![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 14, 2019, 5:00 AM IST
ಹೊಸದಿಲ್ಲಿ: “ಪಾಕಿಸ್ಥಾನಿ ಸೇನೆ ನಡೆಸುವ ಯಾವುದೇ ದುಸ್ಸಾಹಸಕ್ಕೂ ನಾವು ಪ್ರತ್ಯುತ್ತರ ನೀಡುತ್ತೇವೆ. ಉಗ್ರವಾದಕ್ಕೆ ಸಂಬಂಧಿಸಿದ ಯಾವುದೇ ಕೃತ್ಯವನ್ನೂ ಸುಮ್ಮನೆ ಬಿಡಲ್ಲ.’ ಹೀಗೆಂದು ಪಾಕಿಸ್ಥಾನ ಮತ್ತು ಪಾಕ್ ಪ್ರೇರಿತ ಉಗ್ರಗಾಮಿಗಳಿಗೆ ಖಡಕ್ ಎಚ್ಚರಿಕೆ ನೀಡಿರುವುದು ಭೂಸೇನಾ ಮುಖ್ಯಸ್ಥ ಜ| ಬಿಪಿನ್ ರಾವತ್.
ಕಾರ್ಗಿಲ್ ಯುದ್ಧಕ್ಕೆ 20 ವರ್ಷಗಳು ಸಂದ ಹಿನ್ನೆಲೆಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಜ| ರಾವತ್ ಈ ಮಾತುಗಳನ್ನಾಡಿದ್ದಾರೆ. “ಭಾರತೀಯ ಸಶಸ್ತ್ರ ಪಡೆಗಳು ನಮ್ಮ ಗಡಿ ಪ್ರದೇಶದ ಸಮಗ್ರತೆ ಕಾಪಾಡಿಕೊಳ್ಳಲು ಬದ್ಧತೆಯಿಂದ ನಿಂತಿವೆ. ಆಗಾಗ ದುಸ್ಸಾಹಸಕ್ಕೆ ಕೈಹಾಕುವ ಪಾಕಿಸ್ಥಾನಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲಾಗುತ್ತದೆ. ಉರಿ ದಾಳಿ ಬಳಿಕ ನಡೆದ ಸರ್ಜಿಕಲ್ ಸ್ಟ್ರೈಕ್ ಹಾಗೂ ಬಾಲಕೋಟ್ನಲ್ಲಿ ನಡೆಸಲಾದ ದಾಳಿಯು ಭಯೋತ್ಪಾದನೆ ವಿರುದ್ಧದ ನಮ್ಮ ರಾಜಕೀಯ ಹಾಗೂ ಸೇನಾ ಬದ್ಧತೆಯನ್ನು ಪ್ರದರ್ಶಿಸಿದೆ’ ಎಂದು ರಾವತ್ ಹೇಳಿದ್ದಾರೆ.
ಅತಿಕ್ರಮಣ ಆಗಿಲ್ಲ: ಇದೇ ವೇಳೆ ಲಡಾಖ್ನ ಡೆಮ್ಚೋಕ್ ವಲಯದಲ್ಲಿ ಚೀನ ಸೇನೆ ಅತಿಕ್ರಮಣ ಮಾಡಿಲ್ಲ ಎಂದೂ ರಾವತ್ ಸ್ಪಷ್ಟಪಡಿಸಿದ್ದಾರೆ. ಜು. 6ರಂದು ದಲೈ ಲಾಮಾ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕೆಲವು ಟಿಬೆಟಿಯನ್ನರು ಟಿಬೆಟಿಯನ್ ಧ್ವಜ ಹಾರಿಸಿದ ಬೆನ್ನಲ್ಲೇ, ಕಳೆದ ವಾರ ಚೀನ ಯೋಧರು ವಾಸ್ತವಿಕ ಗಡಿ ನಿಯಂತ್ರಣ ರೇಖೆ ದಾಟಿ ಬಂದಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಹಿನ್ನೆಲೆಯಲ್ಲಿ ರಾವತ್ ಸ್ಪಷ್ಟನೆ ಮಹತ್ವ ಪಡೆದಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.