ಹಿಮಾಚಲದಲ್ಲಿ ಕಾಂಗ್ರೆಸ್ ಗೆ ಭಾರಿ ಶಾಕ್: ಕಾರ್ಯಾಧ್ಯಕ್ಷ ಮಹಾಜನ್ ಬಿಜೆಪಿಗೆ ಸೇರ್ಪಡೆ
ಕಾಂಗ್ರೆಸ್ ನಾಯಕನಿಲ್ಲದಂತಾಗಿದೆ... 45 ವರ್ಷಗಳ ನಂಟು ಕಡಿದುಕೊಂಡು ವಾಗ್ದಾಳಿ
Team Udayavani, Sep 28, 2022, 1:59 PM IST
ನವದೆಹಲಿ : ಹಿಮಾಚಲ ಪ್ರದೇಶದ ಕಾಂಗ್ರೆಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಹರ್ಷ್ ಮಹಾಜನ್ ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಸೇರಿದ್ದಾರೆ.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಹಾಜನ್, ”45 ವರ್ಷ ಕಾಂಗ್ರೆಸ್ನಲ್ಲಿದ್ದೆ.ಇಂದು ಕಾಂಗ್ರೆಸ್ ದಿಕ್ಕು ತೋಚದಂತಾಗಿದೆ, ನಾಯಕನಿಲ್ಲದಂತಾಗಿದೆ. ತಳಮಟ್ಟದಲ್ಲಿ ದೃಷ್ಟಿಯಾಗಲೀ ಕೆಲಸಗಾರರಾಗಲೀ ಇಲ್ಲ” ಎಂದಿದ್ದಾರೆ.
ಇದನ್ನೂ ಓದಿ: PFI ಜತೆಗೆ ಬ್ಯಾನ್ ಆದ ಇತರ ಸಂಘಟನೆಗಳು ಯಾವುದು? ಕಚೇರಿಯಲ್ಲಿ ದೊರೆತ ಪುರಾವೆ ಬಹಿರಂಗ
ಈ ಸಂದರ್ಭದಲ್ಲಿ ಮಾತನಾಡಿದ ಗೋಯಲ್, ”ಮಹಾಜನ್ ಅವರು 45 ವರ್ಷಗಳಿಂದ ಕಾಂಗ್ರೆಸ್ನಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ, ಅವರು ಈ ಕ್ಲೀನ್ ಇಮೇಜ್ ಹೊಂದಿದ್ದರು, ಯುವ ಕಾಂಗ್ರೆಸ್ನಲ್ಲಿದ್ದರು ಮತ್ತು ನಂತರ ವಿಧಾನಸಭೆಯಲ್ಲಿ ಮುಖ್ಯ ಸಚೇತಕರಾಗಿದ್ದರು. ಅವರು ಹಿಮಾಚಲ ಪ್ರದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ” ಎಂದರು.
“ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಅವರು ಸ್ಫೂರ್ತಿ ಪಡೆದಿದ್ದರಿಂದ ಅವರು ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದಾರೆ. ಜನರಿಗಾಗಿ ಕೆಲಸ ಮಾಡಲು ಅವರು ಬಿಜೆಪಿಗೆ ಸೇರಲು ಬಯಸಿದ್ದಾರೆ. ಮತ್ತು ಹಿಮಾಚಲ ಇತಿಹಾಸವನ್ನು ನಿರ್ಮಿಸಲು ಸಜ್ಜಾಗಿದೆ, ಬಿಜೆಪಿ ಅಧಿಕಾರಕ್ಕೆ ಮರಳಲು ಸಿದ್ಧವಾಗಿದೆ”ಎಂದರು.
ಈ ವರ್ಷ ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಪಕ್ಷಾಂತರ ಪರ್ವ ಆರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.