Misbehaving: ಗೋವಾದ ಪಬ್ ನಲ್ಲಿ ಯುವತಿಗೆ ಕಿರುಕುಳ ನೀಡಿದ ಪ್ರಕರಣ: ಡಿಐಜಿ ಸಸ್ಪೆಂಡ್
Team Udayavani, Aug 12, 2023, 4:47 PM IST
ಪಣಜಿ: ಗೋವಾದ ಕಲಂಗುಟ್ ಪಬ್ನಲ್ಲಿ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸ್ ಉಪಮಹಾನಿರೀಕ್ಷಕ ಎ.ಕೋನ್ ಅರವರನ್ನು ಸಸ್ಪೆಂಡ್ ಮಾಡಲಾಗಿದೆ.
ಆರೋಗ್ಯ ಸರಿಯಿಲ್ಲ ಎಂದು ರಜೆ ಪಡೆದು ಪಬ್ಗೆ ಹೋಗಿ ಕಂಠಪೂರ್ತಿ ಕುಡಿದು ಪೋಲಿಸ್ ಅಧಿಕಾರಿಯೊಬ್ಬರು ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾಗಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿತ್ತು. ಇವರು ಗೋವಾದ ಬಾಗಾದಲ್ಲಿ ಕುಡಿದ ಅಮಲಿನಲ್ಲಿ ಯುವತಿಗೆ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. ಘಟನೆಯ ಸಮಯದಲ್ಲಿ ಎ ಕೋನ್ ರವರು ಕುಡಿದ ಅಮಲಿನಲ್ಲಿದ್ದರು ಎನ್ನಲಾಗಿದೆ. ಅವರು ಕ್ಲಬ್ನಲ್ಲಿ ಯುವತಿಯೊಂದಿಗೆ ಜಗಳವಾಡಿದ್ದರು. ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದರು ಎನ್ನಲಾಗಿದೆ.
ಈ ಘಟನೆಯ ಕುರಿತ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಡಿಐಜಿ ಮಹಿಳೆಯೊಂದಿಗೆ ಮಾತಿನ ಚಕಮಕಿಯಲ್ಲಿ ತೊಡಗಿರುವುದು ಕೂಡ ಕಾಣಬಹುದಾಗಿದೆ. ಮಹಿಳೆ ಪೋಲಿಸರಿಗೆ ಕಪಾಳಮೋಕ್ಷ ಮಾಡಿದ ಬಳಿಕ ಗಲಾಟೆ ನಡೆದಿದೆ. ಪೋಲಿಸ್ ಉಪಮಹಾ ನಿರೀಕ್ಷಕ ಎ ಕೋನ್ ರವರು ಘಟನೆಯ ಸಂದರ್ಭದಲ್ಲಿ ವೈದ್ಯಕೀಯ ರಜೆಯಲ್ಲಿದ್ದರು ಎನ್ನಲಾಗಿದೆ. ಗೋವಾ ವಿಧಾನಸಭೆ ಅಧಿವೇಶನದಲ್ಲಿ ಈ ವಿಷಯ ಚರ್ಚೆಗೆ ಬಂದಿತ್ತು ಪೋಲಿಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು. ಇದೀಗ ಪೋಲಿಸ್ ಅಧಿಕಾರಿ ಎ.ಕೋನ್ ರವರನ್ನು ಸಸ್ಫೆಂಡ್ ಮಾಡಲಾಗಿದ್ದು. ಅವರ ಸ್ಥಾನಕ್ಕೆ ಮತ್ತೊಬ್ಬ ಪೋಲಿಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿಗಳು ಈ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿವೇಶನ ಕಲಾಪದಲ್ಲಿ ಭರವಸೆ ನೀಡಿದ್ದರು. ಅಂತೆಯೇ ಮುಖ್ಯಮಂತ್ರಿಗಳ ಆದೇಶದ ನಂತರ ಎ.ಕೋನ್ ರವರ ವಿರುದ್ಧ ಗೃಹ ಖಾತೆ ಕಠಿಣ ಕ್ರಮ ಜರುಗಿಸಿದೆ.
ಪಬ್ನಲ್ಲಿ ಉಚಿತ ರೂಂ…!
ಪೋಲಿಸ್ ಅಧಿಕಾರಿ ಎ.ಕೋನ್ ರವರು ಕಲಂಗುಟ್ನಲ್ಲಿರುವ ಪಬ್ಗೆ ಪದೆ ಪದೆ ತೆರಳುತ್ತಿದ್ದರು ಎನ್ನಲಾಗಿದೆ. ಇಷ್ಟೇ ಅಲ್ಲದೆಯೇ ಇವರು ಪಬ್ನಲ್ಲಿ ಉಚಿತ ರೂಂ ವ್ಯವಸ್ಥೆಯನ್ನೂ ಮಾಡಿಸಿಕೊಂಡಿದ್ದರು ಎನ್ನಲಾಗಿದೆ. ಉಚಿತ ವ್ಯವಸ್ಥೆ ನೀಡದಿದ್ದರೆ ಪಬ್ ವಿರುದ್ಧ ಕ್ರಮ ಕೈಗೊಳ್ಳುವ ಭೀತಿಯ ಹಿನ್ನೆಲೆಯಲ್ಲಿ ಪಬ್ ಮಾಲೀಕರು ಇವರಿಗೆ ಉಚಿತ ರೂಂ ವ್ಯವಸ್ಥೆ ಕಲ್ಪಿಸಿದ್ದರು ಎಂದೇ ಹೇಳಲಾಗುತ್ತಿದೆ.
ಇದನ್ನೂ ಓದಿ: S1EP- 369: ಒಂದು ನಿರ್ದಾರದಿಂದ ಅಂಬಾನಿ ಕೋಟಿ ಕೋಟಿ ಹಣ ಉಳಿಸಿಕೊಂಡರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.