ಪಕ್ಷೇತರರ ಮೊರೆ; ಹಿಮಾಚಲದಲ್ಲಿ ಅತಂತ್ರ ಫ‌ಲಿತಾಂಶದ ಸುಳಿವು

ಸ್ವತಂತ್ರ ಅಭ್ಯರ್ಥಿಗಳ ಸಂಪರ್ಕಕ್ಕೆ ಮುಂದಾದ ಪಕ್ಷಗಳು

Team Udayavani, Dec 7, 2022, 7:05 AM IST

ಪಕ್ಷೇತರರ ಮೊರೆ; ಹಿಮಾಚಲದಲ್ಲಿ ಅತಂತ್ರ ಫ‌ಲಿತಾಂಶದ ಸುಳಿವು

ನವದೆಹಲಿ: ಎಲ್ಲ ಮತಗಟ್ಟೆ ಸಮೀಕ್ಷೆಗಳೂ ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿಗೆ ಪ್ರಚಂಡ ಬಹುಮತ ಸಿಗಲಿದೆ ಎಂದು ಹೇಳಿವೆ. ಆದರೆ, ಹಿಮಾಚಲಪ್ರದೇಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಪ್ರಬಲ ಪೈಪೋಟಿಯಿದ್ದು, ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆಯೇ ಹೆಚ್ಚು ಎಂದಿವೆ. ಸಮೀಕ್ಷೆಯ ವಿವರಗಳು ಬಹಿರಂಗವಾಗುತ್ತಿದ್ದಂತೆಯೇ, ದೇವಭೂಮಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಫೋಟೋ ಫಿನಿಷ್‌ ಫ‌ಲಿತಾಂಶವೇನಾದರೂ ಬಂದರೆ, ಪಕ್ಷೇತರರನ್ನು ತಮ್ಮತ್ತ ಸೆಳೆಯಲು ಬಿಜೆಪಿ ಮತ್ತು ಕಾಂಗ್ರೆಸ್‌ ಮುಂದಾಗಿವೆ. ಈ ನಿಟ್ಟಿನಲ್ಲಿ ಸೋಮವಾರ ರಾತ್ರಿಯಿಂದಲೇ ಸಿದ್ಧತೆಗಳು ಆರಂಭವಾಗಿವೆ. ಬಹಿರಂಗವಾಗಿ ಹೇಳಿಕೆ ನೀಡುವಾಗ ಎರಡೂ ಪಕ್ಷಗಳು, “ಗೆಲ್ಲುವುದು ನಾವೇ’ ಎಂದು ಹೇಳುತ್ತಿದ್ದರೂ, ಒಳಗಿಂದೊಳಗೇ ಆತಂಕ ಮನೆ ಮಾಡಿದೆ. ಹೀಗಾಗಿ, ಅತಂತ್ರ ಸ್ಥಿತಿ ಎದುರಾದರೆ ಸ್ವತಂತ್ರ ಶಾಸಕರನ್ನು ಹೇಗೆ ತಮ್ಮತ್ತ ಒಲಿಸಿಕೊಳ್ಳಬೇಕು ಎಂಬ ಕುರಿತು ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರು ಕಾರ್ಯತಂತ್ರ ರೂಪಿಸುತ್ತಿದ್ದಾರೆ.

ಹಿಮಾಚಲ ಸಿಎಂ ಜೈರಾಂ ಠಾಕೂರ್‌ ಅವರು ತಮ್ಮ ಕ್ಷೇತ್ರ ಸೆರಾಜ್‌ನಲ್ಲಿ ಉಳಿಯುವ ಬದಲು, ನೇರವಾಗಿ ಶಿಮ್ಲಾಗೆ ಹೋಗಿದ್ದಾರೆ. ಅಲ್ಲೇ ಕುಳಿತು ರಾಜಕೀಯ ಲೆಕ್ಕಾಚಾರ ಹಾಕಲಾರಂಭಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಸುರೇಶ್‌ ಕಶ್ಯಪ್‌ ಅವರು ದೆಹಲಿಗೆ ಧಾವಿಸಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಇನ್ನೊಂದೆಡೆ, ಕಾಂಗ್ರೆಸ್‌ ಕೂಡ ಪಕ್ಷೇತರರಾಗಿ ಸ್ಪರ್ಧಿಸಿರುವ ತನ್ನ ಬಂಡಾಯ ನಾಯಕರನ್ನು ಸಂಪರ್ಕಿಸಿ ಮಾತುಕತೆ ಆರಂಭಿಸಿದೆ.

ಇದೇ ವೇಳೆ, ಸೋಮವಾರ ನಡೆದ ಗುಜರಾತ್‌ನ 2ನೇ ಹಂತದ ಮತದಾನದಲ್ಲಿ ಒಟ್ಟು ಶೇ.65.22ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. 2017ರ ಚುನಾವಣೆಯಲ್ಲಿ ಶೇ.69.99ರಷ್ಟು ಮತದಾನ ದಾಖಲಾಗಿತ್ತು.

ಮತಗಟ್ಟೆ ಸಮೀಕ್ಷೆಗಳ ವರದಿಯು ಗುಜರಾತಿಗರಿಗೆ ಪ್ರಧಾನಿ ಮೋದಿ ಮೇಲೆ ಪ್ರೀತಿ ಎಷ್ಟಿದೆ ಎಂಬುದನ್ನು ತೋರಿಸಿದೆ. ರಾಜ್ಯದಲ್ಲಿ ಆಮ್‌ ಆದ್ಮಿ ಪಕ್ಷ ಒಂದೇ ಒಂದು ಸ್ಥಾನದಲ್ಲೂ ಜಯ ಗಳಿಸುವುದಿಲ್ಲ.
– ಯಮಾಲ್‌ ವ್ಯಾಸ್‌, ಗುಜರಾತ್‌ ಬಿಜೆಪಿ ವಕ್ತಾರ

ಬಿಜೆಪಿ ಬಾಹುಳ್ಯದ ರಾಜ್ಯದಲ್ಲಿ ಹೊಸ ಪಕ್ಷವೊಂದು ಶೇ.15-20 ಮತಗಳನ್ನು ಪಡೆಯುತ್ತದೆ ಎಂದರೆ, ಅದು ಉತ್ತಮ ಸಾಧನೆಯೇ ಸರಿ. ಯಾವುದಕ್ಕೂ ಮತ ಎಣಿಕೆಯ ದಿನದವರೆಗೂ ಕಾಯೋಣ.
– ಅರವಿಂದ ಕೇಜ್ರಿವಾಲ್‌, ಆಪ್‌ ನಾಯಕ

ಸಮೀಕ್ಷೆಗಳ ಅಂದಾಜು ನಿಜವಾದರೆ, ಅದು ಕಾಂಗ್ರೆಸ್‌ ಪಕ್ಷಕ್ಕೆ ಅತ್ಯಂತ ನಿರಾಸೆಯ ಸಂಗತಿ. ವಿಭಜನೆಯ ರಾಜಕೀಯದಿಂದಷ್ಟೇ ಬಿಜೆಪಿ ಗೆಲ್ಲುತ್ತಿದೆ. ಜತೆಗೆ ಹಣ ಬಲವೂ ಕೆಲಸ ಮಾಡಿದೆ.
– ಅಭಿಷೇಕ್‌ ಮನು ಸಿಂಘ್ವಿ, ಕಾಂಗ್ರೆಸ್‌ ನಾಯಕ

ಸುಳ್ಳು ಟ್ವೀಟ್‌: ಟಿಎಂಸಿ ವಕ್ತಾರ ವಶಕ್ಕೆ
ಪ್ರಧಾನಿ ಮೋದಿಗೆ ಸಂಬಂಧಿಸಿ ಸುಳ್ಳು ಮಾಹಿತಿಯಿರುವ ಟ್ವೀಟ್‌ವೊಂದನ್ನು ಬೆಂಬಲಿಸಿದ್ದ ಆರೋಪದಲ್ಲಿ ಟಿಎಂಸಿ ರಾಷ್ಟ್ರೀಯ ವಕ್ತಾರ ಸಾಕೇತ್‌ ಗೋಖಲೆ ಅವರನ್ನು ಗುಜರಾತ್‌ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ. “ಮೊರ್ಬಿ ತೂಗುಸೇತುವೆ ದುರಂತದ ಬಳಿಕ ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲು 30 ಕೋಟಿ ರೂ. ವೆಚ್ಚ ಮಾಡಲಾಗಿತ್ತು ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆಯಡಿ ತಿಳಿದುಬಂದಿದೆ’ ಎಂದು ಬರೆಯಲಾಗಿದ್ದ ಪತ್ರಿಕೆಯ ಕ್ಲಿಪ್ಪಿಂಗ್‌ವೊಂದನ್ನು ಗೋಖಲೆ ಟ್ವಿಟರ್‌ನಲ್ಲಿ ಅಪ್‌ಲೋಡ್‌ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ರಾಜಸ್ಥಾನದ ಜೈಪುರದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಗೋಖಲೆ ಬಂಧನವನ್ನು ಖಂಡಿಸಿರುವ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, “ಇದು ಪ್ರತೀಕಾರದ ಕ್ರಮ. ಪ್ರಧಾನಿ ಮೋದಿ ವಿರುದ್ಧ ಟ್ವೀಟ್‌ ಮಾಡಿದ್ದಕ್ಕಾಗಿ ಬಂಧನವೇ? ನನ್ನ ವಿರುದ್ಧವೂ ಜನ ಟ್ವೀಟ್‌ ಮಾಡುತ್ತಾರೆ’ ಎಂದಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.