ಮೋಸ್ಟ್ ವಾಂಟೆಡ್ ಕ್ರಿಮಿನಲ್ ಲಾಕಪ್ ನಿಂದ ಸಿನಿಮೀಯ ರೀತಿ ಎಸ್ಕೇಪ್!
Team Udayavani, Sep 6, 2019, 6:50 PM IST
ಅಲ್ವಾರ್(ರಾಜಸ್ಥಾನ್):ಬಾಲಿವುಡ್ ಥ್ರಿಲ್ಲರ್ ಸಿನಿಮಾದ ಮಾದರಿಯಲ್ಲಿಯೇ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳು ಜೈಲಿನಿಂದ ಪರಾರಿಯಾದ ಘಟನೆ ರಾಜಸ್ಥಾನದಲ್ಲಿ ಶುಕ್ರವಾರ ನಡೆದಿದೆ.
ದೆಹಲಿಯಿಂದ 166 ಕಿಲೋ ಮೀಟರ್ ದೂರದಲ್ಲಿರುವ ಅಲ್ವಾರ್ ಪೊಲೀಸ್ ಠಾಣೆಯ ಗೋಡೆಗೆ ಆರು ಮಂದಿಯ ತಂಡ ಆಗಮಿಸಿ ಹಲವಾರು ಸುತ್ತು ಗುಂಡು ಹಾರಿಸಿತ್ತು. ಬಳಿಕ ಲಾಕಪ್ ನಲ್ಲಿದ್ದ ವಿಕ್ರಮ ಗುಜ್ಜಾರ್ ಎಂಬ ಕ್ರಿಮಿನಲ್ ಜತೆ ಪರಾರಿಯಾಗಿರುವುದಾಗಿ ವರದಿ ತಿಳಿಸಿದೆ.
ಬಹುಶಃ ಎಕೆ 47 ರೈಫಲ್ಸ್ ಉಪಯೋಗಿಸಿ ಠಾಣೆಯ ಗೋಡೆಗೆ ಗುಂಡು ಹಾರಿಸಿ ಗೋಡೆಯನ್ನು ಕೊರೆದು ಕ್ರಿಮಿನಲ್ ಗುಜ್ಜಾರ್ ನನ್ನು ಕರೆದೊಯ್ಯಿದ್ದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಗ್ಯಾಂಗ್ ಗುಜ್ಜಾರ್ ಜತೆ ಬಿಳಿಯ ಹುಂಡೈ ಐ20 ಕಾರಿನಲ್ಲಿ ಪರಾರಿಯಾಗಿರುವುದಾಗಿ ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗುಜ್ಜಾರ್ ತಲೆಗೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. 28 ವರ್ಷದ ಗುಜ್ಜಾರ್ ಹರ್ಯಾಣದ ಮಹೇಂದ್ರಗಢ್ ನಿವಾಸಿಯಾಗಿದ್ದು, ಈತನ ವಿರುದ್ಧ ಏಳು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಗುರುವಾರ ರಾಜಸ್ಥಾನ್ ಪೊಲೀಸರು ವಿಕ್ರಮ್ ಗುಜ್ಜಾರ್ ನನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.