Haryana: ಕಾಂಗ್ರೆಸ್‌ ಒಳಬೇಗುದಿ ಬಿಸಿಗೆ ಅರಳಿದ ಕಮಲ


Team Udayavani, Oct 9, 2024, 6:29 AM IST

Haryana: The BJP blossomed in the heat of Congress

ಆಡಳಿತ ವಿರೋಧಿ ಅಲೆ, ರೈತ ಪ್ರತಿಭಟನೆ, ಕುಸ್ತಿ ಪಟುಗಳ ವಿವಾದ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳ ನಡುವೆಯೂ ಹರ್ಯಾಣದಲ್ಲಿ ಸತತ ಮೂರನೇ ಬಾರಿಗೆ ಕಮಲ ಅರಳಿದ್ದು, ಮತಗಟ್ಟೆ ಸಮೀಕ್ಷೆಗಳನ್ನೇ ಸುಳ್ಳಾಗಿಸಿ ಕಾಂಗ್ರೆಸ್‌ ಸೋಲಿನ ಕದ ತಟ್ಟಿದೆ. ಪ್ರಭಾವಿ ಜಾಟ್‌ ನಾಯಕರಿಗೆ ಮಣೆ ಹಾಕಿ, ಗ್ಯಾರಂಟಿಗಳನ್ನು ಘೋಷಿಸಿದರೂ ಮತದಾರರ ಮನವೊಲಿಸುವಲ್ಲಿ ಕಾಂಗ್ರೆಸ್‌ ವಿಫ‌ಲವಾಗಿದ್ದರೆ, ನಾಯಕರ ಒಳ ಜಗಳವೇ ಬಿಜೆಪಿಗೆ ಅಸ್ತ್ರವಾಗಿ ಪರಿಣಮಿಸಿ ಗೆಲುವಾಗಿದೆ.ಗೆಲುವಿನ ಫ‌ಲ ದೊರೆವಂತೆ ಮಾಡಿದೆ.

ಮಾಜಿ ಸಿಎಂ ಭೂಪೇಂದ್ರ ಸಿಂಗ್‌ ಹೂಡಾ ಮತ್ತು ಕಾಂಗ್ರೆಸ್‌ನ ಪ್ರಭಾವಿ ದಲಿತ ನಾಯಕಿ ಕುಮಾರಿ ಸೆಲ್ಜಾ ನಡುವೆ ಸಿಎಂ ಗಾದಿಗೆ ಕಿತ್ತಾಟವೇ ಪಕ್ಷಕ್ಕೆ ಮೊದಲ ಪೆಟ್ಟು ಕೊಟ್ಟಿತು. ಅಭ್ಯರ್ಥಿಗಳ ಆಯ್ಕೆ, ಟಿಕೆಟ್‌ ಹಂಚಿಕೆಯಲ್ಲೂ ಹೂಡಾಗೆ ಹೈಕಮಾಂಡ್‌ ಸ್ವಾತಂತ್ರ್ಯ ನೀಡಿದ್ದು ಪಕ್ಷದ ಒಳಗೇ 2 ಬಣಗಳು ಸೃಷ್ಟಿಯಾಗುವಂತೆ ಮಾಡಿತು. ಭೂಪೇಂದ್ರ ಸಿಂಗ್‌ ಬಣವೇ ಒಂದಾದರೆ, ರಣದೀಪ್‌ ಸುರ್ಜೇವಾಲಾ, ಕುಮಾರಿ ಸೆಲ್ಜಾ, ಕಿರಣ್‌ ಚೌಧರಿ ಅವರ ಮತ್ತೂಂದು ಬಣ ಹುಟ್ಟಿಕೊಂಡಿತ್ತು. ಇದು ಮತದಾರರಿಗೆ ಭವಿಷ್ಯದ ಆಡಳಿತದ ಬಗ್ಗೆ ಸಂಶಯ ಮೂಡುವಂತೆ ಮಾಡಿತು.

ಇನ್ನೊಂದೆಡೆ, ಕಾಂಗ್ರೆಸ್‌ನೊಳಗಿನ ಕಿತ್ತಾಟ ಬಿಜೆಪಿ ಪಾಲಿಗೆ ವರವಾದವು. ಖುದ್ದು ಪ್ರಧಾನಿ ಮೋದಿ ಅವರೇ ಪ್ರಚಾರ ರ್ಯಾಲಿಗಳಲ್ಲಿ ಕಾಂಗ್ರೆಸ್‌ನ ಒಳಜಗಳವನ್ನೇ ಹೆಚ್ಚು ಹೆಚ್ಚು ಪ್ರಸ್ತಾಪಿಸಿದ್ದು, ಹರ್ಯಾಣ ಮಾತ್ರವಲ್ಲದೆ ಕರ್ನಾಟಕದ ಉದಾಹರಣೆಯನ್ನೂ ನೀಡಿದ್ದನ್ನು ಸ್ಮರಿಸಬಹುದು. ಇದಲ್ಲದೇ, ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳು ಎಂದೇ ಪರಿಗಣಿಸಲ್ಪಡುವ ದಲಿತ ಮತಗಳೂ ವಿಭಜನೆಯಾದವು. ಸ್ಥಳೀಯ ಪಕ್ಷಗಳು ರಾಷ್ಟ್ರೀಯ ಪಕ್ಷಗಳನ್ನು ಪಕ್ಕಕ್ಕಿಟ್ಟು ಮೈತ್ರಿ ಮಾಡಿಕೊಂಡವು. ಈ ಪಕ್ಷಗಳು ಗೆಲುವಿನಲ್ಲಿ ಹಿಂದುಳಿದರೂ ದಲಿತ ಮತಗಳ ವಿಭಜನೆಯಲ್ಲಂತೂ ಯಶಸ್ವಿಯಾಗಿದ್ದು ಕಾಂಗ್ರೆಸ್‌ಗೆ ಪೆಟ್ಟು ನೀಡಿತು.

ಜಾಟ್‌ ಮೋಹವೇ ಕಾಂಗ್ರೆಸ್‌ಗೆ ಮುಳ್ಳಾಯ್ತು!

ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.26ರಿಂದ ಶೇ.28ರಷ್ಟಿರುವ ಜಾಟ್‌ ಸಮುದಾಯವು ಚುನಾವಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ, ಅಲ್ಲದೆ ಇವು ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳು ಎಂಬುದು ಎಷ್ಟು ಸತ್ಯವೋ, ಜಾಟ್‌ ಸಮುದಾಯವನ್ನು ಓಲೈಸುವ ಭರದಲ್ಲಿ ಕಾಂಗ್ರೆಸ್‌ ಜಾಟ್‌ಯೇತರರನ್ನು ಕಡೆಗಣಿಸಿ ಎಡವಿದೆ ಎಂಬುದೂ ಅಷ್ಟೇ ಸ್ಪಷ್ಟವಾಗಿದೆ. ಜಾಟ್‌ ಸಮುದಾಯದ ಪ್ರಾಬಲ್ಯವಿರುವ ಮಧ್ಯ ಹರ್ಯಾಣದ ಕಡೆ ಹೆಚ್ಚು ಗಮನ ಹರಿಸುತ್ತಾ, ದಕ್ಷಿಣ ಹರ್ಯಾಣವನ್ನು ಕಾಂಗ್ರೆಸ್‌ ನಿರ್ಲಕ್ಷಿಸಿತು. ಆದರೆ, ಬಿಜೆಪಿ ಇದೇ ಮತಬುಟ್ಟಿಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತು.

ಚುನಾವಣೆ ಸಮೀಪವಿರುವಂತೆಯೇ ಒಬಿಸಿ ನಾಯಕ ನಯಾಬ್‌ ಸಿಂಗ್‌ ಸೈನಿ ಅವರನ್ನು ಸಿಎಂ ಆಗಿಸುವ ಮೂಲಕ ಒಬಿಸಿ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಯ್ತು. ಇದಕ್ಕೆ ಬಿಜೆಪಿಯ ಸಾಂಪ್ರದಾಯಿಕ ಬ್ರಾಹ್ಮಣ ಮತಗಳೂ ಸಾಥ್‌ ನೀಡಿದವು. ಜತೆಗೆ ದಲಿತ ಮತಗಳನ್ನು ಓಲೈಸಲು ಕಾಂಗ್ರೆಸ್‌ ನಾಯಕರು ಮೀಸಲಾತಿ ಮಿತಿ ರದ್ದು, ಸಾಮಾಜಿಕ ನ್ಯಾಯ ಎಂಬ ವಿಚಾರಗಳನ್ನು ಹೆಚ್ಚು ಪ್ರಸ್ತಾಪಿಸಿದ್ದು ಕೂಡ ಜಾಟ್‌ಯೇತರ ಮತಗಳು ಬಿಜೆಪಿಯತ್ತ ತಿರುಗುವಂತೆ ಮಾಡಿದವು ಎಂದು ಹೇಳಬಹುದು.

ಟಾಪ್ ನ್ಯೂಸ್

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Dakshineswar-kali-temple-kolkatha

Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ

h-kantaraju

Cast Census: ಕಾಯ್ದೆ ಪ್ರಕಾರ ಸರಕಾರ ಜಾತಿಗಣತಿ ವರದಿ ಒಪ್ಪಬೇಕು

BJP-Head

Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ

Rishab-Shetty

National Film Award: ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ

isrel netanyahu

Hezbollah ದುರ್ಬಲ; ನಸ್ರಲ್ಲಾ ಉತ್ತರಾಧಿಕಾರಿಗಳೆಲ್ಲ ಫಿನಿಷ್: ನೆತನ್ಯಾಹು ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

BJP-Head

Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ

Rishab-Shetty

National Film Award: ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ

Haryana-JK Election: Exit poll failed in both states!

Haryana-JK Election: ಎರಡೂ ರಾಜ್ಯಗಳಲ್ಲಿ ಎಕ್ಸಿಟ್‌ ಪೋಲ್‌ ಫೇಲ್‌!

Jammu Kashmir; ಇಂಡಿಯಾ ಗೆದ್ದಾಯ್ತು, ಕಾಶ್ಮೀರದಲ್ಲಿ ಮುಂದೇನು?

Jammu Kashmir; ಇಂಡಿಯಾ ಗೆದ್ದಾಯ್ತು, ಕಾಶ್ಮೀರದಲ್ಲಿ ಮುಂದೇನು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Dakshineswar-kali-temple-kolkatha

Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ

h-kantaraju

Cast Census: ಕಾಯ್ದೆ ಪ್ರಕಾರ ಸರಕಾರ ಜಾತಿಗಣತಿ ವರದಿ ಒಪ್ಪಬೇಕು

BJP-Head

Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.