Gujarat: ವಂದೇ ಮೆಟ್ರೋ ಹೆಸರು ಬದಲಾಯಿಸಿದ ಸರ್ಕಾರ; ಇನ್ಮುಂದೆ…
Team Udayavani, Sep 16, 2024, 12:47 PM IST
ಹೊಸದಿಲ್ಲಿ: ಬಹು ನಿರೀಕ್ಷಿತ ವಂದೇ ಮೆಟ್ರೋವನ್ನು (Vande Metro) ಭಾರತೀಯ ರೈಲ್ವೇ ಅಧಿಕೃತವಾಗಿ “ನಮೋ ಭಾರತ್ ರಾಪಿಡ್ ರೈಲು” (Namo Bharat Rapid Rail) ಎಂದು ಮರುನಾಮಕರಣ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ಜನ್ಮದಿನದ ಮುನ್ನಾ ದಿನವಾದ ಸೋಮವಾರ (ಸೆ.16) ಗುಜರಾತ್ ನಲ್ಲಿ ದೇಶದ ಮೊದಲ ನಮೋ ಭಾರತ್ ರಾಪಿಡ್ ರೈಲು ಸೇವೆಯನ್ನು ಉದ್ಘಾಟಿಸಲಿದ್ದಾರೆ.
ನಮೋ ಭಾರತ್ ರಾಪಿಡ್ ರೈಲು ಗುಜರಾತ್ ನ ಕಚ್ ಜಿಲ್ಲೆಯಲ್ಲಿರುವ ಭುಜ್ ಪ್ರದೇಶವನ್ನು ರಾಜ್ಯದ ಅತಿದೊಡ್ಡ ನಗರಗಳಲ್ಲಿ ಒಂದಾದ ಅಹಮದಾಬಾದ್ ನೊಂದಿಗೆ ಸಂಪರ್ಕಿಸುತ್ತದೆ. ಇದು ಕೇವಲ ಆರು ಗಂಟೆಗಳಲ್ಲಿ 360 ಕಿಲೋಮೀಟರ್ ದೂರವನ್ನು ಕ್ರಮಿಸುತ್ತದೆ.
ಟಿಕೆಟ್ಗಳನ್ನು ಕಾಯ್ದಿರಿಸದೆ ಜನರಿಗೆ ಈ ರೈಲಿನಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗುತ್ತದೆ. ಅದು ವಾರದ 6 ದಿನಗಳಲ್ಲಿ “ನಮೋ ಭಾರತ್ ರಾಪಿಡ್ ರೈಲುʼ ಸಂಚರಿಸಲಿದೆ ಎಂದು ಪಶ್ಚಿಮ ರೈಲ್ವೇಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ.
ಈ ರೈಲು ತನ್ನ ಮಾರ್ಗದಲ್ಲಿ 9 ನಿಲುಗಡೆಗಳನ್ನು ಹೊಂದಿದೆ. ಸದ್ಯ 12 ಬೋಗಿಗಳ ಮೆಟ್ರೋ ರೈಲಿಗೆ ಚಾಲನೆ ನೀಡಲು ಚಿಂತಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ 16 ಬೋಗಿಗಳ ರೈಲಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.
ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮಾದರಿಯಲ್ಲಿಯೇ “ನಮೋ ಭಾರತ್ ರಾಪಿಡ್ ರೈಲುʼವನ್ನು ನಿರ್ಮಿಸಲಾಗಿದೆ. ಅದರಲ್ಲಿ ಸ್ವಯಂ ಚಾಲಿತ ಬಾಗಿಲುಗಳು ಇರಲಿವೆ. ಜತೆಗೆ ಕೋಚ್ನಲ್ಲಿ 4 ಸ್ವಯಂ ಚಾಲಿತ ಬಾಗಿಲುಗಳನ್ನು ಇರಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಮೊಬೈಲ್ ಚಾರ್ಜ್ ಮಾಡುವ ವ್ಯವಸ್ಥೆಯನ್ನೂ ಭಾರತೀಯ ರೈಲ್ವೇ ಕಲ್ಪಿಸಿಕೊಡಲಿದೆ.
ಮೆಟ್ರೋ ವಿಶೇಷತೆಗಳು
ಎಲ್ಲ ಬೋಗಿಗಳು ಹವಾನಿಯಂತ್ರಕ ವ್ಯವಸ್ಥೆ ಹೊಂದಿರುತ್ತವೆ.
ಸ್ವಯಂಚಾಲಿತ ಬಾಗಿಲುಗಳು, ಪ್ರತಿ ವಂದೇ ಭಾರತ್ ಬೋಗಿಯಲ್ಲಿ ನಾಲ್ಕು ಸ್ವಯಂಚಾಲಿತ ಬಾಗಿಲುಗಳು ಹೊಂದಿವೆ.
ಪ್ರಯಾಣಿಕರ ಲಗೇಜ್ ಇಡಲು ವ್ಯವಸ್ಥೆ
ಮೊಬೈಲ್ ಚಾರ್ಜಿಂಗ್ ಸೌಲಭ್ಯ
“ಕವಚ್’ರೈಲು ಅಪಘಾತ ತಡೆ ಸೌಲಭ್ಯ
ನಮೋ ಭಾರತ್ ರಾಪಿಡ್ ರೈಲು 16 ಬೋಗಿಗಳಲ್ಲಿ 1,150 ಪ್ರಯಾಣಿಕರು ಕುಳಿತುಕೊಂಡು ಪ್ರಯಾಣಿಸಬಹುದು, ಹೆಚ್ಚುವರಿಯಾಗಿ 2,058 ಪ್ರಯಾಣಿಕರು ನಿಂತು ಪ್ರಯಾಣಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.