ವಿಶ್ವಬ್ಯಾಂಕ್‌ ವರದಿಗೆ ಗುಜರಾತ್‌ ರಂಗು


Team Udayavani, Nov 2, 2017, 6:40 AM IST

MODI.jpg

ನವದೆಹಲಿ/ಜಂಬುಸಾರ್‌: ವಿಶ್ವಬ್ಯಾಂಕ್‌ನ ಉದ್ದಿಮೆ  ಸ್ನೇಹಿ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 100ನೇ ಸ್ಥಾನ ಪಡೆದಿರುವ ವಿಚಾರ ಈಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟಿÉ ಮತ್ತು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಟ್ವಿಟರ್‌ನಲ್ಲಿ ಮತ್ತು ಗುಜರಾತ್‌ನಲ್ಲಿ ಚುನಾವಣಾ ಪ್ರಚಾರ ವೇಳೆ ವರದಿಯನ್ನು ಹಿಗ್ಗಾಮುಗ್ಗಾ ಟೀಕಿಸಿದ್ದಾರೆ. ನೋಟು ಅಮಾನ್ಯ ಮತ್ತು ಜಿಎಸ್‌ಟಿಯಿಂದಾಗಿ ದೇಶಕ್ಕೆ ಸಮಸ್ಯೆಯಾಗಿದೆ ಎಂದು ದೂರಿದ ರಾಹುಲ್‌, ಸಮಸ್ಯೆ ಏನು ಎಂದು ತಿಳಿಯಲು ಜೇಟಿÉ ಸಣ್ಣ ಉದ್ದಿಮೆದಾರರನ್ನು ಖುದ್ದಾಗಿ ಭೇಟಿಯಾಗಿ ಸಮಸ್ಯೆ ಆಲಿಸಲಿ ಎಂದು ಸವಾಲು ಹಾಕಿದ್ದಾರೆ. ಎರಡನೇ ಹಂತದ ಗುಜ ರಾತ್‌ ಪ್ರವಾಸದ ಮೊದಲ ದಿನವಾದ ಬುಧವಾರ ಜಂಬುಸಾರ್‌ನಲ್ಲಿ ಮಾತನಾಡಿದರು.

“ಸಚಿವ ಜೇಟಿÉ ನವದೆಹಲಿಯ ತಮ್ಮ ಕಚೇರಿಯಲ್ಲಿ ಕುಳಿತು ವಿದೇಶಿಯರು ನೀಡುವ ವರದಿಯನ್ನು ನಂಬುತ್ತಾರೆ. ದೇಶದ ಅರ್ಥ ವ್ಯವಸ್ಥೆಯ ಬಗ್ಗೆ ಅವರು ಪ್ರಮಾಣಪತ್ರ ನೀಡಬೇಕಾಗಿಲ್ಲ. ಐದರಿಂದ ಹತ್ತು ನಿಮಿಷಗಳ ಕಾಲ ಜೇಟಿÉ ಸಣ್ಣ ಉದ್ದಿಮೆದಾರರನ್ನು ಭೇಟಿ ಯಾದರೆ ಜಿಎಸ್‌ಟಿ, ನೋಟು ಅಮಾನ್ಯದಿಂದ ಏನು ಸಮಸ್ಯೆಯಾಗಿದೆ ಎನ್ನುವುದು ಅವರಿಗೇ ತಿಳಿಯುತ್ತದೆ. ಹೂಡಿಕೆಯ ವಾತಾವರಣ ನಮ್ಮಲ್ಲಿ ಇಲ್ಲ ಎಂದು ದೇಶಕ್ಕೆ ದೇಶವೇ ಕೂಗಿ ಹೇಳುತ್ತಿದೆ. ನೋಟು ಅಮಾನ್ಯ ಮತ್ತು ಜಿಎಸ್‌ಟಿಯಿಂದ ಆ ವಾತಾವರಣವನ್ನೇ ನಷ್ಟ ಮಾಡಲಾಗಿದೆ’ ಎಂದು ದೂರಿದರು. 

ಪ್ರಧಾನಿ ವಿಫ‌ಲ: ಕಪ್ಪುಹಣ ಪೂರ್ಣ ಪ್ರಮಾಣದಲ್ಲಿ ನಗದು, ಚಿನ್ನ, ಜಮೀನು ಮತ್ತು ಸ್ವಿಸ್‌ ಬ್ಯಾಂಕ್‌ನಲ್ಲಿದೆ ಎಂದು ಪ್ರಧಾನಿ ಮೋದಿ ತಪ್ಪಾಗಿ ತಿಳಿದುಕೊಂಡಿದ್ದಾರೆ. ಕಳೆದ ವರ್ಷದ ನವೆಂಬರ್‌ 8ರಂದು ಮಾಡಿದ ಘೋಷಣೆಯಿಂದ ಅಂಗಡಿ ಮಾಲೀಕರು, ಸಣ್ಣ ಉದ್ದಿಮೆದಾರರು, ರೈತರಿಗೆ ತೊಂದರೆಯಾಗಿದೆ ಎಂದು ರಾಹುಲ್‌ ಹೇಳಿ ದ್ದಾರೆ. ಅವರು ಕಳ್ಳರಲ್ಲ ಮತ್ತು ಯಾವುದೇ ಕಪ್ಪು ಹಣ ಹೊಂದಿಲ್ಲ ಎಂದರು. ಮೂರು ವರ್ಷ ಗಳಿಂದ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದೆ. ಸ್ವಿಸ್‌ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ ದೇಶದ ಎಷ್ಟು ಮಂದಿಗೆ ಜೈಲು ಶಿಕ್ಷೆಯಾಗಿದೆ ಎಂದು ಪ್ರಶ್ನಿಸಿದರು. ಗುಜರಾತ್‌ನಲ್ಲಿ ಯಾವುದೇ ಸಮುದಾಯ ಸಂತೋಷದಿಂದ ಇಲ್ಲ ಎಂದು ಕಾಂಗ್ರೆಸ್‌ ಉಪಾಧ್ಯಕ್ಷ ಪ್ರತಿಪಾದಿಸಿದರು.

ರಾಹುಲ್‌ ಜತೆ ಭೇಟಿ ಇಲ್ಲ : ಹಾರ್ದಿಕ್‌
ಪಟೇಲ್‌ ಸಮುದಾಯಕ್ಕೆ ಮೀಸಲು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮತ್ತು ಹಾರ್ದಿಕ್‌ ಪಟೇಲ್‌ ನಡುವೆ ಮಾತುಕತೆ ಅಪೂರ್ಣವಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಜತೆ ಮಾತುಕತೆ ನಡೆಸುವ ವಿಚಾರ ಇಲ್ಲ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳ ವರದಿಗಳು ಆಧಾರ ರಹಿತ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.