![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jan 21, 2024, 10:46 AM IST
ಪಣಜಿ: ಹೆಂಡತಿಯನ್ನು ಸಮುದ್ರದಲ್ಲಿ ಮುಳುಗಿಸಿ ಕೊಂಡು ಬಳಿಕ ಅಪಘಾತವೆಂದು ಬಿಂಬಿಸಿದ ದಕ್ಷಿಣ ಗೋವಾದ ಐಷಾರಾಮಿ ಹೋಟೆಲ್ನ ಮ್ಯಾನೇಜರ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಗೌರವ್ ಕಟಿಯಾರ್ ಎಂದು ಗುರುತಿಸಲಾಗಿದೆ.
ಏನಿದು ಪ್ರಕರಣ: ಗೌರವ್ ಕಟಿಯಾರ್ ಅವರು ದಕ್ಷಿಣ ಗೋವಾದ ಕೊಲ್ವಾದಲ್ಲಿ ಮ್ಯಾರಿಯಟ್ ಇಂಟರ್ನ್ಯಾಷನಲ್ ನಿರ್ವಹಿಸುತ್ತಿರುವ ಐಷಾರಾಮಿ ಹೋಟೆಲ್ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ಲಕ್ನೋ ಮೂಲದ ಗೌರವ್ ಗೆ ಸುಮಾರು ಒಂದು ವರ್ಷದ ಹಿಂದೆ ದೀಕ್ಷಾ ಗಂಗ್ವಾರ್ ಅವರ ಜೊತೆ ವಿವಾಹವಾಗಿತ್ತು ಆದರೆ ಇದರ ನಡುವೆ ಗೌರವ್ ಗೆ ಬೇರೊಂದು ಮಹಿಳೆಯ ಜೊತೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ ಆದರೆ ಮದುವೆಯ ಬಳಿಕ ಪತ್ನಿ ತನ್ನ ಸಂಬಂಧಕ್ಕೆ ಅಡ್ಡ ಬರುತ್ತಾಳೆ ಎಂದು ಭಾವಿಸಿ ಆಕೆಯ ಹತ್ಯೆಗೆ ಸಂಚು ರೂಪಿಸಿ ಅದರಂತೆ ಕಳೆದ ಶುಕ್ರವಾರ ಪತ್ನಿ ಜೊತೆ ಗೋವಾ ಸಮುದ್ರದಲ್ಲಿ ಈಜಾಡಲು ತೆರಳಿದ್ದಾರೆ ಈ ವೇಳೆ ಆಕೆಯನ್ನು ನೀರಿನಲ್ಲಿ ಮುಳುಗಿಸಿ ಕೊಲೆಗೈದು ಹಿಂತಿರುಗಿದ್ದಾನೆ.
ಇದನ್ನು ಕಂಡ ಅಲ್ಲಿನ ಸ್ಥಳೀಯರು ಬೀಚ್ ಗೆ ಹೋಗುವಾಗ ಜೊತೆಯಾಗಿ ಹೋಗಿದ್ದು ವಾಪಸ್ಸು ಬರುವಾಗ ಒಬ್ಬಂಟಿಯಾಗಿ ಹಿಂತಿರುತ್ತಿದ್ದನ್ನು ಕಂಡು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದಾದ ಬಳಿಕ ಶುಕ್ರವಾರ ಸಂಜೆ ಪತ್ನಿ ದೀಕ್ಷಾ ಗಂಗ್ವಾರ್ ಮೃತದೇಹ ಸಮುದ್ರದಲ್ಲಿ ಪತ್ತೆಯಾಗಿತ್ತು. ಘಟನಾ ಸ್ಥಳಕ್ಕೆ ಬಂದ ಪೊಲೀಸರ ತನಿಖೆ ವೇಳೆ ದೀಕ್ಷಾ ಅವರ ಪತಿ ಮನೆಯಲ್ಲಿ ನನಗೆ ಗೊತ್ತಿಲ್ಲದ ವೇಳೆ ಆಕೆ ಸಮುದ್ರದಲ್ಲಿ ಈಜಾಡಲು ಹೋಗಿ ಅವಘಡ ಸಂಭವಿಸಿದೆ ಎಂದು ಹೇಳಿದ್ದಾನೆ ಆದರೆ ಇದನ್ನು ಅಲ್ಲಗಳೆದ ಅಲ್ಲಿನ ನಿವಾಸಿಗಳು ಇಬ್ಬರು ಜೊತೆಯಾಗಿ ಸಮುದ್ರಕ್ಕೆ ತೆರಳುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದ್ದಾರೆ ಬಳಿಕ ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಸತ್ಯ ಹೊರಬಿದ್ದಿದೆ.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: Rashmika Mandanna: ಡೀಪ್ ಫೇಕ್ ಮಾಡಿದಾತನ ಬಂಧನ; ನಟಿ ರಶ್ಮಿಕಾ ಹೇಳಿದ್ದೇನು?
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.