![1-vijayendra](https://www.udayavani.com/wp-content/uploads/2024/07/1-vijayendra-415x277.jpg)
ಗುಜರಾತ್ ಕಾಂಗ್ರೆಸ್ ಶಾಸಕನ ಮೇಲೆ ಬಿಜೆಪಿ ಕಾರ್ಯಕರ್ತರ ಗುಂಪಿನಿಂದ ಹಲ್ಲೆ
ಕೇಂದ್ರದ ಯೋಜನೆ ವಿರುದ್ಧ ಆಂದೋಲನದ ನೇತೃತ್ವ ; ದಾಳಿಯನ್ನು ಖಂಡಿಸಿದ ರಾಹುಲ್ ಗಾಂಧಿ
Team Udayavani, Oct 9, 2022, 4:38 PM IST
![bjp-congress](https://www.udayavani.com/wp-content/uploads/2022/10/bjp-congress-620x330.jpg)
ನವಸಾರಿ : ಗುಜರಾತ್ ಕಾಂಗ್ರೆಸ್ ಶಾಸಕ ಮತ್ತು ಬುಡಕಟ್ಟು ನಾಯಕ ಅನಂತ್ ಪಟೇಲ್ ಅವರ ಮೇಲೆ ನವಸಾರಿ ಜಿಲ್ಲೆಯಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕಾರಿ ಮತ್ತು ಬೆಂಬಲಿಗರು ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಭಾನುವಾರ ನಸುಕಿನಲ್ಲಿ ಖೇರ್ಗಾಮ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿರುವ ಸ್ಥಳೀಯ ಬಿಜೆಪಿ ಮುಖಂಡ ಬಾಬು ಅಹಿರ್ ಮತ್ತು ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪಟೇಲ್ ಆರೋಪಿಸಿದ್ದಾರೆ.
ಇದನ್ನೂ ಓದಿ : ತರೂರ್ ರೊಂದಿಗಿನ ಸ್ಪರ್ಧೆ ದೇಶ ಮತ್ತು ಪಕ್ಷದ ಒಳಿತಿಗಾಗಿ: ಮಲ್ಲಿಕಾರ್ಜುನ ಖರ್ಗೆ
ಗುಜರಾತ್ನಲ್ಲಿ ಕೇಂದ್ರದ ಪಾರ್ -ತಾಪಿ-ನರ್ಮದಾ ಲಿಂಕ್ ಯೋಜನೆಯ ವಿರುದ್ಧ ಆಂದೋಲನದ ನೇತೃತ್ವ ವಹಿಸಿರುವ ಪಟೇಲ್ ಮೇಲಿನ ದಾಳಿಯನ್ನು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಖಂಡಿಸಿ’ಇದು ಬಿಜೆಪಿ ಸರ್ಕಾರದ ಕೋಪದ ಪರಿಣಾಮವಾಗಿದೆ’ ಎಂದು ಹೇಳಿದ್ದಾರೆ.
ಆದಾಗ್ಯೂ, ಬಿಜೆಪಿಯು ದಾಳಿಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದು,’ಇದು ಅನುಕಂಪ ಗಳಿಸುವ ಸಾಹಸ, ತನಿಖೆಯ ಅಗತ್ಯವಿದೆ’ ಎಂದು ಹೇಳಿದೆ.
ಎಫ್ಐಆರ್ನ ಪ್ರಕಾರ, ನವಸಾರಿಯ ವಂಸ್ಡಾದ ಶಾಸಕ ಪಟೇಲ್ ಅವರು ಶನಿವಾರ ಸಂಜೆ ಸಭೆಗೆ ತೆರಳುತ್ತಿದ್ದಾಗ ಖೇರ್ಗಾಮ್ನಲ್ಲಿ ಸುಮಾರು 50 ಜನರ ಗುಂಪು ದಾಳಿ ಮಾಡಿದೆ ಮತ್ತು ಅವರ ವಾಹನವನ್ನು ಹಾನಿಗೊಳಿಸಿದೆ.
ಅಹಿರ್ ಹೊರತುಪಡಿಸಿ, ಎಫ್ಐಆರ್ನಲ್ಲಿ ಇತರ ಐವರು ಆರೋಪಿಗಳು ಮತ್ತು ದಾಳಿಯ ಹಿಂದೆ 40-45 ಜನರ ಗುಂಪನ್ನು ಹೆಸರಿಸಲಾಗಿದೆ. ಗರ್ಬಾ ಕಾರ್ಯಕ್ರಮವೊಂದರಲ್ಲಿ ತನ್ನ ಬೆಂಬಲಕ್ಕಾಗಿ ಹಾಡಿದ ಹಾಡಿನ ಬಗ್ಗೆ ಆರೋಪಿ ಬಿಜೆಪಿ ನಾಯಕ ಅಸಮಾಧಾನಗೊಂಡಿದ್ದರಿಂದ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪಟೇಲ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಟ್ರಾಫಿಕ್ನಿಂದಾಗಿ ವಾಹನ ನಿಲ್ಲಿಸಿದಾಗ ಆರೋಪಿಗಳು ತಮ್ಮ ವಾಹನದ ಬಳಿಗೆ ಬಂದು ಹೊರಗೆ ಬರುವಂತೆ ಹೇಳಿದರು ಎಂದು ಶಾಸಕರು ಹೇಳಿದ್ದಾರೆ. ಅವರು ನಿರಾಕರಿಸಿದಾಗ, ಅವರು ಬಾಗಿಲು ತೆರೆಯಲು ಕಾರಿನ ಗಾಜು ಒಡೆದರು. ಆರೋಪಿಗಳು ಹಲವು ಬಾರಿ ಗುದ್ದಿದ್ದಾರೆ ಮತ್ತು ನಿಂದನೆಯನ್ನೂ ಮಾಡಿದ್ದಾರೆ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ. ಪಟೇಲ್ ಅವರ ಬಲಗಣ್ಣಿಗೆ ಗಾಯಗಳಾಗಿವೆ.
ಈ ವರ್ಷದ ಡಿಸೆಂಬರ್ನಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
![1-vijayendra](https://www.udayavani.com/wp-content/uploads/2024/07/1-vijayendra-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-PTI](https://www.udayavani.com/wp-content/uploads/2024/07/1-PTI-150x91.jpg)
Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್
![1-anurag](https://www.udayavani.com/wp-content/uploads/2024/07/1-anurag-150x89.jpg)
Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್
![1-a-baaba](https://www.udayavani.com/wp-content/uploads/2024/07/1-a-baaba-150x84.jpg)
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 121ಕ್ಕೆ
![1993 Mumbai riot accused arrested after 31 years](https://www.udayavani.com/wp-content/uploads/2024/07/riot-150x83.jpg)
Mumbai; 31 ವರ್ಷ ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ
![Annamalai to resign as Tamil Nadu BJP president?](https://www.udayavani.com/wp-content/uploads/2024/07/annamalai-150x83.jpg)
Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?
MUST WATCH
ಹೊಸ ಸೇರ್ಪಡೆ
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
![vijayapura](https://www.udayavani.com/wp-content/uploads/2024/07/vijayapura-2-150x90.jpg)
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
![1-raju](https://www.udayavani.com/wp-content/uploads/2024/07/1-raju-150x85.jpg)
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
![1-PTI](https://www.udayavani.com/wp-content/uploads/2024/07/1-PTI-150x91.jpg)
Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.