![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 13, 2022, 12:33 AM IST
ಹೊಸದಿಲ್ಲಿ: ಹವಾಮಾನ ಇಲಾಖೆಯ ಎಚ್ಚ ರಿಕೆಯಂತೆಯೇ ಹಲವು ರಾಜ್ಯಗಳಲ್ಲಿ ಮಳೆಯು ಅಬ್ಬರಿಸುತ್ತಿದೆ. ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಮಳೆ ಪ್ರಮಾಣ ಹೆಚ್ಚಿದ್ದು, ಮಹಾರಾಷ್ಟ್ರ, ಪ. ಬಂಗಾಲ, ಗೋವಾ, ಮಧ್ಯಪ್ರದೇಶ, ಉತ್ತರಾಖಂಡ, ಗುಜರಾತ್, ಆಂಧ್ರ, ಝಾರ್ಖಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.
ಮಹಾರಾಷ್ಟ್ರದ ಪುಣೆಯಲ್ಲಿ ಧಾರಾಕಾರ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿವೆ. 10 ಕಡೆ ಮರಗಳು ಧರಾಶಾಯಿಯಾಗಿವೆ. ಇನ್ನೂ 2 ದಿನ ಪುಣೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಲಾತೂರ್ ಜಿಲ್ಲೆಯಲ್ಲಿ ಕಳೆದ 4 ದಿನಗಳಿಂದ ಸುರಿದ ಮಳೆಯಿಂದಾಗಿ 100 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಗಳಿಗೆ ಹಾನಿಯಾಗಿವೆ.
2 ಸೇತುವೆಗಳು ಕೊಚ್ಚಿಹೋಗಿವೆ. ಬೀದರ್ – ನಾಂದೇಡ್ ಹೆದ್ದಾರಿಗೆ ತೀವ್ರ ಹಾನಿಯಾಗಿದ್ದು, ವಾಹನಗಳ ಸಂಚಾರಕ್ಕೂ ಅಡ್ಡಿಯಾಗಿದೆ.
ಗೋದಾವರಿ ನದಿ ಹರಿಯುತ್ತಿದ್ದು, ತೆಲಂಗಾಣಕ್ಕೆ ಪ್ರವಾಹದ ಎಚ್ಚರಿಕೆ ನೀಡ ಲಾಗಿದೆ. ಮಂಗಳವಾರ ಇಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂ ಚನೆ ನೀಡಿದೆ.
ಉತ್ತರಾಖಂಡದಲ್ಲಿ ಮಳೆ ಮುಂದುವರಿದಿದ್ದು, ಇನ್ನೂ 4 ದಿನ ಇದೇ ಸ್ಥಿತಿ ಇರಲಿದೆ. ರಾಜಸ್ಥಾನದಲ್ಲಿ ಸಿಡಿಲು ಬಡಿದು ಸೋಮವಾರ ನಾಲ್ವರು ಅಸುನೀಗಿದ್ದಾರೆ. ಒಡಿಶಾದಲ್ಲಿ ನಿರಂತರ ಮಳೆಯಾಗುತ್ತಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.