ಮುಂಬೈನಲ್ಲಿ ಧಾರಾಕಾರ ಮಳೆ: ಮರ ಬಿದ್ದು ಓರ್ವ ಮೃತ್ಯು
Team Udayavani, Jun 28, 2023, 8:31 PM IST
ಮುಂಬೈ: ಮಹಾರಾಷ್ಟ್ರದ ಮುಂಬೈ ಮತ್ತು ಥಾಣೆಯಲ್ಲಿ ಬುಧವಾರ ಧಾರಾಕಾರ ಮಳೆಯಾಗಿದೆ. ಉತ್ತರ ಮುಂಬೈನ ಮಲಾಡ್ನಲ್ಲಿ ಮರ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಅಂಧೇರಿಯಲ್ಲಿ 2 ಅಡಿಯಷ್ಟು ನೀರು ನಿಂತಿದ್ದು, ಮನೆಗಳು ಮತ್ತು ಕಟ್ಟಡಗಳಿಗೆ ನೀರು ನುಗ್ಗಿದೆ. ಮಳೆಯಿಂದಾಗಿ ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು. ಇನ್ನೂ 4ರಿಂದ 5 ದಿನಗಳು ಮುಂಬೈನಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ.
ಮುಂಬೈನಲ್ಲಿ ಮಂಗಳವಾರ ಮತ್ತು ಬುಧವಾರ ಒಟ್ಟು 26 ಮರಗಳು ಬಿದ್ದಿವೆ, 15 ಕಡೆಗಳಲ್ಲಿ ಶಾರ್ಟ್ ಸರ್ಕ್ನೂಟ್ ಆಗಿದೆ, ಐದು ಮನೆಗಳು ಭಾಗಶಃ ಕುಸಿದಿವೆ, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಥಾಣೆ ಜಿಲ್ಲೆಯ ಮಹಾಗಿರಿ ಕೋಳಿವಾಡ ಪ್ರದೇಶದಲ್ಲಿ ಮನೆಯ ಚಾವಣಿ ಕುಸಿದು 36 ವರ್ಷದ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.
ಇದನ್ನೂ ಓದಿ: Mangaluru: ಉದ್ಯಮಿಯ ಹನಿಟ್ರ್ಯಾಪ್ ಮಾಡಿ ಹಣ ಸುಲಿಗೆ; 7 ಮಂದಿ ಅರೆಸ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.