಲಿದೆ. ವೈವಿಧ್ಯತೆಯಲ್ಲಿ ಏಕತೆ ಎಂಬ ಧ್ಯೇಯ ವಾಕ್ಯದ ಅಡಿ ಹೊಸ ಯೋಜನೆ ಅನುಷ್ಠಾನಗೊಳ್ಳಲಿದೆ.
ಈ ಯೋಜನೆಗೆ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಶುಕ್ರವಾರ ಶಿಲಾನ್ಯಾಸ ನೆರವೇರಿಸಿದ್ದಾರೆ. ಒಟ್ಟು 6 ಎಕರೆ ಪ್ರದೇಶದಲ್ಲಿ ಪಾರ್ಕ್ ನಿರ್ಮಾಣವಾಗಲಿದೆ ಎಂದು ದಕ್ಷಿಣ ದೆಹಲಿ ಮಹಾನಗರ ಪಾಲಿಕೆ ಆಯುಕ್ತ ಜ್ಞಾನೇಶ್ ಭಾರತಿ ತಿಳಿಸಿದ್ದಾರೆ. ಬಳಕೆ ಮಾಡಲು ಸಾಧ್ಯವಾಗದ ಲೋಹದ ತುಂಡುಗಳಿಂದ ಪ್ರತಿಕೃತಿ ನಿರ್ಮಿಸಲಾಗುತ್ತದೆ. ಈ ಯೋಜನೆ ಮೂಲಕ ತ್ಯಾಜ್ಯ ವಸ್ತುಗಳಿಂದ ಅತ್ಯಂತ ಉಪಯುಕ್ತ ವಸ್ತುಗಳನ್ನು ನಿರ್ಮಾಣ ಮಾಡುವ ವ್ಯಾಪ್ತಿಯನ್ನು ವಿಸ್ತರಿಸುವ ಯೋಜನೆ ಮುಂದುವರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.
18-20 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತದೆ. “ವೇಸ್ಟ್ ಟು ವಂಡರ್ ಪಾರ್ಕ್’ನಲ್ಲಿ ವಿಶ್ವದ 7 ಅದ್ಭುತಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ಹೊಸ ಯೋಜನೆಗಾಗಿ ವಾಹನಗಳ ಬಿಡಿ ಭಾಗಗಳು, ಫ್ಯಾನ್, ರಾಡ್, ಕಬ್ಬಿಣದ ತಗಡು, ನಟ್ ಮತ್ತು ಬೋಲ್ಟ್ಗಳನ್ನು ಬಳಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ
CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Mangaluru: ರಾಷ್ಟ್ರೀಯ ಸ್ಟಾಂಡಪ್ ಪ್ಯಾಡ್ಲಿಂಗ್: ರಾಜ್ಯಕ್ಕೆ 7 ಪದಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.