![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jul 21, 2022, 4:31 PM IST
ಪಣಜಿ: “ಕೈಗಾರಿಕೆ ಇಲಾಖೆಯ ಗೋವಾ ಕೈಗಾರಿಕಾ ಅಭಿವೃದ್ಧಿ ಮತ್ತು ಹೂಡಿಕೆ ಉತ್ತೇಜನ ಯೋಜನೆ 2022ಕ್ಕೆ” ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು. ಪ್ರಮೋದ್ ಸಾವಂತ್ ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಹೊಸ ನೀತಿಯ ಪ್ರಕಾರ, ಗೋಮಂತಕಿಯರಿಗೆ ಶೇ.60 ಪ್ರತಿಶತ ಮೀಸಲಾತಿ ಸೀಟುಗಳನ್ನು ಖಾಸಗಿ ಉದ್ಯೋಗಗಳಲ್ಲಿ ಇರಿಸಬೇಕಾಗುತ್ತದೆ ಎಂದು ಕೈಗಾರಿಕಾ ಸಚಿವ ಮಾವಿನ್ ಗುಡಿನ್ಹೋ ಈ ಸಮಯದಲ್ಲಿ ಮಾಹಿತಿ ನೀಡಿದರು.
ಪಣಜಿಯಲ್ಲಿ ಆಯೋಜಿಸಿದ್ದ ಸಚಿವ ಸಂಪುಟ ಸಭೆಯಲ್ಲಿ- 18 ಕಾನೂನು ತಿದ್ದುಪಡಿಗಳನ್ನು ಒಳಗೊಂಡಂತೆ 35 ಪ್ರಸ್ತಾವನೆಗಳನ್ನು ಅನುಮೋದಿಸಿತು. ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ಹೊಸ ಪಾರದರ್ಶಕ ಮತ್ತು ಹೂಡಿಕೆ ಉತ್ತೇಜಕ ಕೈಗಾರಿಕಾ ನೀತಿಯ ಅಗತ್ಯವಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಹೊಸ ನೀತಿಯನ್ನು ರೂಪಿಸಲಾಗಿದೆ. ‘ರಾಜ್ಯದಲ್ಲಿ ಹೊಸ ಕೈಗಾರಿಕೆ ನೀತಿ ಜಾರಿಯಾದ ನಂತರ ಮುಂದಿನ ಐದು ವರ್ಷಗಳಲ್ಲಿ 30 ಸಾವಿರ ಉದ್ಯೋಗಾವಕಾಶ ಲಭ್ಯವಾಗಲಿದ್ದು, ಸುಮಾರು 20 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದರು.
ಹೊಸ ನೀತಿಯ ಪ್ರಕಾರ, ಖಾಸಗಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ 60 ರಷ್ಟು ಮೀಸಲಾತಿ ಸೀಟುಗಳನ್ನು ಮೀಸಲಿಡಲಾಗುತ್ತದೆ. ಈ ನೀತಿಯನ್ನು ಜಾರಿಗೆ ತರದ ಕೈಗಾರಿಕೆಗಳು ಸರ್ಕಾರದ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಹೊಸ ನೀತಿಯ ಅಡಿಯಲ್ಲಿ, ಒಂದೇ ಅಪ್ಲಿಕೇಶನ್ನಲ್ಲಿ ಸಿಂಗಲ್ ವಿಂಡೋ ಮೂಲಕ ಕೈಗಾರಿಕೆಗಳಿಗೆ ಪರವಾನಗಿಗಳನ್ನು ನೀಡಲಾಗುತ್ತದೆ. ಒಂದು ತಿಂಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಈ ನೀತಿಯನ್ನು ಗೋವಾ ಕೈಗಾರಿಕಾ ಅಭಿವೃದ್ಧಿ ನಿಗಮದ ಮೂಲಕ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.
ಇದನ್ನೂ ಓದಿ : ಶ್ರೀಲಂಕಾ ನೌಕಾಪಡೆಯಿಂದ 6 ಭಾರತೀಯ ಮೀನುಗಾರರ ಬಂಧನ
ಗೋವಾದಲ್ಲಿ ಪತ್ರಕರ್ತರ ಸಂರಕ್ಷಣಾ ಕಾಯ್ದೆಯ ಅನುಷ್ಠಾನಕ್ಕೆ…
ಹೊಸ ಕಾಯ್ದೆಯಲ್ಲಿ ಪತ್ರಕರ್ತರ ಸಂರಕ್ಷಣಾ ಕಾಯ್ದೆ ಅನುಷ್ಠಾನಕ್ಕೆ ಒತ್ತು ನೀಡಲಾಗುವುದು. ಈ ಕಾಯ್ದೆಗೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಈ ಹೊಸ ಕಾನೂನಿನ ಪ್ರಕಾರ, ಪತ್ರಕರ್ತರ ಮೇಲೆ ಹಲ್ಲೆ ನಡೆಸುವವರನ್ನು ಜಾಮೀನು ರಹಿತವಾಗಿ ಬಂಧಿಸಲಾಗುತ್ತದೆ ಮತ್ತು ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.