ವಿವಾಹಕ್ಕೆ ನಿರಾಕರಿಸಿದ ಅಪ್ರಾಪ್ತೆಗೆ ಹಲ್ಲೆ: ಜುಟ್ಟು ಹಿಡಿದು ಎಳೆದೊಯ್ದ 47 ವರ್ಷದ ವ್ಯಕ್ತಿ
Team Udayavani, Feb 20, 2023, 10:29 AM IST
ರಾಯ್ಪುರ: ಪ್ರೀತಿಯನ್ನು ನಿರಾಕರಿಸಿದ ಅಪ್ರಾಪ್ತೆಯನ್ನು ಚೂರಿಯಿಂದ ಹಲ್ಲೆ ಮಾಡಿ, ಜುಟ್ಟು ಹಿಡಿದು ಎಳೆದೊಯ್ದ ಘಟನೆ ಛತ್ತೀಸ್ ಗಡದ ರಾಯ್ಪುರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
47 ವರ್ಷದ ಓಂಕಾರ್ ತಿವಾರಿ 16 ವರ್ಷದ ಅಪ್ರಾಪ್ತೆಯನ್ನು ರಸ್ತೆ ಜುಟ್ಟು ಹಿಡಿದು ಎಳೆದೊಯ್ದಿದ್ದಾನೆ. ಓಂಕಾರ್ ತಿವಾರಿ ಅವರ ಗುಧಿಯಾರಿ ಪ್ರದೇಶದಲ್ಲಿರುವ ದಿನಸಿ ಅಂಗಡಿಯಲ್ಲಿ ಯುವತಿ ಕೆಲಸ ಮಾಡಿಕೊಂಡಿದ್ದಳು. ಓಂಕಾರ್ ತಿವಾರಿ ಅಪ್ರಾಪ್ತೆಯನ್ನು ಮದುವೆಯಾಗಲು ಬಯಸಿದ್ದರು. ಇದನ್ನು ಯುವತಿ ಬಳಿ ಹೇಳಿದಾಗ ಆಕೆ, ಅದನ್ನು ನಿರಾಕರಿಸಿ ಕೆಲಸ ಬಿಟ್ಟಿದ್ದಾಳೆ.
ಇದೇ ಕಾರಣಕ್ಕೆ ಶನಿವಾರ (ಫೆ.18 ರಂದು) ರಾತ್ರಿ ಓಂಕಾರ್ ತಿವಾರಿ ಕುಡಿದ ಮತ್ತಿನಲ್ಲಿ ಯುವತಿಯನ್ನು ಮನೆಯಿಂದ ಹೊರಗೆ ಎಳೆದು, ಚೂರಿಯಿಂದ ಹಲ್ಲೆ ಮಾಡಿದ್ದಾನೆ. ತಪ್ಪಿಸಿಕೊಂಡು ಓಡಿದ ಯುವತಿಯ ಜಡೆ ಹಿಡಿದು ರಸ್ತೆಯಲ್ಲಿ ಎಳೆದೊಯ್ದಿದ್ದಾನೆ. ಸ್ಥಳೀಯರು ವಿಡಿಯೋ ಚಿತ್ರೀಕರಣ ಮಾಡಿ, ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಆ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಯುವತಿ ರಸ್ತೆಯಲ್ಲಿ ಕುಸಿದು ಬಿದ್ದಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.