ಭಾರತಕ್ಕೆ ಎಂದೂ ಅಭದ್ರತೆಯ ಸ್ಥಿತಿ ಒದಗಿರಲಿಲ್ಲ : ಕೇಂದ್ರದ ವಿರುದ್ಧ ಗಾಂಧಿ ಟ್ವೀಟಾಕ್ರೋಶ  


Team Udayavani, Jul 14, 2021, 5:58 PM IST

govt-weakening-country-rahul-gandhi-remark-on-chinese-military-has-again-crossed-the-lac

ನವ ದೆಹಲಿ : ಭಾರತಕ್ಕೆ ಎಂದೂ ಈ ರೀತಿಯ ಅಭದ್ರತೆಯ ಸ್ಥಿತಿ ಒದಗಿರಲಿಲ್ಲ. ಕೇಂದ್ರ ಸರ್ಕಾರವು ದೇಶವನ್ನು ದುಸ್ಥಿತಿಗೆ ಕೊಂಡೊಯ್ದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ತಮ್ಮ, ಅಧಿಕೃತ ಟ್ವೀಟರ್ ಖಾತೆಯ ಮೂಲಕ ಟ್ವೀಟ್ ಮಾಡಿರುವ ಗಾಂಧಿ,  ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ ಎ) ಪೂರ್ವ ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆಯನ್ನು (ಎಲ್‌ ಎಸಿ) ಮತ್ತೆ ದಾಟಿದ್ದು, ಭಾರತ ಹಾಗೂ ಚೀನಾ ದೇಶಗಳ ನಡುವೆ ಘರ್ಷಣೆ ನಡೆದಿದೆ ಎಂಬ ಮಾಧ್ಯಮ ವರದಿಯ ತುಣುಕನ್ನು ಉಲ್ಲೇಖಿಸಿ ಕೇಂದ್ರದ ವಿರುದ್ಧ ಟ್ವೀಟ್ ದಾಳಿ ಮಾಡಿದ್ದಾರೆ.

ಇದನ್ನೂ ಓದಿ : ಪೋಸ್ಟ್ ಆಫೀಸ್ ತೆರೆಯಲು ಲಕ್ಷಾಂತರ ರೂ ಹೂಡಿಕೆ ಮಾಡಬೇಕೆಂದೇನಿಲ್ಲ : ಇಲ್ಲಿದೆ ಮಾಹಿತಿ

‘ವಿದೇಶ ಹಾಗೂ ರಕ್ಷಣಾ ನೀತಿಯನ್ನು ಭಾರತ ಸರ್ಕಾರವು ದೇಶೀಯ ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡುತ್ತಿದೆ, ನಮ್ಮ ದೇಶವನ್ನು ದುರ್ಬಲಗೊಳಿಸಿದೆ. ಭಾರತ ಎಂದಿಗೂ ಇಷ್ಟೊಂದು ಅಭದ್ರ ಸ್ಥಿತಿ ಎದುರಿಸಿರಲಿಲ್ಲ’ ಎಂದು ಅವರು ಕಿಡಿ ಕಾರಿದ್ದಾರೆ.


ಏತನನ್ಮಧ್ಯೆ,  ಪೂರ್ವ ಲಡಾಖ್ ನಲ್ಲಿ ಚೀನಾ ಪಡೆ ಭಾರತ ಸೇನೆ ಜತೆ ಮತ್ತೆ ಘರ್ಷಣೆ ನಡೆಸಿದೆ ಎಂಬ ಮಾಧ್ಯಮಗಳ ವರದಿಯನ್ನು ಭಾರತೀಯ ಸೇನಾ ಪಡೆ ಬುಧವಾರ(ಜುಲೈ14) ನಿರಾಕರಿಸಿದೆ.

ನೈಜತೆಯನ್ನು ತಿಳಿಯದೇ ಈ ಸುದ್ದಿಯನ್ನು ಪ್ರಕಟಿಸಲಾಗಿದೆ ಎಂದು ಸೇನೆ ತಿಳಿಸಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದೆ. ಇದೊಂದು ಸುಳ್ಳು ಮಾಹಿತಿಯಾಗಿದೆ ಎಂದು ವಿವರಿಸಿದೆ. ಘರ್ಷಣೆಯ ಮೂಲಕ ಚೀನಾದೊಂದಿಗಿನ ಒಪ್ಪಂದ ಮುರಿದು ಬಿದ್ದಿರುವುದಾಗಿ ಉಲ್ಲೇಖಿಸಿರುವ ಸುದ್ದಿ ಸುಳ್ಳು ಮತ್ತು ಆಧಾರರಹಿತವಾದದ್ದು ಎಂದು ಸೇನೆ ಹೇಳಿದೆ.

ಈ ವರ್ಷದ ಫೆಬ್ರವರಿಯಿಂದ ಸೇನೆಯನ್ನು ಹಿಂಪಡೆಯುವ ಒಪ್ಪಂದದ ನಂತರ ಕೈಗೊಂಡ ನಿರ್ಧಾರದ ಬಳಿಕ ಯಾವುದೇ ಪ್ರದೇಶಗಳಲ್ಲಿ ಉಭಯ ಸೇನೆಗಳು ಅತಿಕ್ರಮಿಸುವ ಪ್ರಯತ್ನ ನಡೆಸಿಲ್ಲ ಎಂದು ತಿಳಿಸಿದೆ. ವರದಿಯಲ್ಲಿ ತಿಳಿಸಿರುವಂತೆ ಗಾಲ್ವಾನ್ ಅಥವಾ ಬೇರೆ ಯಾವುದೇ ಪ್ರದೇಶದಲ್ಲಿ ಘರ್ಷಣೆಗಳು ನಡೆದಿಲ್ಲ ಎಂದು ಸ್ಪಷ್ಟ ಪಡಿಸಿದೆ.

ಇದನ್ನೂ ಓದಿ : ಕೇಂದ್ರ ಸರ್ಕಾರಿ ನೌಕರರಿಗೆ,ಪಿಂಚಣಿದಾರರಿಗೆ ಗುಡ್ ನ್ಯೂಸ್:ತುಟ್ಟಿಭತ್ಯೆ ಶೇ.28ರಷ್ಟು ಹೆಚ್ಚಳ

ಟಾಪ್ ನ್ಯೂಸ್

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?

Crime-2-Sulya

Sulya: ವಾರಂಟ್‌ ಆರೋಪಿ ಪರಾರಿ ಪ್ರಕರಣ; ಆರೋಪಿಯ ಮಾಹಿತಿಗೆ ಪೊಲೀಸರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Shabarimale

Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

Maldives Muizzu

Controversial Maldives President ಭಾರತಕ್ಕೆ !; ಇಂದು ರಾಷ್ಟ್ರಪತಿ, ಪ್ರಧಾನಿ ಮೋದಿ ಭೇಟಿ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

3

Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು

POlice

Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.