ಅತಿವೃಷ್ಟಿ ಪರಿಣಾಮ: 58 ಜನರ ಏರ್ಲಿಫ್ಟ್
ಮಹಾರಾಷ್ಟ್ರದಲ್ಲಿ ಮುಂದುವರಿದ ಭಾರೀ ಮಳೆ ; ಇಂದೂ ಶಾಲೆ-ಕಾಲೇಜುಗಳಿಗೆ ರಜೆ
Team Udayavani, Aug 5, 2019, 5:43 AM IST
ಮುಂಬಯಿ: ಧಾರಾಕಾರ ಮಳೆಯಿಂದಾಗಿ ಪ್ರವಾಹ ಸ್ಥಿತಿಯನ್ನು ಎದುರಿಸುತ್ತಿರುವ ಮಹಾ ರಾಷ್ಟ್ರಕ್ಕೆ ಈಗ ಸೇನೆಯ ಆಗಮನವಾಗಿದೆ. ಹಲವು ಪ್ರದೇಶಗಳು ಜಲಾವೃತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಕೋರಿಕೆ ಮೇರೆಗೆ ರಕ್ಷಣಾ ಕಾರ್ಯಕ್ಕಾಗಿ ನೌಕಾಪಡೆ, ವಾಯುಪಡೆ ಹಾಗೂ ಭೂಸೇನೆಯ ಸಿಬಂದಿ ಆಗಮಿಸಿದ್ದಾರೆ.
ರವಿವಾರ ಥಾಣೆ ಜಿಲ್ಲೆಯ ಗ್ರಾಮವೊಂದರಲ್ಲಿ ಸಿಲುಕಿದ್ದ 16 ಮಕ್ಕಳು ಸೇರಿದಂತೆ 58 ಮಂದಿಯನ್ನು ವಾಯುಪಡೆ ರಕ್ಷಿಸಿದೆ. ನೌಕಾಪಡೆಯ ಮೂರು ರಕ್ಷಣಾ ತಂಡಗಳು ಹಾಗೂ ಭೂಸೇನೆಯ 120 ಯೋಧರು ಥಾಣೆಗೆ ಆಗಮಿಸಿದ್ದು, ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.
400 ಮಂದಿ ಸ್ಥಳಾಂತರ: ಮುಂಬಯಿನ ಮೀಥಿ ನದಿಯಲ್ಲಿ ಪ್ರವಾಹ ಉಂಟಾಗಿರುವ ಕಾರಣ ಸಮೀಪದ ಕ್ರಾಂತಿನಗರ ವಸತಿ ಪ್ರದೇಶದ ಸುಮಾರು 400 ಮಂದಿಯನ್ನು ರವಿವಾರ ಸ್ಥಳಾಂತರಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ಪಡೆ ಹೇಳಿದೆ.
ಪುಣೆಯಲ್ಲಿ ಅಲರ್ಟ್: ರವಿವಾರ ಮುತ್ತಾ ನದಿಯಿಂದ ನೀರು ಹೊರಬಿಟ್ಟ ಹಿನ್ನೆಲೆಯಲ್ಲಿ ಪುಣೆಯಲ್ಲಿನ ತಗ್ಗುಪ್ರದೇಶಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.
45 ಗ್ರಾಮಸ್ಥರ ಏರ್ಲಿಫ್ಟ್: ದಕ್ಷಿಣ ಗುಜರಾತ್ನಲ್ಲೂ ಜಲಾವೃತಗೊಂಡ ಗ್ರಾಮಗಳ 45 ಮಂದಿ ಯನ್ನು ವಾಯುಪಡೆ ಏರ್ಲಿಫ್ಟ್ ಮಾಡಿದೆ. ಅಂಬಿಕಾ ಮತ್ತು ಪೂರ್ಣಾ ನದಿಗಳ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಗ್ಗುಪ್ರದೇಶಗಳಲ್ಲಿನ 5 ಸಾವಿರ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ಅಪಾಯ ಮಟ್ಟ ಮೀರಿದ ಗೋದಾವರಿ
ಗೋದಾವರಿ ನದಿಯು ಅಪಾಯದ ಮಟ್ಟ ಮೀರಿ ಹರಿಯ ತೊಡಗಿದ್ದು, ಗಂಗಾಪುರ ಅಣೆಕಟ್ಟಿನಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಪರಿಣಾಮ, ಮಹಾರಾಷ್ಟ್ರದ ನಾಶಿಕ್ ಜಿಲ್ಲೆಯಲ್ಲಿ ಪ್ರವಾಹ ತೀವ್ರಗೊಂಡಿದೆ. ರವಿವಾರ ಬೆಳಗ್ಗೆ 20 ಸಾವಿರ ಕ್ಯುಸೆಕ್ಗೂ ಹೆಚ್ಚು ನೀರನ್ನು ಹೊರಬಿಡಲಾಗಿದೆ. ಗೋದಾವರಿಯು 13 ಲಕ್ಷ ಕ್ಯುಸೆಕ್ನ ಗಡಿ ದಾಟಿ ಹರಿಯುತ್ತಿರುವ ಕಾರಣ, ಆಂಧ್ರಪ್ರದೇಶದ ದೋವಲೇಶ್ವರಂನಲ್ಲಿನ ಸರ್ ಆರ್ತರ್ ಕಾಟನ್ ಬ್ಯಾರೇಜ್ಗೆ ಎರಡನೇ ಬಾರಿ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ. ಆಂಧ್ರದಲ್ಲಿ ಪ್ರವಾಹದಿಂದಾಗಿ 70 ಸಾವಿರ ಮಂದಿ ಅತಂತ್ರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.