ಮುಗಿಯದ ಮಹಾರಾಷ್ಟ್ರ ಸರಕಾರ – ಬಾಲಿವುಡ್‌ ನಟಿ ಜಟಾಪಟಿ: ಸೋನಿಯಾ ಮಧ್ಯ ಪ್ರವೇಶಕ್ಕೆ ಆಗ್ರಹ

ನಿಮ್ಮ ಮೌನವನ್ನು ಇತಿಹಾಸ ನೆನಪಿಟ್ಟುಕೊಳ್ಳಲಿದೆ ಎಂದ ನಟಿ ಕಂಗನಾ

Team Udayavani, Sep 12, 2020, 6:15 AM IST

ಮುಗಿಯದ ಮಹಾರಾಷ್ಟ್ರ ಸರಕಾರ – ಬಾಲಿವುಡ್‌ ನಟಿ ಜಟಾಪಟಿ: ಸೋನಿಯಾ ಮಧ್ಯ ಪ್ರವೇಶಕ್ಕೆ ಆಗ್ರಹ

ಭೋಪಾಲ್‌ನಲ್ಲಿ ಮಹಾರಾಷ್ಟ್ರ ಸರಕಾರದ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ.

ಮುಂಬೈ: ಮಹಾರಾಷ್ಟ್ರ ಸರಕಾರದೊಂದಿಗೆ ಜಿದ್ದಿಗೆ ಬಿದ್ದಿರುವ ಬಾಲಿವುಡ್‌ ನಟಿ ಕಂಗನಾ ರಣೌತ್‌ ಈಗ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ­ಗಾಂಧಿಯವರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದ್ದಾರೆ. ಜತೆಗೆ, ನಿಮ್ಮ ಮೌನವನ್ನು ಇತಿಹಾಸ ನೆನಪಿ­ಟ್ಟು­ಕೊಳ್ಳಲಿದೆ ಎಂದಿದ್ದಾರೆ.

ಶುಕ್ರವಾರ ಟ್ವೀಟ್‌ ಮಾಡಿರುವ ಕಂಗನಾ, “ಗೌರವಾನ್ವಿತ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರೇ, ನೀವೂ ಒಬ್ಬ ಮಹಿಳೆಯಾಗಿ ಮಹಾರಾಷ್ಟ್ರದಲ್ಲಿರುವ ನಿಮ್ಮ ಸರಕಾರವು ನನ್ನನ್ನು ನಡೆಸಿಕೊಂಡ ರೀತಿ ನಿಮಗೆ ದುಃಖ ತಂದಿಲ್ಲವೇ? ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವಂತೆ ನಿಮ್ಮ ಸರಕಾರಕ್ಕೆ ನೀವು ಕೋರಬಲ್ಲಿರಾ?’ ಎಂದು ಪ್ರಶ್ನಿಸಿದ್ದಾರೆ.

ಜತೆಗೆ, “ನೀವು ಪಾಶ್ಚಿಮಾತ್ಯ ರಾಷ್ಟ್ರದಲ್ಲಿ ಬೆಳೆದಿದ್ದೀರಿ, ಭಾರತದಲ್ಲಿ ಬದುಕಿದ್ದೀರಿ. ಮಹಿಳೆಯರ ಕಷ್ಟಗಳು ನಿಮಗೆ ಗೊತ್ತು. ಈಗ ನಿಮ್ಮದೇ ಸರಕಾರ ಒಬ್ಬ ಹೆಣ್ಣಿನ ಮೇಲೆ ದೌರ್ಜನ್ಯ ಎಸಗುತ್ತಿದೆ. ಕಾನೂನು ಸುವ್ಯವಸ್ಥೆ­ಯನ್ನು ಅಣಕವಾಡುತ್ತಿದೆ. ಇಂಥ ಹೊತ್ತಲ್ಲೂ ನೀವು ಸುಮ್ಮನಿದ್ದರೆ, ನಿಮ್ಮ ಮೌನವನ್ನು ಇತಿಹಾಸ ಕ್ಷಮಿಸುವುದಿಲ್ಲ. ಈ ವಿಚಾರದಲ್ಲಿ ನೀವು ಮಧ್ಯಪ್ರವೇಶಿಸುತ್ತೀರಿ ಎಂದು ನಂಬಿದ್ದೇನೆ’ ಎಂದೂ ಕಂಗನಾ ಹೇಳಿದ್ದಾರೆ.

ರಾಜ್ಯಪಾಲರ ಭೇಟಿಯಾದ ಅಠಾವಳೆ: ಇದೇ ವೇಳೆ, ಕೇಂದ್ರ ಸಚಿವ ರಾಮದಾಸ್‌ ಅಠಾವಳೆ ಶುಕ್ರವಾರ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಅವರನ್ನು ಭೇಟಿಯಾಗಿ, ಕಂಗನಾಗೆ ನ್ಯಾಯ ಒದಗಿಸುವಂತೆ ಕೋರಿದ್ದಾರೆ. ಜತೆಗೆ, ಅವರ ಬಂಗಲೆಗೆ ಭಾಗಶಃ ಹಾನಿ­ಯಾಗಿದ್ದು, ಅದಕ್ಕಾಗಿ ಪರಿಹಾರ ಒದಗಿ­ಸು­ವಂತೆಯೂ ಮನವಿ ಮಾಡಿದ್ದಾರೆ. ಗುರು­ವಾರವಷ್ಟೇ ಅಠಾವಳೆ ಅವರು ಕಂಗನಾ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದರು.

ಕಂಗನಾ ಅಭಿಮಾನಿ ಅರೆಸ್ಟ್‌: ಶಿವಸೇನೆ ಸಂಸದ ಸಂಜಯ್‌ ರಾವತ್‌ಗೆ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ಕಂಗನಾ ಅಭಿಮಾನಿಯೆನ್ನಲಾದ ಯುವಕನನ್ನು ಕೋಲ್ಕತ್ತಾದಲ್ಲಿ ಪೊಲೀಸರು ಬಂಧಿ­ಸಿದ್ದಾರೆ. ಕಂಗನಾ ಮತ್ತು ಮಹಾ ಸರಕಾರದ ನಡುವೆ ನಡೆ­ಯು­ತ್ತಿರುವ ಜಟಾಪಟಿಗೆ ಸಂಬಂಧಿಸಿ ಪ್ರತಿಕ್ರಿಯಿಸಿದ್ದ ಕೋಲ್ಕತ್ತಾದ ಪಲಾಶ್‌ ಘೋಷ್‌, ಶಿವಸೇನೆ ನಾಯಕನಿಗೆ ಬೆದರಿಕೆ ಹಾಕಿದ್ದ. ಈ ಮಾಹಿತಿ ಪಡೆದ ಮುಂಬೈ ಪೊಲೀ­ಸರು ಕೋಲ್ಕತ್ತಾಗೆ ತೆರಳಿ ಅಲ್ಲಿನ ಪೊಲೀಸರ ನೆರವಿನೊಂದಿಗೆ ಆತನನ್ನು ಬಂಧಿಸಿದ್ದಾರೆ.

ದಾವೂದ್‌ ಬಂಗಲೆ ಕಾಣುತ್ತಿಲ್ಲವೇ?: ಶುಕ್ರವಾರ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ದೇವೇಂದ್ರ ಫ‌ಡ್ನವೀಸ್‌, “ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಕಟ್ಟಡಗಳನ್ನು ಕೆಡವದ ನೀವು ಕಂಗನಾ ಬಂಗಲೆಯನ್ನೇಕೆ ಕೆಡವಿದ್ದೀರಿ’ ಎಂದು ಮಹಾರಾಷ್ಟ್ರ ಸರಕಾರವನ್ನು ಪ್ರಶ್ನಿಸಿದ್ದಾರೆ.

ಸುರಕ್ಷತಾ ನಿಯಮ ಉಲ್ಲಂಘಿಸಿದ ಮಾಧ್ಯ­ಮ­ಗಳು: ಬುಧವಾರ ಕಂಗನಾ ಅವರು ಆಗ­ಮಿಸಿದ ಚಂಡಿಗಡ-ಮುಂಬೈ ಇಂಡಿಗೋ ವಿಮಾ­­ನದಲ್ಲಿ ಮಾಧ್ಯಮ ಪ್ರತಿನಿಧಿಗಳು ಸುರಕ್ಷತಾ ನಿಯಮವನ್ನು ಉಲ್ಲಂ ಸಿರು­ವುದು ಬೆಳಕಿಗೆ ಬಂದಿದೆ. ಸುರಕ್ಷತೆ ಹಾಗೂ ಸಾಮಾ­ಜಿಕ ಅಂತರ ಕಾಯ್ದುಕೊಳ್ಳುವಿಕೆ ನಿಯ­ ಮ­ಗಳನ್ನು ಗಾಳಿಗೆ ತೂರಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಹೀಗಾಗಿ ಈ ಕುರಿತು ವರದಿ ನೀಡುವಂತೆ ಇಂಡಿಗೋ ಏರ್‌ಲೈನ್ಸ್‌ಗೆ ನಾಗರಿಕ ವಿಮಾನ­ಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ಸೂಚಿಸಿದೆ.

ಲಾಕ್‌ಡೌನ್‌ ವೇಳೆ 500 ಗ್ರಾಂ. ಗಾಂಜಾ ಕೊರಿಯರ್‌!
ಕೋರ್ಟ್‌ನಲ್ಲಿ ರಿಯಾ ಜಾಮೀನಿಗೆ ಪ್ರಬಲ ವಿರೋಧ ವ್ಯಕ್ತಪಡಿಸಿದ ಎನ್‌ಸಿಬಿ, ಏಪ್ರಿಲ್‌ನಲ್ಲಿ ಲಾಕ್‌ಡೌನ್‌ ವೇಳೆ ರಿಯಾ ಮತ್ತು ಸುಶಾಂತ್‌ 500 ಗ್ರಾಂ ಗಾಂಜಾವನ್ನು ಕೊರಿಯರ್‌ ಮೂಲಕ ತರಿಸಿಕೊಂಡಿದ್ದರು ಎಂದು ಹೇಳಿದೆ. ಲಾಕ್‌ಡೌನ್‌ ವೇಳೆ ರಿಯಾ ಮನೆಯಲ್ಲಿ ಕೆಲಕಾಲ ತಂಗಲು ಸುಶಾಂತ್‌ ನಿರ್ಧರಿಸಿದ್ದರು. ಅದಕ್ಕಾಗಿ ರಿಯಾ ಮನೆಗೇ ಗಾಂಜಾವನ್ನು ತರಿಸಿಕೊಳ್ಳಲು ನಿರ್ಣಯಿಸಿ, ಕೊರಿಯರ್‌ ಕಂಪನಿಯನ್ನು ಸಂಪರ್ಕಿಸಿದ್ದರು ಮತ್ತು 500 ಗ್ರಾಂ. ಗಾಂಜಾ ತರಿಸಿಕೊಂಡಿದ್ದರು ಎಂದು ಎನ್‌ಸಿಬಿ ತಿಳಿಸಿದೆ. ಈಗ ಇವರಿಗೆ ಜಾಮೀನು ನೀಡಿದರೆ, ಸಾಕ್ಷ್ಯನಾಶ ಮಾಡುವ ಸಾಧ್ಯತೆಯಿದೆ ಎಂದೂ ಎನ್‌ಸಿಬಿ ಕೋರ್ಟ್‌ಗೆ ಹೇಳಿದೆ.

ರಿಯಾ, ಶೋವಿಕ್‌ಗಿಲ್ಲ ಜಾಮೀನು
ಡ್ರಗ್‌ ಪ್ರಕರಣ ಸಂಬಂಧ ಬಂಧಿತರಾಗಿರುವ ರಿಯಾ ಚಕ್ರವರ್ತಿ, ಸೋದರ ಶೋವಿಕ್‌ ಹಾಗೂ ಇತರೆ ನಾಲ್ವರ ಜಾಮೀನು ಅರ್ಜಿಗಳನ್ನು ಶುಕ್ರವಾರ ಮುಂಬೈನ ವಿಶೇಷ ಕೋರ್ಟ್‌ ವಜಾ ಮಾಡಿದೆ. ಹೀಗಾಗಿ, ಸದ್ಯ ಎಲ್ಲ ಆರೋಪಿಗಳೂ ನ್ಯಾಯಾಂಗ ವಶದಲ್ಲೇ ಮುಂದು­ವರಿಯುವಂತಾಗಿ­ದೆ. ತನಿಖೆಯು ಮಹತ್ವದ ಘಟ್ಟದಲ್ಲಿ­ರುವ ಕಾರಣ ಈಗ ಜಾಮೀನು ನೀಡಲಾಗದು ಎಂದು ಕೋರ್ಟ್‌ ಹೇಳಿದೆ. ನನ್ನನ್ನು ಈ ಕೇಸಿನಲ್ಲಿ ಸುಖಾಸುಮ್ಮನೆ ಸಿಲುಕಿಸಲಾಗಿದೆ ಎಂದು ರಿಯಾ ವಾದಿಸಿದ್ದು, ಬಲವಂತವಾಗಿ ತಪ್ಪೊಪ್ಪಿಗೆ ಹೇಳಿಕೆ ಪಡೆಯಲಾಗಿದೆ ಎಂದೂ ಆರೋಪಿಸಿದ್ದಾರೆ.

ಉದ್ಧವ್‌ ಅಯೋಧ್ಯೆ ಭೇಟಿಗೆ ವಿರೋಧ
ಕಂಗನಾ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ ವಿರುದ್ಧ ಅಯೋಧ್ಯೆಯ ಸಾಧು-ಸಂತರು ಹಾಗೂ ವಿಶ್ವ ಹಿಂದೂ ಪರಿಷತ್‌ ಗರಂ ಆಗಿದ್ದಾರೆ. ಉದ್ಧವ್‌ ಮತ್ತು ಶಿವಸೇನೆಗೆ ಇನ್ನು ಅಯೋಧ್ಯೆಗೆ ಸ್ವಾಗತವಿಲ್ಲ. ಅವರೇನಾದರೂ ಇಲ್ಲಿಗೆ ಬಂದರೆ ಇಲ್ಲಿನ ಸಾಧು-ಸಂತರ ಪ್ರಬಲ ವಿರೋಧ ಎದುರಿಸಬೇಕಾಗುತ್ತದೆ ಎಂದು ಹನುಮಾನ್‌ ಗಡಿ ದೇಗುಲದ ಅರ್ಚಕ ರಾದ ಮಹಾಂತ ರಾಜು
ದಾಸ್‌ ಹೇಳಿದ್ದಾರೆ.

 

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.