Khalistani: ಭಾರತದ ಮೇಲೆ “ಹಮಾಸ್ ಮಾದರಿ’ ದಾಳಿ!- ಖಲಿಸ್ಥಾನಿ ಉಗ್ರ ಪನ್ನೂನ್ ಬೆದರಿಕೆ
Team Udayavani, Oct 10, 2023, 11:43 PM IST
ಟೊರಂಟೊ: ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿದಂತೆಯೇ, ಭಾರತದ ಮೇಲೆ ನಾವು ದಾಳಿ ನಡೆಸುವುದಾಗಿ ಖಾಲಿಸ್ಥಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನೂನ್ ಬೆದರಿಕೆ ಹಾಕಿದ್ದಾನೆ.
ಅಮೆರಿಕ ಮೂಲದ ನಿಷೇಧಿತ ಖಾಲಿಸ್ಥಾನಿ ಉಗ್ರ ಸಂಘಟನೆ ಸಿಕ್ಖ್ ಫಾರ್ ಜಸ್ಟಿಸ್ನ ಮುಖ್ಯಸ್ಥನಾಗಿರುವ ಪನ್ನುನ್ ಮಂಗಳವಾರ ವೀಡಿಯೋವೊಂದನ್ನು ಹರಿ ಬಿಟ್ಟಿದ್ದು, ಅದರಲ್ಲಿ ” ಭಾರತ ಪಂಜಾಬ್ ಅನ್ನು ಅತಿಕ್ರಮಿ ಸುತ್ತಿದೆ. ಅದು ಮುಂದುವರಿದರೆ ಈಗ ಹಮಾಸ್ ನೀಡಿದ ಉತ್ತರವನ್ನೇ ನಾವು ನೀಡಬೇಕಾಗುತ್ತದೆ. ಆದರೆ ಅದಕ್ಕೆ ಭಾರತ ಮತ್ತು ಪ್ರಧಾನಿ ಮೋದಿ ಹೊಣೆ ಯಾಗಬೇಕಾಗುತ್ತದೆ’ ಎಂದಿದ್ದಾನೆ.
ಜೋರ್ಡಾನ್ನೊಂದಿಗೆ ಟ್ರಾಡೊ ಮಾತುಕತೆ: ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೇದ್ರೊಂದಿಗೆ ಭಾರತದ ವಿಚಾರ ಪ್ರಸ್ತಾವಿಸುವ ಮೂಲಕ ಭಾರತದ ಕೆಂಗಣ್ಣಿಗೆ ಗುರಿಯಾಗಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರಾಡೊ ಈಗ ಜೋರ್ಡಾನ್ ದೊರೆಯೊಂದಿಗಿನ ಮಾತುಕತೆ ವೇಳೆಯೂ ಇದೇ ಚಾಳಿ ಮುಂದುವರಿಸಿದ್ದಾರೆ. “ಜೋರ್ಡಾನ್ ರಾಜ ಎರಡನೇ ಅಬ್ದುಲ್ಲಾ ಬಿನ್ ಅಲ್-ಹುಸೇನ್ ಅವರೊಂದಿಗೆ ಜಸ್ಟಿನ್ ಟ್ರಾಡೊ ಮಾತುಕತೆ ನಡೆಸಿದಾಗ, ಭಾರತ-ಕೆನಡಾ ನಡುವಿನ ಸಂಬಂಧದ ಸದ್ಯದ ಸ್ಥಿತಿ-ಗತಿ ಕುರಿತು ಮಾಹಿತಿ ನೀಡಿದ್ದಲ್ಲದೇ, ಕಾನೂನು ಮತ್ತು ರಾಜತಾಂತ್ರಿಕ ಸಂಬಂಧಗಳ ವಿಯೆನ್ನಾ ಒಪ್ಪಂದವನ್ನು ಗೌರವಿಸುವ ಪ್ರಾಮುಖ್ಯವನ್ನು ಒತ್ತಿ ಹೇಳಿದ್ದಾರೆ’ ಎಂದು ಕೆನಡಾ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Yakshagana: ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ಸಂಸ್ಮರಣ ಪ್ರಶಸ್ತಿ ಗೌರವ
Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್ಗೆ ಹಾನಿ
Music Programme: ಸಂಗೀತ ರಸಿಕರನ್ನು ರಂಜಿಸಿದ ಮಳೆಗಾಲದ ರಾಗಗಳ ಗಾಯನ
Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್
Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.