![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 14, 2018, 9:12 AM IST
ಹೊಸದಿಲ್ಲಿ: ಭಾರತದಲ್ಲೇ ಪತ್ನಿಯನ್ನು ತೊರೆದು ವಿದೇಶಗಳಿಗೆ ತೆರಳಿ ಇನ್ನು ತಲೆಮರೆಸಿಕೊಳ್ಳುವುದು ಸಾಧ್ಯವಿಲ್ಲ. ಹಾಗೊಂದು ವೇಳೆ ಮಾಡಿದರೂ ಭಾರತದಲ್ಲಿರುವ ತನ್ನ ಕುಟುಂಬದ ಎಲ್ಲ ಆಸ್ತಿಯನ್ನೂ ಕಳೆದುಕೊಳ್ಳಬೇಕಾಗುತ್ತದೆ.
ಭಾರತದಲ್ಲಿ ಪತ್ನಿ ಬಿಟ್ಟು ನಾಪತ್ತೆಯಾಗುವ ಎನ್ಆರ್ಐ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರ ನಿರ್ಧರಿಸಿದೆ. ಅಪರಾಧ ಕಾನೂನಿನಲ್ಲಿ (ಸಿಆರ್ಪಿಸಿ) ಈ ಸಂಬಂಧ ಸೂಕ್ತ ತಿದ್ದುಪಡಿ ಮಾಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಪ್ರಸ್ತಾವನೆ ಸಲ್ಲಿಸಿದ್ದು, ಇದನ್ನು ವಿದೇಶಾಂಗ ಸಚಿವಾಲ ಯವು ಗೃಹ ಮತ್ತು ಕಾನೂನು ಸಚಿವಾಲ ಯಕ್ಕೆ ಕಳುಹಿಸಿದೆ. ಭಾರತದಲ್ಲೇ ಪತ್ನಿಯನ್ನು ತೊರೆದು ವಿದೇಶಕ್ಕೆ ತೆರಳಿ, ಈ ಸಂಬಂಧದ ಪ್ರಕರಣದಲ್ಲಿ ಮೂರಕ್ಕೂ ಹೆಚ್ಚು ಬಾರಿ ನೋಟಿಸ್ ಕೊಟ್ಟರೂ ಉತ್ತರಿಸದಿದ್ದರೆ ಅವರ ಕುಟುಂಬದವರ ಆಸ್ತಿಯನ್ನು ಮುಟ್ಟುಗೋ ಲು ಹಾಕಿಕೊಳ್ಳಬಹುದು ಎಂಬುದಾಗಿ ಕಾಯ್ದೆ ಯಲ್ಲಿ ತಿದ್ದುಪಡಿ ತರಲು ಪ್ರಸ್ತಾವಿಸಲಾಗಿದೆ.
ಎನ್ಆರ್ಐಗಳು ಪತ್ನಿಯರ ವಿಷಯಕ್ಕೆ ಕೋರ್ಟ್ ನೀಡುವ ಸಮನ್ಸ್ ಅನ್ನು ನಿರ್ಲಕ್ಷಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಸಿಆರ್ಪಿಸಿ ಕಾನೂನು ಬದಲಾದರೆ ಹೀಗೆ ಮಾಡಲಾಗದು. ಮೂರು ಸಮನ್ಸ್ ನೀಡಿದರೂ ಉತ್ತರಿಸದಿದ್ದರೆ, ಅಂಥವರನ್ನು “ತಲೆಮರೆಸಿಕೊಂಡವರು’ ಎಂದು ಪರಿಗಣಿಸ ಲಾಗುತ್ತದೆ ಮತ್ತು ವಿದೇಶಾಂಗ ಇಲಾಖೆಯ ವೆಬ್ಸೈಟ್ನಲ್ಲಿ ತಲೆಮರೆಸಿಕೊಂಡವರ ವಿವರಗಳನ್ನು ಪ್ರಕಟಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೇನಕಾ ಗಾಂಧಿ ಹೇಳಿದ್ದಾರೆ.
ಮಹತ್ವದ ಕ್ರಮ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಅಪ್ರಾಪ್ತರು ಪ್ರಾಪ್ತ ವಯಸ್ಕರಾದ ನಂತರ ಅಥವಾ ಹಲವು ವರ್ಷಗಳ ನಂತರವೂ ಆರೋಪಿಗಳ ವಿರುದ್ಧ ದೂರು ದಾಖಲಿಸಲು ಅವಕಾಶ ಕಲ್ಪಿಸುವ ಬಗ್ಗೆಯೂ ಸಿಆರ್ಪಿಸಿಯಲ್ಲಿ ತಿದ್ದುಪಡಿ ತರಲು ಪ್ರಸ್ತಾವಿ ಸಲಾಗಿದೆ. ಆದರೆ ಇಂಥ ಪ್ರಕರಣಗಳಲ್ಲಿ ಆರೋಪ ಸಾಬೀತಿಗೆ ಸಮಯ ತಗಲುತ್ತದೆ ಎಂದು ಮೇನಕಾ ಅಭಿಪ್ರಾಯಪಟ್ಟಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.