![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 23, 2021, 8:53 PM IST
ಪಣಜಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗೋವಾದ ಅಂಜುಣೆ ಅಣೇಕಟ್ಟಿ ಭರ್ತಿಯಾಗಿದ್ದು ಎಲ್ಲ ಬಾಗಿಲು ತೆರೆದು ನೀರು ಹೊರಬಿಡಲಾಗುತ್ತಿದೆ.
ಧಾರಾಕಾರ ಮಳೆಯಿಂದ ಕುಶಾವತಿ, ಮಹದಾಯಿ, ಶಾಪೋರಾ, ಜುವಾರಿ ನದಿ ಉಕ್ಕಿ ಹರಿಯುತ್ತಿದೆ. ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
ವರುಣನ ಅಬ್ಬರಕ್ಕೆ ನೂರಾರು ಮನೆಗಳು ಜಲಾವೃತಗೊಂಡಿದ್ದು, ಹಲವು ಮನೆಗಳು ಕುಸಿದಿರುವ ಬಗ್ಗೆ ವರದಿಯಾಗಿದೆ.
ಉತ್ತರ ಗೋವಾದ ಸತ್ತಾರಿ ಮತ್ತು ಬಿಚೊಲಿಂ ತಹಸೀಲ್ ಮತ್ತು ದಕ್ಷಿಣ ಗೋವಾದ ದರ್ಭಾಂದೋರಾ ಸೇರಿದಂತೆ ವಿವಿಧ ಭಾಗಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ.ಭಾರಿ ಮಳೆಯ ಕಾರಣ ಮಹದಾಯಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಸತ್ತಾರಿ ತಹಸೀಲ್ನಲ್ಲಿ ಗುರುವಾರ ರಾತ್ರಿಯಿಂದ ನೂರಕ್ಕೂ ಹೆಚ್ಚು ಮನೆಗಳಲ್ಲಿ ನೀರು ತುಂಬಿಕೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸತ್ತಾರಿ ತಹಸೀಲ್ನ ವಲೊಪಿ ಪಟ್ಟಣದ ವೆಲುಸ್ ಹಳ್ಳಿಯ ಅರ್ಧ ಭಾಗ ನೀರಿನಲ್ಲಿ ಮುಳುಗಿದೆ. ಸುತ್ತಮುತ್ತಲಿನ ಹಳ್ಳಿಗಳ ನಡುವಿನ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆಗಳು ಮುಳುಗಿ ಹೋಗಿವೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.