Goa ಪ್ರವಾಸಿಗರಿಗೆ ಮುನ್ನೆಚ್ಚರಿಕೆ ನೀಡಿದ ಗೋವಾ ಸಿಎಂ 


Team Udayavani, Jul 12, 2023, 4:49 PM IST

Goa ಪ್ರವಾಸಿಗರಿಗೆ ಮುನ್ನೆಚ್ಚರಿಕೆ ನೀಡಿದ ಗೋವಾ ಸಿಎಂ 

ಪಣಜಿ: ಗೋವಾ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಸ್ಥಳೀಯರು ಹಾಗೂ ಪ್ರವಾಸಿಗರು ಮಾನ್ಸೂನ್ ಟ್ರ್ಯಾಕಿಂಗ್‍ಗಾಗಿ ವಿವಿಧೆಡೆ ಮುಗಿ ಬೀಳುತ್ತಿದ್ದಾರೆ. ಕಳೆದ 12 ದಿನಗಳಲ್ಲಿ ಗೋವಾದಲ್ಲಿ ನಡೆದ ವಿವಿಧ ಘಟನೆಗಳಲ್ಲಿ ಎಂಟು ಜನ  ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇತ್ತೀಚೆಗೆ ಮೈನಾಪಿ ಜಲಪಾತದಲ್ಲಿ ಇಬ್ಬರು ಹಾಗೂ ಕಸವಳ್ಳಿಯ ಚೆರೆಖಾನಿಯಲ್ಲಿ ಒಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಮಳೆಗಾಲದಲ್ಲಿ ಸಂಭವಿಸುವ ಅಪಘಾತಗಳ ಬಗ್ಗೆ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

ಮಳೆಗಾಲದಲ್ಲಿ ಜಲಪಾತ ಧುಮ್ಮಿಕ್ಕುವ ಸ್ಥಳ ಎಷ್ಟು ಆಳವಾಗಿದೆ ಎಂದು ಅರ್ಥವಾಗುವುದಿಲ್ಲ. ಆದ್ದರಿಂದ ಯುವಕರು ಮದ್ಯದ ಅಮಲಿನಲ್ಲಿ ಜಲಪಾತಗಳ ಮೊರೆ ಹೋಗಬಾರದು. ಅಲ್ಲದೇ ಪ್ರವಾಸಿಗರು ಜಲಪಾತದಲ್ಲಿ ನೀರಿಗೆ ಇಳಿಯದಂತೆ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಸಲಹೆ ನೀಡಿದ್ದಾರೆ. ಇಷ್ಟೇ ಅಲ್ಲದೆಯೇ ಸ್ನಾನಕ್ಕಾಗಿ  ಪ್ರವಾಸಿಗರು ಬೀಚ್‍ನಲ್ಲಿ ನೀರಿಗೆ ಇಳಿಯಬಾರದು ಎಂದೂ ಸಾವಂತ್ ಹೇಳಿದ್ದಾರೆ.

ಬೀಚ್‍ಗಳಲ್ಲಿ ಜನರ ಭದ್ರತಾ ದೃಷ್ಠಿಯಿಂದ ದೃಷ್ಟಿ ಜೀವರಕ್ಷಕಗಳನ್ನು ಸಹ ನಿಯೋಜಿಸಲಾಗಿದೆ. ಸರ್ಕಾರದ ಸುರಕ್ಷತಾ ಪ್ರಯತ್ನಗಳ ಹೊರತಾಗಿಯೂ, ನಾಗರಿಕರು ಅಪಾಯಕಾರಿ ಜಲಾಶಯಗಳಿಗೆ ತೆರಳಬಾರದು ಎಂದು ಮುಖ್ಯಮಂತ್ರಿ ಸಾವಂತ್ ಮನವಿ ಮಾಡಿದ್ದಾರೆ.

ಮೈನಾಪಿ ಜಲಪಾತದ ಅವಘಡದ ನಂತರ ಪ್ರವಾಸಿಗರ ಸುರಕ್ಷತೆಗಾಗಿ ಜಲಪಾತಕ್ಕೆ ಮಾರ್ಗದರ್ಶಕರನ್ನು ಒದಗಿಸುವಂತೆ ಅರಣ್ಯ ಇಲಾಖೆಗೆ ಶಿಫಾರಸು ಮಾಡಲಾಗಿದೆ. ಸಮಾಜ ಕಲ್ಯಾಣ ಸಚಿವ ಸುಭಾಷ್ ಫಲ್ದೇಸಾಯಿ ಶನಿವಾರ ಮತ್ತು ಭಾನುವಾರದಂದು ಜಲಪಾತಗಳಿಗೆ ಆಗಮಿಸುವ  ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ಜೀವರಕ್ಷಕ ಮತ್ತು ಪೊಲೀಸರನ್ನು ನಿಯೋಜಿಸಲು ಶಿಫಾರಸು ಮಾಡಿದರು. ಸದ್ಯ ಪ್ರವಾಸಿಗರಿಗೆ ಬಂದ್ ಆಗಿರುವ ಜಲಪಾತಗಳನ್ನು ಯಾವಾಗ ತೆರೆಯಬೇಕು ಎಂಬ ನಿರ್ಧಾರವನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ತೆಗೆದುಕೊಳ್ಳುತ್ತಾರೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಅಲ್ಲದೆ, ಜಲಪಾತಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗುವುದು ಮತ್ತು ಪ್ರವಾಸಿಗರಿಗೆ ಲೈಫ್ ಜಾಕೆಟ್ಗಳನ್ನು ಒದಗಿಸಬೇಕು ಎಂದು ಸ್ಥಳೀಯ ಪಂಚಾಯತಿಗಳಿಗೆ ಸೂಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.