![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 18, 2022, 6:47 AM IST
ಹೊಸದಿಲ್ಲಿ: ಭಾರತ – ಉಕ್ರೇನ್ ನಡುವೆ ಸಂಚರಿಸುವ ವಿಮಾನಗಳಿಗೆ ವಿಧಿಸಲಾಗಿದ್ದ ಮಿತಿಯನ್ನು ಭಾರತ ರದ್ದುಗೊಳಿಸಿದೆ. ಇದರ ಜತೆಗೆ ವಿಮಾನಗಳಲ್ಲಿ ಪ್ರಯಾಣಿಕರಿಗೆ ವಿಧಿಸಲಾಗಿದ್ದ ಆಸನಗಳ ಮಿತಿಯನ್ನೂ ತೆಗೆದುಹಾಕಲಾಗಿದೆ.
“ಉಕ್ರೇನ್ನಲ್ಲಿರುವ ಎಲ್ಲ ಭಾರತೀಯರನ್ನು ತತ್ಕ್ಷಣವೇ ತೆರವುಗೊಳಿಸುವ ಆಲೋಚನೆ ಸದ್ಯಕ್ಕಿಲ್ಲ. ಆದರೂ, ಅವರ ಸುರಕ್ಷೆಗೆ ಹೆಚ್ಚಿನ ಆದ್ಯತೆ ನೀಡುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಭಾರತ ಹೇಳಿದೆ.
ಉಕ್ರೇನ್-ರಷ್ಯಾ ನಡುವೆ ಯುದ್ಧ ನಡೆಯುವ ಭೀತಿ ಆವರಿಸಿರುವುದರಿಂದ ಉಕ್ರೇನ್ನಲ್ಲಿರುವ ಭಾರತೀಯರು ಹೆಚ್ಚೆಚ್ಚು ಸಂಖ್ಯೆಯಲ್ಲಿ ಭಾರತಕ್ಕೆ ಆದಷ್ಟು ಬೇಗನೇ ಆಗಮಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇತ್ತೀಚೆಗೆ, ಕೊರೊನಾ ನಿಬಂಧನೆಗಳನ್ವಯ, ಎರಡು ದೇಶಗಳ ನಡುವೆ ಸಂಚರಿಸುವ ವಿಮಾನಗಳ ಸಂಖ್ಯೆಯನ್ನು ಇಳಿಕೆ ಮಾಡಲಾಗಿತ್ತು.
ಅಮೆರಿಕ ವಿಶ್ವಾಸ: ರಷ್ಯಾ- ಉಕ್ರೇನ್ ಯುದ್ಧ ಆರಂಭವಾದರೆ ಭಾರತ, ತನ್ನ ಬೆಂಬಲಕ್ಕೆ ನಿಲ್ಲುತ್ತದೆ ಎಂಬ ವಿಶ್ವಾಸವನ್ನು ಅಮೆರಿಕ ವ್ಯಕ್ತಪಡಿಸಿದೆ.
ಹೆಚ್ಚುವರಿ 7 ಸಾವಿರ ತುಕಡಿ: ಉಕ್ರೇನ್ ಗಡಿಯಲ್ಲಿ ತಾನು ನಿಯೋಜಿಸಿರುವ ಸೇನೆಗೆ ಹೆಚ್ಚುವರಿಯಾಗಿ 7 ಸಾವಿರ ಸೇನಾ ತುಕಡಿಗಳನ್ನು ರಷ್ಯಾ ನಿಯೋಜಿಸಿದೆ ಎಂದು ಅಮೆರಿಕ ಹೇಳಿದೆ. ಇತ್ತೀಚೆಗೆ, ಉಕ್ರೇನ್ ಗಡಿಯಿಂದ ತನ್ನ ಸೇನೆಯನ್ನು ಹಂತಹಂತವಾಗಿ ಹಿಂದಕ್ಕೆ ಕರೆಯಿಸಿಕೊಳ್ಳುತ್ತಿರುವು ದಾಗಿ ರಷ್ಯಾ ಪ್ರಕಟಿಸಿತ್ತು. ಇದರ ಹೊರತಾಗಿಯೂ ಮತ್ತಷ್ಟು ಸೇನಾ ತುಕಡಿಗಳನ್ನು ಗಡಿಯಲ್ಲಿ ನಿಯೋಜಿಸಲಾಗಿದೆ ಎಂದು ಅಮೆರಿಕ ಹೇಳಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.