
ಕರ್ನಾಟಕದ ಫಲಿತಾಂಶ ಬಿಜೆಪಿಗೆ ಪಾಠವಾಗಿದೆ: ಯೂರಿ ಅಲೆಮಾವೋ
Team Udayavani, May 14, 2023, 4:45 PM IST

ಪಣಜಿ: ಕರ್ನಾಟಕ ಚುನಾವಣಾ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದ ನಂತರ ಗೋವಾದ ಕಾಂಗ್ರೆಸ್ ನಾಯಕರು ವಿವಿಧ ಪ್ರತಿಕ್ರಿಯೆ ನೀಡಲು ಪ್ರಾರಂಭಿಸಿದ್ದಾರೆ.
ರಾಜಕೀಯಕ್ಕೆ ಹೊಸ ದಿಕ್ಕು ನೀಡಲಿರುವ ಕರ್ನಾಟಕ ಕಾಂಗ್ರೆಸ್ ಗೆಲುವಿಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದು ಗೋವಾ ರಾಜ್ಯ ವಿರೋಧ ಪಕ್ಷದ ನಾಯಕ ಯೂರಿ ಅಲೆಮಾವೋ ಹೇಳಿದ್ದಾರೆ.
ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಮುಂಚೂಣಿಯಲ್ಲಿರಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಮಾತನಾಡಿದ ಯೂರಿ ಅಲೆಮಾವೋ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ದೇಶದಲ್ಲಿ ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಹಣದುಬ್ಬರ, ನಿರುದ್ಯೋಗ ಮತ್ತು ಭ್ರಷ್ಟಾಚಾರವು ಪ್ರತಿ ಮನೆಯ ಬಜೆಟ್ ನ್ನು ಕಡಿತಗೊಳಿಸಿದೆ. ಈವೆಂಟ್ ಮ್ಯಾನೇಜ್ಮೆಂಟ್ ಮತ್ತು ಪ್ರಚಾರಕ್ಕಾಗಿ ಹಪಹಪಿಸುತ್ತಿದ್ದ ಬಿಜೆಪಿಗೆ ಇದು ಪಾಠವಾಗಿದೆ ಎಂದು ಯೂರಿ ಅಲೆಮಾಂವ ಹೇಳಿದರು.
ಇತ್ತೀಚೆಗೆ ಬಿಡುಗಡೆಯಾದ ದಿ ಕೇರಳ ಸ್ಟೋರಿ ಸಿನಿಮಾವನ್ನು ಉಲ್ಲೇಖಿಸಿ ಅವರು ಆಡಳಿತ ಪಕ್ಷವನ್ನು ಟೀಕಿಸಿದ್ದರು.
ಇಂಥ ಕಥಾವಸ್ತುವನ್ನು ಆಧರಿಸಿದ ಸಿನಿಮಾಗಳನ್ನು ನೋಡುವುದಕ್ಕಿಂತ ಜನರ ಸಂಕಷ್ಟಗಳತ್ತ ಗಮನ ಹರಿಸುವುದು ಮುಖ್ಯ ಎಂಬುದನ್ನು ಕರ್ನಾಟಕದ ಫಲಿತಾಂಶಗಳು ತೋರಿಸಿವೆ ಎಂದು ಅಲೆಮಾಂವ ಹೇಳಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.