Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ


Team Udayavani, Apr 24, 2024, 9:17 PM IST

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

ನವದೆಹಲಿ: ಸಂಪತ್ತು ಮರುಹಂಚಿಕೆಯ ಭರವಸೆ ಕುರಿತು ಬಿಜೆಪಿ ಕಿಡಿಕಾರುತ್ತಿರುವ ಹೊತ್ತಿನಲ್ಲೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು, ಜಾತಿಗಣತಿಯು ತಮ್ಮ ಜೀವನದ ಗುರಿಯಾಗಿದ್ದು, ಅದನ್ನು ಯಾವ ಶಕ್ತಿಯೂ ತಡೆಯಲಾರದು ಎಂದು ಬುಧವಾರ ಹೇಳಿದ್ದಾರೆ.

ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ನ್ಯಾಯ ಸಮ್ಮೇಳನದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, “ಜಾತಿಗಣತಿಯ ಎಕ್ಸ್‌-ರೇಗೆ (ಸಂಪತ್ತು ಮರುಹಂಚಿಕೆ) ತಮ್ಮನ್ನು ತಾವು ದೇಶಭಕ್ತರು ಎಂದು ಹೇಳಿಕೊಳ್ಳುವವರು ಹೆದರಿದ್ದಾರೆ. ಆದರೆ, ಜಾತಿಗಣತಿ ನನ್ನ ಜೀವನದ ಗುರಿಯಾಗಿದ್ದು, ಯಾವ ಶಕ್ತಿಯಿಂದಲೂ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದರು.

ನಮ್ಮ ಸರ್ಕಾರ ರಚನೆಯಾಗುತ್ತಿದ್ದಂತೆ ನಾವು ಮಾಡುವ ಮೊದಲ ಕೆಲಸವೇ ಜಾತಿಗಣತಿಯಾಗಿರುತ್ತದೆ. ಮೋದಿ 16 ಲಕ್ಷ ಕೋಟಿ ರೂಪಾಯಿಯನ್ನು ಆಯ್ದ ಕೆಲವೇ ವ್ಯಕ್ತಿಗಳಿಗೆ ವರ್ಗಾವಣೆ ಮಾಡಿದ್ದಾರೆ. ಈ ಪೈಕಿ ಚಿಕ್ಕ ಮೊತ್ತವನ್ನು ಶೇ.90 ಜನರಿಗೆ ವಾಪಸ್‌ ನೀಡುತ್ತೇವೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಶೇ.90 ಜನರಿಗೆ ಭಾರೀ ಅನ್ಯಾಯ: ನನಗೆ ನ್ಯಾಯದಲ್ಲಿ ಆಸಕ್ತಿ ಇದೆಯೇ ಹೊರತು ಜಾತಿಯಲ್ಲಿ ಅಲ್ಲ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಹೇಳಿದ್ದಾರೆ.

“ದೇಶದ ಶೇ.90ರಷ್ಟು ಜನಸಂಖ್ಯೆಗೆ ಭಾರೀ ಅನ್ಯಾಯ ಮಾಡಲಾಗಿದೆ ಎಂದು ಹೇಳುತ್ತಿದ್ದೇನೆ. ಈ ಕುರಿತು ನಾವು ಏನು ಕ್ರಮ ಕೈಗೊಳ್ಳಲಿದ್ದೇವೆ‌ ಎಂದು ಈವರೆಗೂ ಹೇಳಿಲ್ಲ. ನಾನು ಹೇಳಿದ್ದಿಷ್ಟೇ; ಎಷ್ಟು ಅನ್ಯಾಯವಾಗಿದೆ ಎಂದು ತಿಳಿದುಕೊಳ್ಳೋಣ. ಇದಕ್ಕೆ ಏಕೆ ಅಡ್ಡಿ ಮಾಡಬೇಕು? ಒಂದು ವೇಳೆ ನೀವು ಗಾಯಗೊಂಡರೆ, ಎಕ್ಸ್‌-ರೇ ಮಾಡಿ ಎಂದು ಹೇಳುವುದಿಲ್ಲವೇ? ಅದಕ್ಕೆ ಯಾರಾದರೂ ಅಡ್ಡಿ ಮಾಡುತ್ತಾರೆಯೇ ಎಂದು ರಾಹುಲ್‌ ಪ್ರಶ್ನಿಸಿದರು.

ಜಾತಿಗಣತಿ ನನಗೆ ರಾಜಕೀಯವಲ್ಲ: ಜಾತಿ ಗಣತಿಯು ತಮಗೆ ರಾಜಕೀಯವಲ್ಲ ಎಂಬುದನ್ನು ಮೊದಲು ತಿಳಿದುಕೊಳ್ಳಿ ವಯನಾಡ್‌ ಸಂಸದ ಹೇಳಿಕೊಂಡಿದ್ದಾರೆ. “ಅದು ನನ್ನ ನನ್ನ ಜೀವನದ ಗುರಿ. ನಾನು ನಿಮಗೆ ಗ್ಯಾರಂಟಿ ನೀಡುತ್ತೇನೆ… ಜಾತಿಗಣತಿಯನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಜಾತಿ ಗಣತಿ ವಿಳಂಬವಾದಷ್ಟೂ ದೊಡ್ಡ ಶಕ್ತಿಯಾಗಿ ವಾಪಸ್‌ ಬರಲಿದೆ. ಹಾಗಾಗಿ, ಜೀವನದ ಗುರಿ ಮತ್ತು ರಾಜಕೀಯ ಮಧ್ಯೆ ವ್ಯತ್ಯಾಸವಿದೆ. ರಾಜಕೀಯದಲ್ಲಿ ನೀವು ಹೊಂದಾಣಿಕೆ ಮಾಡಿಕೊಳ್ಳಬಹುದು’ ಎಂದರು.

ಆತಂಕಕ್ಕೀಡಾಗಿರುವ ಪ್ರಧಾನಿ : ಕಾಂಗ್ರೆಸ್‌ನ ಕ್ರಾಂತಿಕಾರಕ ಚುನಾವಣಾ ಪ್ರಣಾಳಿಕೆಯನ್ನು ನೋಡಿದ ಬಳಿಕ ನರೇಂದ್ರ ಮೋದಿ ಅವರು ಆತಂಕಕ್ಕೀಡಾಗಿದ್ದಾರೆ. ನಮ್ಮ ಪ್ರಣಾಳಿಕೆಯು ಎಕ್ಸ್‌-ರೇ(ಜಾತಿ ಗಣತಿ) ಮತ್ತು ಮೋದಿ ಸೃಷ್ಟಿಸಿರುವ ಆದಾಯ ಅಸಮಾನತೆಯ ಬಗ್ಗೆ ಮಾತನಾಡುತ್ತಿದೆ‌ ಎಂದು ರಾಹುಲ್‌ ಗಾಂಧಿ ಅವರು ಹೇಳಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.