![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 20, 2019, 8:04 AM IST
ಪಣಜಿ: ಗೋವಾದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಮಧ್ಯರಾತ್ರಿ ಅಧಿಕಾರ ಸ್ವೀಕರಿಸಿದ್ದ ಬಿಜೆಪಿ ನಾಯಕ ಪ್ರಮೋದ್ ಸಾವಂತ್ ನೇತೃತ್ವದ ಸರ್ಕಾರ ವಿಶ್ವಾಸಮತ ಅಗ್ನಿಪರೀಕ್ಷೆಯಲ್ಲಿ ಬುಧವಾರ ಗೆಲುವು ಸಾಧಿಸಿದೆ.
40 ವಿಧಾನಸಭಾ ಬಲದ ಗೋವಾದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಮುಖ್ಯಮಂತ್ರಿ ಸಾವಂತ್ ಪರವಾಗಿ 20 ಮತಗಳು ಚಲಾವಣೆಯಾಗಿದ್ದು, ವಿರೋಧವಾಗಿ 15 ಮತಗಳು ಬಿದ್ದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಸರ್ಕಾರ ರಚನೆಗೆ ಬೇಕಾಗಿರುವ 20 ಶಾಸಕರ ಸಂಖ್ಯೆಯನ್ನು ಬಿಜೆಪಿ ಪಡೆದಂತಾಗಿದೆ.
11 ಬಿಜೆಪಿ ಶಾಸಕರು, ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷದ 3 ಶಾಸಕರು, ಗೋವಾ ಫಾರ್ವರ್ಡ್ ಪಕ್ಷದ 3 ಶಾಸಕರು ಹಾಗೂ ಮೂವರು ಪಕ್ಷೇತರ ಶಾಸಕರು ಸಾವಂತ್ ಗೆ ಬೆಂಬಲ ಸೂಚಿಸಿದ್ದಾರೆ. ಕಾಂಗ್ರೆಸ್ ಪಕ್ಷದ 14 ಶಾಸಕರು ಹಾಗೂ ಎನ್ ಸಿಪಿಯ ಓರ್ವ ಶಾಸಕರು ವಿರೋಧ ವ್ಯಕ್ತಪಡಿಸಿ ಮತ ಚಲಾಯಿಸಿದ್ದರು.
40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಪ್ರಸ್ತುತ ಬಲ 36ಕ್ಕೆ ಇಳಿದಿದೆ. ಇಬ್ಬರು ಬಿಜೆಪಿ ಶಾಸಕರ ನಿಧನ(ಸಿಎಂ ಮನೋಹರ್ ಪರ್ರಿಕರ್, ಫ್ರಾನ್ಸಿಸ್ ಡಿಸೋಜಾ) ಹಾಗೂ ಇಬ್ಬರು ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದಾಗಿ ಸದನದ ಬಲ 36ಕ್ಕೆ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ 36 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆಯಲ್ಲಿ ಬಿಜೆಪಿ 20 ಸ್ಥಾನ ಪಡೆದು ಮತ್ತೆ ಅಧಿಕಾರದ ಗದ್ದುಗೆ ಏರಿದಂತಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.