ಜಮ್ಮು ಕಾಶ್ಮೀರ ಮೇಘ ಸ್ಪೋಟ : ಸರ್ಕಾರ ಪರಿಸ್ಥಿತಿಯನ್ನು ಗಮನಿಸುತ್ತಿದೆ : ಪ್ರಧಾನಿ
Team Udayavani, Jul 28, 2021, 1:13 PM IST
ನವ ದೆಹಲಿ : ಭಾರಿ ಮೇಘಸ್ಫೋಟ ಸಂಭವಿಸಿದ ನಂತರ ಕಾರ್ಗಿಲ್ ನ ಕಿಶ್ಟ್ ವಾರ್ ನಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸಾಧ್ಯತೆಗಳುಳ್ಳ ಎಲ್ಲಾ ನೆರವುಗಳನ್ನು ಪೀಡಿತ ಪ್ರದೇಶಗಳಿಗೆ ನೀಡಲಾಗುತ್ತಿದೆ. ಎಲ್ಲರ ಹಿತ ಕಾಯುವುದಕ್ಕೆ ಸರ್ಕಾರ ಸಂಪೂರ್ಣ ಪ್ರಯತ್ನ ಮಾಡುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಜಮೀನಿನ ಮ್ಯುಟೇಶನ್ ಮಾಡಲು 15 ಲಕ್ಷ ರೂ. ಲಂಚ : ಎಸಿಬಿ ಬಲೆಗೆ ಬಿದ್ದ ತಹಸೀಲ್ದಾರ್
ಇನ್ನು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಮೇಘ ಸ್ಪೋಟದಿಂದ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.
ಜಮ್ಮು ಕಾಶ್ಮೀರದ ಕಿಶ್ಟ್ ವಾರ್ ಪ್ರದೇಶಗಳಲ್ಲಿ ನಡೆದ ಮೇಘ ಸ್ಫೋಟದ ಕಾರಣದಿಂದಾಗಿ ಹಲವಾರು ಮನೆಗಳು ಧರಾಶಾಯಿಯಾಗಿದ್ದು, ಆ ಪರಿಣಾಮವಾಗಿ ಕೆಲವರು ಮೃತಪಟ್ಟಿರುವುದಾಗಿ ವರದಿಯಾಗಿವೆ. ಈಗಾಗಲೇ ಐವರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುಮಾರು 25 ಮಂದಿ ನಾಪತ್ತೆಯಾಗಿದ್ದು, ಪತ್ತೆ ಕಾರ್ಯಾಚರಣೆ ಮುಂದುವರಿದಿದೆ. ಇಂದು(ಬುಧವಾರ, ಜುಲೈ 28) ಮುಂಜಾನೆ 4.30 ರ ಸುಮಾರಿಗೆ ಡಚ್ಚನ್ ತಹಸಿಲ್ ನ ಹೊಂಜಾರ್ ಗ್ರಾಮದಲ್ಲಿ ಮೇಘ ಸ್ಪೋಟ ಸಂಭವಿಸಿದ್ದು, ಪೊಲೀಸರು, ಸೇನೆ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ ಡಿ ಆರ್ ಎಫ್) ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಗುಡ್ ಲಕ್: ಟೋಕಿಯೋದಲ್ಲಿ ಇತಿಹಾಸ ಸೃಷ್ಟಿಸಲು ಪಣ ತೊಟ್ಟ ಬಸ್ ಚಾಲಕನ ಮಗಳು ಪ್ರಣತಿ ನಾಯಕ್
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.