TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ
ತಿರುವನಂತಪುರದಲ್ಲಿ ಬಿಜೆಪಿಯೇತರ 5 ರಾಜ್ಯಗಳ ಸಭೆ ;
Team Udayavani, Sep 13, 2024, 7:20 AM IST
ತಿರುವನಂತಪುರ: ಕೇಂದ್ರ ಸರಕಾರ ಸಂಗ್ರಹಿಸುವ ತೆರಿಗೆ ಹಂಚಿಕೆಯಲ್ಲಿ ಸಮಪಾಲು ದೊರೆಯಬೇಕೆಂಬ ಆಗ್ರಹ ಕೇರಳ ರಾಜಧಾನಿ ತಿರುವನಂತಪುರದಲ್ಲಿ ಗುರುವಾರ ನಡೆದ ಬಿಜೆಪಿಯೇತರ ಐದು ರಾಜ್ಯಗಳ ನಾಯಕರ ಸಭೆಯಲ್ಲಿ ಕೇಳಿ ಬಂತು.
16ನೇ ಹಣಕಾಸು ಆಯೋಗಕ್ಕೆ ರಾಜ್ಯಗಳ ಬೇಡಿಕೆಗೆ ಸಂಬಂಧಿಸಿದಂತೆ ಕರ್ನಾಟಕ, ತೆಲಂಗಾಣ, ತಮಿಳುನಾಡು, ಪಶ್ಚಿಮ ಬಂಗಾಲ ಮತ್ತು ಕೇರಳ ರಾಜ್ಯಗಳ ಹಣಕಾಸು ಸಚಿವರು ಹಾಗೂ ನಾಯಕರು ನಡೆಸಿದ ಸಭೆಯಲ್ಲಿ ಕೇಂದ್ರ ಸರಕಾರದಿಂದ ಆಗುತ್ತಿರುವ ತೆರಿಗೆ ಅನ್ಯಾಯದ ಬಗ್ಗೆ ಚರ್ಚಿಸ ಲಾಯಿತು.
ಒಟ್ಟು ತೆರಿಗೆ ಆದಾಯದಲ್ಲಿ ಕೇಂದ್ರ ಸರಕಾರವು ರಾಜ್ಯಗಳಿಗೆ ನೀಡುವ ಪಾಲನ್ನು ಕಳೆದ ಹಣಕಾಸು ಆಯೋಗವು ಶಿಫಾರಸು ಮಾಡಿದ ಶೇ. 41ರಿಂದ ಶೇ. 50ಕ್ಕೆ ಹೆಚ್ಚಿಸಬೇಕೆಂಬ ಆಗ್ರಹ ಕೇಳಿ ಬಂತು.
ಬೇಡಿಕೆಗಳೇನು?
-ತೆರಿಗೆ ಆದಾಯ ಹಂಚಿಕೆಯಲ್ಲಿ ಆಗುತ್ತಿರುವ ಅನ್ಯಾಯ ತಡೆಯಬೇಕು
-ತೆರಿಗೆಯ ಸಮಪಾಲು ಬಗ್ಗೆ 16ನೇ ಹಣ ಕಾಸು ಆಯೋಗ ಗಮನಹರಿಸ ಬೇಕು
-ತೆರಿಗೆ ಹಂಚಿಕೆ ವೇಳೆ ಹೆಚ್ಚುತ್ತಿರುವ ಕೇಂದ್ರದ ಸೆಸ್, ಸರ್ಚಾರ್ಜ್ ಪರಿಗಣಿಸಬೇಕು
15ನೇ ಹಣಕಾಸು ಆಯೋಗದ ಶಿಫಾರಸುಗಳಿಂದ ರಾಜ್ಯಕ್ಕೆ ಆಗಿರುವ ಅನ್ಯಾಯಕ್ಕೆ 16ನೇ ಹಣಕಾಸು ಆಯೋಗದಲ್ಲಿ ಪರಿಹಾರ ನೀಡಬೇಕಾಗಿದೆ. ಭವಿಷ್ಯದ ದೃಷ್ಟಿಯಲ್ಲಿ ಇದು ನಿರ್ಣಾಯಕ ಘಟ್ಟವಾಗಿದ್ದು, ವೈಯಕ್ತಿಕವಾಗಿ ಹಾಗೂ ಒಟ್ಟಾಗಿ ದಕ್ಷಿಣದ ರಾಜ್ಯಗಳು ದನಿ ಎತ್ತಬೇಕು.
– ಕೃಷ್ಣಬೈರೇಗೌಡ, ಕಂದಾಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ: ದೇಶದಲ್ಲಿ 2ನೇ ಪ್ರಕರಣ
Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ
Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ
Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್ನಲ್ಲಿ ಶೇ.1.31
Jio ನೆಟ್ವರ್ಕ್ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.