ಪ್ರಾಚ್ಯವಸ್ತು ಸಂರಕ್ಷಣೆಗೆ ವಿಶ್ವದರ್ಜೆಯ ತಂತ್ರಜ್ಞಾನ

"ನ್ಯೂ ನ್ಯಾಷನಲ್‌ ಮ್ಯೂಸಿಯಂ ಆಫ್ ಇಂಡಿಯಾ'ದ ನೀಲನಕ್ಷೆ ಸಿದ್ಧ

Team Udayavani, Oct 17, 2021, 6:30 AM IST

ಪ್ರಾಚ್ಯವಸ್ತು ಸಂರಕ್ಷಣೆಗೆ ವಿಶ್ವದರ್ಜೆಯ ತಂತ್ರಜ್ಞಾನ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ರಾಷ್ಟ್ರೀಯ ವಸ್ತು ಸಂಗ್ರಹಾಲಯದಲ್ಲಿರುವ ಸುಮಾರು 1.95 ಲಕ್ಷ ಪುರಾತನ ವಸ್ತುಗಳನ್ನು ಜಾಗರೂಕವಾಗಿ ಸಂರಕ್ಷಿಸುವಂಥ ವಿಶ್ವದರ್ಜೆಯ ತಂತ್ರಜ್ಞಾನವೊಂದನ್ನು ಅಳವಡಿಸಲು ಕೇಂದ್ರ ಸರ್ಕಾರ ಯೋಜಿಸಿದೆ.

ಹೊಸದಾಗಿ ನಿರ್ಮಾಣವಾಗಲಿರುವ “ನ್ಯೂ ನ್ಯಾಷನಲ್‌ ಮ್ಯೂಸಿಯಂ ಆಫ್ ಇಂಡಿಯಾ’ದಲ್ಲಿ ಈ ವಿಶೇಷತೆಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ.

ಸ್ಥಳಾಂತರ ಏಕೆ?
ನವ ಸಂಸತ್‌ ಭವನ, ನೂತನ ಶಕ್ತಿಕೇಂದ್ರ, ಉಪರಾಷ್ಟ್ರಪತಿ ಹಾಗೂ ಪ್ರಧಾನಿಗೆ ನೂತನ ನಿವಾಸ ನಿರ್ಮಾಣ ಸೇರಿದಂತೆ ಬಹುದ್ದೇಶದ “ಸೆಂಟ್ರಲ್‌ ವಿಸ್ತಾ ಯೋಜನೆ’ಯ ಕಾಮಗಾರಿ ಪ್ರಗತಿಯಲ್ಲಿದೆ. ಈ ಯೋಜನೆ ರಾಷ್ಟ್ರಪತಿ ಭವನದಿಂದ ಜನಪಥ್‌ವರೆಗಿನ ಸುಮಾರು 3 ಕಿ.ಮೀ. ವ್ಯಾಪ್ತಿಯಲ್ಲಿ ಹರಡಿರುವುದರಿಂದ ಜನಪಥ್‌ನಲ್ಲೇ ಇರುವ ರಾಷ್ಟ್ರೀಯ ವಸ್ತುಸಂಗ್ರಹಾಲಯವನ್ನು ಸ್ಥಳಾಂತರಿಸಲು ನಿರ್ಧರಿಸಲಾಗಿದೆ.

ಎಲ್ಲಿಗೆ ಸ್ಥಳಾಂತರ?:
ಯೋಜನೆಯ ನೀಲನಕ್ಷೆಯ ಅನುಸಾರ, ಈಗಿರುವ ಸಂಸತ್‌ ಭವನದ ನೌರ್ತ್‌ ಮತ್ತು ಸೌತ್‌ ಬ್ಲಾಕ್‌ಗಳ ನಡುವಿನ 5 ಲಕ್ಷ ಚದುರಡಿ ವಿಸ್ತೀರ್ಣದ ಜಾಗದಲ್ಲಿ ಹೊಸ ರಾಷ್ಟ್ರೀಯ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.

ಇದನ್ನೂ ಓದಿ:ಮಾಜಿ ಪಿಎಂ ಮನಮೋಹನ ಸಿಂಗ್‌ಗೆ ಡೆಂಗ್ಯೂ,ಆರೋಗ್ಯ ಸ್ಥಿರ

ಹೊಸ ಸಂಗ್ರಹಾಲಯದ ವಿಶೇಷತೆ
– ಈಗಿರುವ 2 ಲಕ್ಷ ಚದುರಡಿ ವಿಸ್ತೀರ್ಣವಿರುವ ವಸ್ತುಸಂಗ್ರಹಾಲಯ ಮುಂದೆ 5 ಲಕ್ಷ ಚದುರಡಿ ವಿಸ್ತೀರ್ಣದ ಕಟ್ಟಡಕ್ಕೆ ಸ್ಥಳಾಂತರ.
– ಮುಂದಿನ ನೂರು ವರ್ಷಗಳಲ್ಲಿ ಸಂಗ್ರಹಿಸಲಾಗುವ ಪುರಾತನ ಅಥವಾ ಚಾರಿತ್ರಿಕವಾಗಿ ಮಹತ್ವವೆನಿಸುವ ವಸ್ತುಗಳಿಗೂ ಸ್ಥಳಾವಕಾಶ
– ಜರ್ಮನಿ, ಫ್ರಾನ್ಸ್‌, ನೆದರ್ಲೆಂಡ್‌ ಸೇರಿದಂತೆ ಹಲವು ಮುಂದುವರಿದ ದೇಶಗಳಲ್ಲಿರುವಂಥ ಕೇಂದ್ರೀಕೃತ ಸಂಗ್ರಹಾಗಾರ ತಂತ್ರಜ್ಞಾನ ಅಳವಡಿಕೆ
– ಹೊಸ ಸಂಗ್ರಹಾಲಯದಲ್ಲಿ ಇಂದಿರಾಗಾಂಧಿ ನ್ಯಾಷನಲ್‌ ಸೆಂಟರ್‌ ಫಾರ್‌ ದ ಆರ್ಟ್ಸ್ ಹಾಗೂ ನ್ಯಾಷನಲ್‌ ಆಕೈವ್ಸ್‌ನಲ್ಲಿನ ವಸ್ತುಗಳು, ಪುಸ್ತಕಗಳೂ ಹೊಸ ಸಂಗ್ರಹಾಲಯಕ್ಕೆ ಸೇರುವ ಸಾಧ್ಯತೆ.

1.96  ಲಕ್ಷ – ಈಗಿನ ರಾಷ್ಟ್ರೀಯ ವಸ್ತುಸಂಗ್ರಹಾಲಯದಲ್ಲಿ ಇರುವ ಪುರಾತನ ವಸ್ತುಗಳು
2 ಲಕ್ಷ ಚದರಡಿ – ಈಗಿರುವ ವಸ್ತುಸಂಗ್ರಹಾಲಯದ ವಿಸ್ತೀರ್ಣ
5 ಲಕ್ಷ ಚದರಡಿ – ಹೊಸ ವಸ್ತುಸಂಗ್ರಹಾಲಯದಲ್ಲಿ ಇರುವ ಸ್ಥಳಾವಕಾಶ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.