![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 17, 2023, 1:06 PM IST
ಆಂಧ್ರ ಪ್ರದೇಶ: ಲಾರಿ – ಆಟೋ ರಿಕ್ಷಾ ನಡುವಿನ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಬುಧವಾರ(ಮೇ.17 ರಂದು) ಮುಂಜಾನೆ ನಡೆದಿದೆ.
ಗುಡೂರು ಕಡೆಯಿಂದ ಬರುತ್ತಿದ್ದ ಲಾರಿ ತೆಲಂಗಾಣದ ನಲ್ಗೊಂಡ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾದಲ್ಲಿದ್ದ 6 ಮಹಿಳಾ ಕಾರ್ಮಿಕರು ಮೃತಪಟ್ಟಿದ್ದು, ಇನ್ನು 6 ಮಂದಿ ಗಾಯಗೊಂಡಿದ್ದಾರೆ. ಅಪಘಾತ ಮಾಡಿ ಲಾರಿ ಸ್ಥಳದಿಂದ ಪರಾರಿಯಾಗಿದೆ ಎಂದು ವರದಿ ತಿಳಿಸಿದೆ.
ಮೃತ ಮಹಿಳಾ ಕಾರ್ಮಿಕರು ಮೆಣಸಿನಕಾಯಿ ಕೊಯ್ಲು ಕೆಲಸಕ್ಕಾಗಿ ಪಲ್ನಾಡು ಜಿಲ್ಲೆಯ ಪುಲಿಪಾಡು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಸದ್ಯ ಪರಾರಿಯಾದ ಲಾರಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.