![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 19, 2022, 5:46 PM IST
ಭುವನೇಶ್ವರ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಬಲವಂತವಾಗಿ ಕಿಸ್ ಮಾಡಿ ರ್ಯಾಗಿಂಗ್ ಮಾಡಿದ ಘಟನೆ ಒಡಿಶಾದಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆದ ನಂತರ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡೊದ್ದಾರೆ.
ಗುಂಜನ್ ಜಿಲ್ಲೆಯ ಕಾಲೇಜಿನಲ್ಲಿ ಈ ಘಟನೆ ಸಂಬಂಧಿಸಿದಂತೆ 12 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.
ಕಳೆದ ತಿಂಗಳು ಸರ್ಕಾರಿ ಕಾಲೇಜಿಗೆ ಸೇರಿದ್ದ ಪ್ರಥಮ ವರ್ಷದ ವಿದ್ಯಾರ್ಥಿನಿಗೆ ಅಪ್ರಾಪ್ತ ಬಾಲಕನೋರ್ವ ಹಿರಿಯ ವಿದ್ಯಾರ್ಥಿಗಳ ಪ್ರಚೋದನೆಯ ಮೇರೆಗೆ ಮೈದಾನದಲ್ಲಿ ಬಲವಂತವಾಗಿ ಮುತ್ತಿಟ್ಟಿದ್ದಾನೆ. ಅವಳು ಹೊರಡಲು ಎದ್ದು ನಿಂತಾಗ, ಸೀನಿಯರ್ ವಿದ್ಯಾರ್ಥಿಯೊಬ್ಬ ಅವಳ ಕೈ ಹಿಡಿದು ತಡೆದಿದ್ದಾನೆ. ಆತ ಕೈಯಲ್ಲಿ ದೊಣ್ಣೆ ಹಿಡಿದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಆಶ್ಚರ್ಯವೆಂಬಂತೆ ಈ ಘಟನೆಯು ಕಾಲೇಜಿನ ಇತರ ಹುಡುಗಿಯರ ಸಮ್ಮುಖದಲ್ಲೇ ನಡೆದಿದೆ. ಆದರೆ ದೈಹಿಕ ಕಿರುಕುಳದ ವಿರುದ್ಧ ಪ್ರತಿಭಟಿಸುವ ಬದಲು ಅವರು ಪ್ರೋತ್ಸಾಹ ನೀಡುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.
ಘಟನೆಯಲ್ಲಿ ಭಾಗಿಯಾದವರನ್ನು ನಾವು ಗುರುತಿಸಿದ್ದೇವೆ. ಅಲ್ಲದೆ ಅವರನ್ನು ಕಾಲೇಜಿನಿಂದ ಹೊರ ಹಾಕಿದ್ದೇವೆ. ಮುಂದೆ ಅವರಿಗೆ ಪರೀಕ್ಷೆ ಬರೆಯಲೂ ಅವಕಾಶ ನೀಡುವುದಿಲ್ಲ ಎಂದು ಕಾಲೇಜಿನ ಪ್ರಿನ್ಸಿಪಾಲ್ ಹೇಳಿದ್ದಾರೆ.
ಇದು ಕೇವಲ ರ್ಯಾಗಿಂಗ್ ಪ್ರಕರಣವಲ್ಲ, ಆದರೆ ದೈಹಿಕ ಕಿರುಕುಳಕ್ಕೆ ಸಮಾನವಾಗಿದೆ ಎಂದು ಬರ್ಹಾಂಪುರದ ಪೊಲೀಸ್ ಅಧೀಕ್ಷಕ ಸರಬನ್ ವಿವೇಕ್ ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.