“ಹರ್ ಘರ್ ತಿರಂಗಾ’ ವಿಡಿಯೋ ಗೀತೆ ರಿಲೀಸ್
Team Udayavani, Aug 5, 2022, 7:20 AM IST
ಮುಂಬಯಿ/ಹೊಸದಿಲ್ಲಿ: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷಗಳು ಪೂರ್ಣಗೊಂಡ ಹಿನ್ನೆಲೆ ಯಲ್ಲಿ ಕೇಂದ್ರ ಸಂಸ್ಕೃತಿ ಸಚಿ ವಾಲಯ 4 ನಿಮಿಷ 15 ಸೆಕೆಂಡ್ಗಳ “ಹರ್ ಘರ್ ತಿರಂಗಾ’ ಧ್ಯೇಯಗೀತೆ ಇರುವ ವಿಡಿಯೋವನ್ನು ಟ್ವಿಟರ್ನಲ್ಲಿ ಅಪ್ ಲೋಡ್ ಮಾಡಿದೆ.
ಅದರಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್, ಕಪಿಲ್ ದೇವ್, ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ, ಅನುಪಮ್ ಖೇರ್, ಆಶಾ ಭೋಸ್ಲೆ ಸೇರಿದಂತೆ ವಿವಿಧ ಕ್ಷೇತ್ರಗಳ ಹಲವು ತಾರೆಯರು ಪಾಲ್ಗೊಂಡಿ ದ್ದಾರೆ. ಬಾಲಿವುಡ್ ನಟ ಅಮಿತಾಭ್ ಅವರು ಹಾಡಿಗೆ ದನಿಗೂಡಿಸಿದ್ದಾರೆ.
ವಿಡಿಯೋದಲ್ಲಿ ಕಾಣಿಸಿ ಕೊಂಡಿರುವ ದಕ್ಷಿಣ ಭಾರತ ದ ಸಿನಿಮಾ ಕ್ಷೇತ್ರದ ಏಕೈಕ ತಾರೆ ಪ್ರಭಾಸ್. ವಿಡಿಯೋವನ್ನು ದೇಶದ ಕ್ರೀಡೆ, ದೇಶಿಯವಾಗಿ ಅಭಿವೃದ್ಧಿಗೊಳಿಸಿ ಉಡಾಯಿಸಿದ ಕ್ಷಿಪಣಿಗಳು, ದೇಶದ ಅದ್ಧೂರಿ ಇತಿಹಾಸ, ಜನರು, ಪ್ರಮುಖ ಸಾಧನೆಗಳನ್ನು ಸಮ್ಮಿಳನಗೊಳಿಸುವಂತೆ ಮನಮೋಹಕವಾಗಿ ಚಿತ್ರಿಸಲಾಗಿದೆ. ದೇಶದ ಸಮಗ್ರತೆ ಮತ್ತು ಐಕ್ಯತೆಯನ್ನು ಚಿತ್ರಿಸುವಲ್ಲಿ ಈ ವಿಡಿಯೋ ಗೀತೆ ಯಶಸ್ವಿಯಾಗಿದೆ ಎಂದು ಟ್ವಿಟರ್ನಲ್ಲಿ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಡಿಯೋದ ಮುಕ್ತಾಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಣಿಸಿಕೊಂಡಿದ್ದಾರೆ.
ಆ.7ಕ್ಕೆ ಆಜಾದಿ ಸ್ಯಾಟ್ ನಭಕ್ಕೆ: ಸ್ವಾತಂತ್ರ್ಯದ ಅಮೃತಮಹೋತ್ಸವ ಪ್ರಯುಕ್ತ ಆ.7ರಂದು ಇಸ್ರೋ “ಆಜಾದಿ ಸ್ಯಾಟ್’ ಎಂಬ ಉಪಗ್ರಹವನ್ನು ನಭಕ್ಕೆ ಕಳುಹಿಸ ಲಿದೆ. ದೇಶದ 750 ವಿದ್ಯಾರ್ಥಿನಿ ಯರು ಅಭಿವೃದ್ಧಿಪಡಿಸಿರುವ 75 ಪೇಲೋ ಡ್ಗಳುಳ್ಳ ಉಪಗ್ರಹವನ್ನು ಸ್ಮಾಲ್ ಸ್ಯಾಟಲೈಟ್ ಲಾಂಚ್ ವೆಹಿಕಲ್ನಲ್ಲಿ ಉಡಾಯಿಸಲಾಗುತ್ತದೆ. ಶ್ರೀಹರಿಕೋಟಾದಿಂದ ಬೆಳಗ್ಗೆ 9.18ಕ್ಕೆ ಉಪಗ್ರಹ ನಭಕ್ಕೆ ಚಿಮ್ಮಲಿದೆ.
ಕನ್ನಡದಲ್ಲಿ ಕೆ.ಎಲ್. ರಾಹುಲ್ :
ಟೀಂ ಇಂಡಿಯಾದ ಉಪ ನಾಯಕ ಕೆ.ಎಲ್.ರಾಹುಲ್ ಕೂಡ “ಹರ್ ಘರ್’ ಧ್ಯೇಯಗೀತೆ ಯಲ್ಲಿ ಕಾಣಿಸಿಕೊಂಡಿ ದ್ದಾರೆ. 2 ನಿಮಿಷ 20 ಸೆಕೆಂಡ್ಗಳ ವಿಡಿಯೋ ದಲ್ಲಿ ಅವರು ಕನ್ನಡದಲ್ಲಿ “ಮನೆ ಮನೆಗೂ ತ್ರಿವರ್ಣ’ ಎಂದು ಹಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್ಬಸ್ ಸ್ಥಾವರ ಉದ್ಘಾಟನೆ
German company; ಖಾಸಗಿತನ ರಕ್ಷಣೆಗಾಗಿ ಡಿಜಿಟಲ್ ಕಾಂಡೋಮ್
Dravidian model ಹೆಸರಲ್ಲಿ ಲೂಟಿ; ಮೊದಲ ಬೃಹತ್ ರ್ಯಾಲಿಯಲ್ಲಿ ಅಬ್ಬರಿಸಿದ ವಿಜಯ್
Maharashtra election: ವರ್ಲಿ ಕ್ಷೇತ್ರದಲ್ಲಿ ಆದಿತ್ಯ vs ಮಿಲಿಂದ್
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.