![Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?](https://www.udayavani.com/wp-content/uploads/2024/12/Priyank-Kharge-415x237.jpg)
ಬಕ್ತಿಯಾರ್ಪುರ, ಅಕ್ಬರ್ಪುರ: ಪುನರ್ ನಾಮಕರಣಕ್ಕೆ ಸಲಹೆ, ವಿರೋಧ
Team Udayavani, Oct 22, 2018, 4:26 PM IST
![nitish-kumar1-700.jpg](https://www.udayavani.com/wp-content/uploads/2018/10/22/nitish-kumar1-700-620x354.jpg)
ಪಟ್ನಾ : ಒಂಬತ್ತನೇ ಶತಮಾನದ ಅಫ್ಘಾನ್ ಮಿಲಿಟರಿ ಜನರಲ್ ಬಕ್ತಿಯಾರ್ ಖೀಲ್ಜಿ ಹೆಸರನ್ನು ಹೊಂದಿರುವ ಮತ್ತು ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹುಟ್ಟಿ ಬೆಳೆದ ಊರಾಗಿರುವ, ಪಟ್ನಾ ಹೊರವಲಯದ ಬಕ್ತಿಯಾರ್ಪುರದ ಹೆಸರನ್ನು ಬದಲಾಯಿಸಬೇಕೆಂದು ಕೇಂದ್ರ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಮಾಡಿರುವ ಸಲಹೆ ಸ್ವತಃ ಬಿಜೆಪಿ ಮತ್ತು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ.
ದಿಲ್ಲಿಯ ಅಂದಿನ ಸುಲ್ತಾನ ಕುತುಬುದ್ದೀನ್ ಐಬಕ್ ನ ಆದೇಶದ ಪ್ರಕಾರ ಅಫ್ಘಾನ್ ಮಿಲಿಟರಿ ಜನರಲ್ ಬಕ್ತಿಯಾರ್ ಖೀಲ್ಜಿ ಬಿಹಾರದ ಮೇಲೆ ಆಕ್ರಮಣ ಮಾಡಿ ಅದನ್ನು ವಶಪಡಿಸಿಕೊಂಡಿದ್ದ. ಪಟ್ನಾ ಹೊರವಲಯದಲ್ಲಿರುವ ನಗರಕ್ಕೆ ಬಕ್ತಿಯಾರ್ ಹೆಸರು ಬಂದಿರುವುದು ಆತನಿಂದಾಗಿ ಎಂಬುದನ್ನು ಇತಿಹಾಸ ತಿಳಿಸುತ್ತದೆ.
ಗಿರಿರಾಜ್ ಸಿಂಗ್ ಅವರ ಈ ಪ್ರಸ್ತಾವವನ್ನು ಬಿಹಾರದಲ್ಲಿನ ಜೆಡಿಯು (ಸಿಎಂ ನಿತೀಶ್ ಕುಮಾರ್ ಪಕ್ಷ), ವಿರೋಧ ಪಕ್ಷಗಳಾಗಿರುವ ಆರ್ಜೆಡಿ ಮತ್ತು ಹಿಂದುಸ್ಥಾನಿ ಆವಾಮ್ ಮೋರ್ಚಾ ತೀವ್ರವಾಗಿ ಆಕ್ಷೇಪಿಸಿವೆ.
ಗಿರಿರಾಜ್ ಸಿಂಗ್ ಅವರು ತಾವು ಪ್ರತಿನಿಧಿಸುತ್ತಿರುವ ಅಕ್ಬರ್ಪುರ ಲೋಕಸಭಾ ಕ್ಷೇತ್ರಕ್ಕೂ ಬೇರೆ ಹೆಸರಿಡಬೇಕೆಂದು ಒತ್ತಾಯಿಸಿದ್ದಾರೆ. ಆದರೆ ಅವರು ಈ ಎರಡೂ ಸ್ಥಳಗಳಿಗೆ ಯಾವುದೇ ಪರ್ಯಾಯ ನಾಮವನ್ನು ಸೂಚಿಸಿಲ್ಲ.
ಟಾಪ್ ನ್ಯೂಸ್
![Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?](https://www.udayavani.com/wp-content/uploads/2024/12/Priyank-Kharge-415x237.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್](https://www.udayavani.com/wp-content/uploads/2024/12/amith-shah-150x84.jpg)
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
![Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ](https://www.udayavani.com/wp-content/uploads/2024/12/pushpa-2-5-150x94.jpg)
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.