ಗುಜರಾತ್‌ : 70,000 ವಲಸೆ ಕಾರ್ಮಿಕರ ಪಲಾಯನ,ಸಣ್ಣ ಫ್ಯಾಕ್ಟರಿಗಳು ಬಂದ್


Team Udayavani, Oct 10, 2018, 11:20 AM IST

gujarat-workers-flee-700.jpg

ಅಹ್ಮದಾಬಾದ್‌/ಮುಂಬಯಿ : ಗುಜರಾತ್‌ನಲ್ಲಿ ಜೀವ ಬೆದರಿಕೆ ಎದುರಾಗಿರುವ ಕಾರಣಕ್ಕೆ ಮಧ್ಯಪ್ರದೇಶ, ಬಿಹಾರ ಮತ್ತು ಉತ್ತರ ಪ್ರದೇಶದ ಸುಮಾರು 70,000 ಹಿಂದಿ ಭಾಷಿಕ ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ಮರಳಿರುವ ಹಿನ್ನೆಲೆಯಲ್ಲಿ ಗುಜರಾತ್‌ನಲ್ಲೀಗ ನವರಾತ್ರಿ ಶಾಪಿಂಗ್‌ ಸಂದರ್ಭದಲ್ಲೇ ವ್ಯಾಪಾರೋದ್ಯಮಗಳ ಮೇಲೆ ಭಾರೀ ದುಷ್ಪರಿಣಾಮ ಕಂಡು ಬರುತ್ತಿದೆ. 

ಕಳೆದ ತಿಂಗಳಲ್ಲಿ  ಗುಜರಾತ್‌ನ ಸಬರ್‌ಕಾಂತಾ ಜಿಲ್ಲೆಯಲ್ಲಿ 14 ತಿಂಗಳ ಹೆಣ್ಣು ಮಗುವಿನ ಮೇಲೆ ಬಿಹಾರಿ ವಲಸೆ ಕಾರ್ಮಿಕನೋರ್ವ ಅತ್ಯಾಚಾರ ನಡೆಸಿದನೆಂಬ ಕಾರಣಕ್ಕೆ ರಾಜ್ಯದಲ್ಲಿನ ಹಿಂದಿ ಭಾಷಿಕ ವಲಸೆ ಕಾರ್ಮಿಕರನ್ನು ಗುರಿ ಇರಿಸಿ ದಾಳಿ ನಡೆಯತೊಡಗಿರುವ ಕಾರಣ ಜೀವ ಭಯದಿಂದ ಈ ಮೂರೂ ರಾಜ್ಯಗಳ 70,000 ವಲಸೆ ಕಾರ್ಮಿಕರು ಪಲಾಯನ ಮಾಡಿದ್ದಾರೆ. 

ಗುಜರಾತ್‌ನ ಅತ್ಯಂತ ದೊಡ್ಡ ಕೈಗಾರಿಕಾ ಜಿಲ್ಲೆಯಾಗಿರುವ ಅಹ್ಮದಾಬಾದ್‌ ನಲ್ಲೀಗ ಹಿಂದಿ ಭಾಷಿಕ ವಲಸೆ ಕಾರ್ಮಿಕರು ಇಲ್ಲದೆ ಅತ್ಯಧಿಕ ಸಂಖ್ಯೆಯ ಸಣ್ಣ ಪುಟ್ಟ ಕೈಗಾರಿಕಾ ಘಟಕಗಳು ಮುಚ್ಚಿವೆ. ಹಾಗೆಯೇ ರಸ್ತೆ ಬದಿಯ ತಿಂಡಿ ತಿನಸುಗಳ ಅಂಗಡಿಗಳು ಕೂಡ ಮುಚ್ಚಿವೆ. ಇವುಗಳಲ್ಲೆಲ್ಲ ಬಹುತೇಕ ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶದ ವಲಸೆ ಕಾರ್ಮಿಕರೇ ಅಧಿಕ ಸಂಖ್ಯೆಯಲ್ಲಿ ದುಡಿಯುತ್ತಿದ್ದರು. ಗುಜರಾತ್‌ನಿಂದ ಪಲಾಯನ ಮಾಡಿರುವ ಈ ಕಾರ್ಮಿಕರು ಇನ್ನು ಗುಜರಾತ್‌ಗೆ ಮರಳುತ್ತಾರೋ ಇಲ್ಲವೋ ಎಂಬ ಆತಂಕ ಇಲ್ಲಿನ ವ್ಯಾಪಾರೋದ್ಯಮ ವಲಯಗಳಲ್ಲಿ ಮೂಡಿದೆ. 

ಹಸುಳೆಯ ಮೇಲೆ ಅತ್ಯಾಚಾರ ನಡೆಸಿದ ಅಪರಾಧಿಯನ್ನು ಬಂಧಿಸುವಲ್ಲಿ ಪೊಲೀಸರು ವಿಫ‌ಲವಾದರೆ ರಾಜ್ಯದಲ್ಲಿನ ವಲಸೆ ಕಾರ್ಮಿಕರಿಗೆ ಇಲ್ಲಿ ಜೀವಿಸಲು ನಾವು ಬಿಡೆವು ಎಂದು ವಿರೋಧ ಪಕ್ಷದ ಶಾಸಕನೋರ್ವ ತನ್ನ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದೇ ವಲಸೆ ಕಾರ್ಮಿಕರ ಸಾಮೂಹಿಕ ಪಲಾಯನಕ್ಕೆ ಕಾರಣವೆಂದು ತಿಳಿಯಲಾಗಿದೆ.

ಈ ನಡುವೆ ಪೊಲೀಸರು ವಿವಿಧ ಹಿಂಸಾ ಪ್ರಕರಣಗಳಲ್ಲಿ ಸುಮಾರು 500ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ. ವಲಸೆ ಕಾರ್ಮಿಕರ ಮೇಲಿನ ಆಕ್ರೋಶಕ್ಕೆ ಈ ತನಕ ಯಾವುದೇ ಜೀವ ಬಲಿಯಾಗಿಲ್ಲವಾದರೂ ಬಿಹಾರ, ಮಧ್ಯಪ್ರದೇಶ, ಉತ್ತರ ಪ್ರದೇಶದ ಕಾರ್ಮಿಕರು ತಮಗೆ ಜೀವ ಬೆದರಿಕೆ ಇರುವುದನ್ನು ಮನಗಂಡು ರಾಜ್ಯದಿಂದ ಪಲಾಯನ ಮಾಡಿರುವುದು ಸ್ಪಷ್ಟವಿದೆ ಎಂದು ವರದಿಗಳು ತಿಳಿಸಿವೆ. 

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.