Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

ದಿನ ಹಿಂದೂ-ಮುಸ್ಲಿಂ ಎನ್ನುವ ಅವರು ಸಾರ್ವಜನಿಕ ಬದುಕಿಗೆ ವಿದಾಯ ಹೇಳಲಿ

Team Udayavani, May 22, 2024, 6:14 AM IST

Hateful PM Modi should quit politics: Kharge

ಹೊಸದಿಲ್ಲಿ: ಚುನಾವಣೆ ಪ್ರಚಾರದಲ್ಲಿ ಹಿಂದೂ-ಮುಸ್ಲಿಂ ಬಗ್ಗೆ ಮಾತನಾಡುತ್ತಾ ದ್ವೇಷ ಭಾಷಣ ಮಾಡುವ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಜೀವನವನ್ನು ತ್ಯಜಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಖರ್ಗೆ, “”ಒಂದೆಡೆ ಹಿಂದೂ-ಮುಸ್ಲಿಂ ರಾಜಕೀಯ ಮಾಡಿದರೆ ಸಾರ್ವಜನಿಕ ಜೀವನ ಹಾಗೂ ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯಲು ತಮಗೆ ಹಕ್ಕಿಲ್ಲ ಎನ್ನುವ ಮೋದಿ, ಮತ್ತೂಂದೆಡೆ ಪ್ರತಿ ದಿನ ಅದೇ ರಾಜಕಾರಣ ಮಾಡುತ್ತಿದ್ದಾರೆ. ಹಾಗಾಗಿ, ಅವರು ರಾಜಕೀಯ ಬದುಕಿಗೆ ವಿದಾಯ ಹೇಳುವ ಮೂಲಕ ನುಡಿದಂತೆ ನಡೆಯಬೇಕು” ಎಂದು ಹೇಳಿದ್ದಾರೆ.

ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಒಟ್ಟಿಗೆ ಕರೆದೊಯ್ಯುವ ಮಾತನಾಡುವ ಬದಲು ಮತಗಳಿಗಾಗಿ ಅವರು ವಿಭಜನಕಾರಿಯಾಗಿ ಮಾತನಾಡುತ್ತಾರೆ. ದ್ವೇಷ ಭಾಷಣ ಮಾಡುತ್ತಿದ್ದಾರೆ. ಸಂವಿಧಾನ ಅಥವಾ ಮುಸ್ಲಿಮರ ವಿರುದ್ಧ ಮಾತನಾಡಿದವರನ್ನು ಮೋದಿ ಎಂದಾದರೂ ಖಂಡಿಸಿದ್ದಾರೆಯೇ ಎಂದು ಖರ್ಗೆ ಪ್ರಶ್ನಿಸಿದರು.

ಯಾವುದೇ ಸಮಾಜಕ್ಕೆ ಆದ ಅನ್ಯಾಯವನ್ನು ತಡೆಯುವುದು ತುಷ್ಟೀಕರಣ ಎನಿಸಿಕೊಳ್ಳುವುದಿಲ್ಲ. ಆದರೆ ಬಿಜೆಪಿಯವರು ಮತಕ್ಕಾಗಿ ಧ್ರುವೀಕರಣ ಮಾಡುತ್ತಿದ್ದಾರೆ. ನಾವು ಏನೇ ಮಾಡಿದರೂ ಅದನ್ನು ತುಷ್ಟೀಕರಣ ಎನ್ನುವಂತೆ ಪ್ರತಿಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಖರ್ಗೆ ಹೇಳಿದರು.

ಬಿಜೆಪಿಯನ್ನು ಇಂಡಿಯಾ ಕೂಟ ತಡೆಯಲಿದೆ: ನಮ್ಮ ಪರ ಬೆಂಬಲ  ಗುಪ್ತಗಾಮಿನಿಯಾಗಿದೆ. ಕಾಂಗ್ರೆಸ್‌ ಮತ್ತು ಇಂಡಿಯಾ ಒಕ್ಕೂಟವು ಬಿಜೆಪಿ ಬಹುಮತ ಪಡೆಯುವುದನ್ನು ತಡೆಯಲಿದೆ ಎಂದು ಹೇಳಿದರು.

ಮೋದಿ “ಸುಳ್ಳಿನ ಸರದಾರ’: ಖರ್ಗೆ

ಜಗಾಧರೀ: ಪ್ರಧಾನಿ ನರೇಂದ್ರ ಮೋದಿ “ಸುಳ್ಳಿನ ಸರದಾರ’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಹರ್ಯಾಣದಲ್ಲಿ ಮೊದಲ ಬಾರಿಗೆ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಅವರು, ನಾನು ಯಾರನ್ನೂ ಅವಹೇಳನ ಮಾಡುವುದಿಲ್ಲ. ನಾನು ಮೋದಿ ವಿರೋಧಿ ಅಲ್ಲ. ಆದರೆ, ಅವರ ಸಿದ್ಧಾಂತ ವಿರೋಧಿಸುತ್ತೇನೆ. ಕಾಂಗ್ರೆಸ್‌ ಆರ್‌ಎಸ್‌ಎಸ್‌ನ ವೈಚಾರಿಕತೆ ವಿರೋಧಿಸುತ್ತದೆ. ಮೋದಿ ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುತ್ತಿದ್ದಾರೆ, ನಾವು ಅದರ ವಿರುದ್ಧ ಹೋರಾಡುತ್ತಿದ್ದೇವೆ. ಜನರ ಹಾಗೂ ಮೋದಿ, ಬಿಜೆಪಿ ನಡುವೆ ಈಗಿನ ಹೋರಾಟ ನಡೆಯುತ್ತಿದೆ. ಬಿಜೆಪಿ ಆಡಳಿತಕ್ಕೆ ಜನ ರೋಸಿ ಹೋಗಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.