![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 5, 2023, 1:28 PM IST
ಚಂಡೀಗಢ: ಅಪರಿಚಿತ ವಾಹನ ಢಿಕ್ಕಿಯಾಗಿ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಹರಿಯಾಣದಲ್ಲಿ ಶನಿವಾರ (ಮಾ. 4 ರಂದು) ನಡೆದಿದೆ.
ಹರ್ಯಾಣ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಚಂದ್ರಪಾಲ್ ಅವರು ಶನಿವಾರ ಸೈಕಲ್ ನಲ್ಲಿ ಹೋಗುತ್ತಿದ್ದರು. ಸೈಕ್ಲಿಂಗ್ ಮಾಡುತ್ತಿರುವಾಗ ಅಪರಿಚಿತ ವಾಹನವೊಂದು ಹಿಂದಿನಿಂದ ಢಿಕ್ಕಿ ಹೊಡೆದು ಪರಾರಿ ಆಗಿದೆ. ಅಪಘಾತದ ತೀವ್ರತೆಗೆ ಸೈಕಲ್ ಸಂಪೂರ್ಣ ಹಾನಿಯಾಗಿದ್ದು, ಗಂಭೀರ ಗಾಯಗೊಂಡಿದ್ದ ಚಂದ್ರಪಾಲ್ ಅವರನ್ನುಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: ಒಂದೇ ಸ್ಕೂಟರ್ ನಲ್ಲಿ 6 ಮಂದಿ ಪಯಣ: ಪಿಕಪ್ ಢಿಕ್ಕಿಯಾಗಿ ನಾಲ್ವರು ದುರ್ಮರಣ
ಡಿಎಸ್ ಪಿಯಾಗಿ ಕರ್ತವ್ಯ ನಿಭಾಯಿಸುತ್ತಿದ್ದ ಚಂದ್ರಪಾಲ್ ಅವರು ಪ್ರತಿನಿತ್ಯ ಸೈಕ್ಲಿಂಗ್ ಗೆ ಹೋಗುತ್ತಿದ್ದರು. ಶನಿವಾರ ಸಂಜೆಯೂ ನಿತ್ಯದಂತೆ ಸೈಕ್ಲಿಂಗ್ ಗೆ ಹೋಗುವಾಗ ಈ ಅಪಘಾತ ಸಂಭವಿಸಿದೆ.
ರಾಟಿಯಾ, ಫತೇಹಾಬಾದ್ ನಲ್ಲಿ ಚಂದ್ರಪಾಲ್ ಕರ್ತವ್ಯ ನಿಭಾಯಿಸುತ್ತಿದ್ದರು. ಪರಾರಿಯಾದ ವಾಹನದ ಹುಡುಕಾಟಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.