![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, May 16, 2023, 7:55 AM IST
ಚಂಡೀಗಢ: ಕಾರ್ಪೊರೇಟ್ ಕಂಪನಿಗಳಲ್ಲಿ ಇನ್ನು ಬಿಯರ್ ಮತ್ತು ವೈನ್ ಸೇವನೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಏನಪ್ಪಾ ಇದು ಹುಬ್ಬೇರಿಸಬೇಡಿ.
ಹರ್ಯಾಣ ಸರ್ಕಾರದ ಜೂ.12ರಿಂದ ಜಾರಿಗೊಳಿಸಲು ಉದ್ದೇಶಿಸಿರುವ ಹೊಸ ಅಬಕಾರಿ ನೀತಿಯ ಅಂಶಗಳಲ್ಲಿ ಇದೂ ಒಂದು. ಅಂದ ಹಾಗೆ ಎಲ್ಲಾ ಕಂಪನಿಗಳಲ್ಲೂ ಈ ವ್ಯವಸ್ಥೆ ಲಭ್ಯವಾಗುವುದಿಲ್ಲ. ಅದಕ್ಕಾಗಿ ಸೂಕ್ತ ರೀತೀಯ ಪರವಾನಗಿ ಪಡೆಯಬೇಕಾಗುತ್ತದೆ.
ನೂತನ ಅಬಕಾರಿ ನೀತಿಯ ಪ್ರಕಾರ, ಕನಿಷ್ಠ ಒಂದು ಲಕ್ಷ ಚದರ ಅಡಿಯ ವಿಸ್ತೀರ್ಣದಲ್ಲಿ ಕಚೇರಿ ಇರಬೇಕು. ಕನಿಷ್ಠ 5,000 ಉದ್ಯೋಗಿಗಳನ್ನು ಹೊಂದಿರಬೇಕು. ಅಲ್ಲದೆ, ಕಚೇರಿ ಕ್ಯಾಂಟೀನ್ ಅಥವಾ ಊಟ ಮಾಡುವ ಸ್ಥಳ 2,000 ಚದರ ಅಡಿಗೂ ಹೆಚ್ಚು ವಿಸ್ತೀರ್ಣ ಹೊಂದಿರಬೇಕು. ಪರವಾನಿಗೆ ಪಡೆಯಲು ವಾರ್ಷಿಕ 10 ಲಕ್ಷ ರೂ. ಪಾವತಿಸಬೇಕು. ಜತೆಗೆ ಭದ್ರತೆಯಾಗಿ ಹೆಚ್ಚುವರಿಯಾಗಿ ವಾರ್ಷಿಕ 3 ಲಕ್ಷ ರೂ.ಗಳನ್ನು ಪಾವತಿಸಬೇಕಿದೆ.
ಹೊಸ ನೀತಿಯ ಮೂಲಕ ಹರ್ಯಾಣ ಸರ್ಕಾರ ವಾರ್ಷಿಕವಾಗಿ 400 ಕೋಟಿ ರೂ. ಆದಾಯ ಪಡೆದುಕೊಳ್ಳುವ ಗುರಿಯನ್ನು ಹೊಂದಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.