ಬತ್ತಿದ ನದಿಯಲ್ಲಿ ಚಿಮ್ಮಿತು ಜೀವಜಲ; ಇದು ಗ್ರಾಮಸ್ಥರ ಶ್ರಮದ ಫ‌ಲ


Team Udayavani, May 8, 2017, 9:50 AM IST

River-Purification-8-5.jpg

ಆಲಪ್ಪುಝ: ಇದು ಕೈಗಾರಿಕೆ, ಮರಳು ಮಾಫಿಯಾದ ಕೈಗೆ ಸಿಲುಕಿ ಬತ್ತಿ ಹೋಗಿದ್ದ ನದಿ ಮರುಜನ್ಮ ಪಡೆದ ಕಥೆ. ಈ ಜೀವಜಲದ ಮರುಹರಿವಿನಲ್ಲಿ ಗ್ರಾಮಸ್ಥರ ಬೆವರಿದೆ, ಮಹಿಳೆಯರ ಅವಿರತ ಶ್ರಮವಿದೆ. ಹೌದು. ಅದು ಕೇರಳದ ಆಲಪ್ಪುಝ ಜಿಲ್ಲೆಯ ಕುಟ್ಟೆಂಪೆರೂರ್‌ ನದಿ. ಒಂದು ಕಾಲದಲ್ಲಿ ಮೈದುಂಬಿ ಹರಿಯುತ್ತಿದ್ದ ನದಿ, 2 ದಶಕದಿಂದ ಹತ್ತಿರ ಸುಳಿಯಲೂ ಸಾಧ್ಯವಾಗದ ಪರಿಸ್ಥಿತಿಗೆ ಬಂದಿತ್ತು. ಒಂದೆಡೆ ಅಕ್ರಮ ಮರಳು ಗಣಿಗಾರಿಕೆಯು ನದಿಯ ಒಡಲನ್ನು ಬರಿದಾಗಿಸಿದರೆ, ನಿರ್ಮಾಣ ಕಾಮಗಾರಿಗಳ ಟನ್‌ಗಟ್ಟಲೆ ತ್ಯಾಜ್ಯಗಳು, ನದಿಯೊಳಗಣ ಜಲಚರಗಳನ್ನು ನಾಶ ಮಾಡಿತ್ತು. 120 ಅಡಿ ಅಗಲವಿದ್ದ ನದಿಯು 20 ಅಡಿಗೆ ಸಂಕುಚಿತಗೊಂಡು, ರೋಗ ಹರಡುವ ತಾಣವಾಗಿ ಮಾರ್ಪಾಟಾಯಿತು.

ಒಂದಾದರು ಗ್ರಾಮಸ್ಥರು: ತುಂಬಿ ತುಳುಕುತ್ತಿದ್ದ ನದಿಯಲ್ಲಿ ಈಜಾಡುತ್ತಾ, ಅದರ ದಡದಲ್ಲಿ ಆಡುತ್ತಾ ಬೆಳೆದಿದ್ದ ಗ್ರಾಮಸ್ಥರಿಗೆ ಅದರ ಸ್ಥಿತಿ ನೋಡಲಾಗಲಿಲ್ಲ. ಜತೆಗೆ, ನೀರಿನ ಕೊರತೆಯೂ ತೀವ್ರವಾಗತೊಡಗಿತು. ಇದಕ್ಕೊಂದು ಪರಿಹಾರ ಕಂಡುಕೊಳ್ಳಲೇಬೇಕು ಎಂಬ ದೃಢ ನಿರ್ಧಾರಕ್ಕೆ ಬಂದು, 700ರಷ್ಟು ಗ್ರಾಮಸ್ಥರು ಅದರಲ್ಲೂ ಹೆಚ್ಚಿನವರು ಮಹಿಳೆಯರು ನದಿಗೆ ಇಳಿದೇ ಬಿಟ್ಟರು. ಪ್ರಾಣವನ್ನೇ ಪಣಕ್ಕಿಟ್ಟು, ಕುಟ್ಟೆಂಪೆರೂರ್‌ ನದಿಯ ಒಡಲಲ್ಲಿ ತುಂಬಿದ್ದ ಅಪಾಯಕಾರಿ ತ್ಯಾಜ್ಯಗಳು, ಪ್ಲಾಸ್ಟಿಕ್‌ಗಳು, ಆಲ್ಗೆಗಳನ್ನು ಹೊರತೆಗೆಯಲಾರಂಭಿಸಿದರು. ಒಂದೆರಡಲ್ಲ, ಬರೋಬ್ಬರಿ 70 ದಿನಗಳ ಕಾಲ ಈ ಕೆಲಸ ನಡೆಯಿತು. ಡೆಂಗ್ಯೂಯಂಥ ರೋಗಗಳು ಜತೆಯಾದರೂ ಅವರು ಎದೆಗುಂದಲಿಲ್ಲ. ಒಂದೆರಡು ದಿನ ವಿರಮಿಸಿ, ಮತ್ತೆ ಕೆಲಸ ಆರಂಭಿಸಿದರು. ಉದ್ಯೋಗ ಖಾತ್ರಿ ಯೋಜನೆಯನ್ನೂ ಇದಕ್ಕಾಗಿ ಬಳಸಿದರು.


45ನೇ ದಿನಕ್ಕೆ ಹರಿವು ಆರಂಭ

45 ದಿನಗಳ ಬಳಿಕ ಇವರ ಸತತ ಪರಿಶ್ರಮದ ಫ‌ಲ ಕಾಣಲಾರಂಭಿಸಿತು. ನಿಧಾನವಾಗಿ ನೀರಿನ ಹರಿವು ಹೆಚ್ಚತೊಡಗಿತು. 70 ದಿನ ತುಂಬುತ್ತಿದ್ದಂತೆ ಜೀವಜಲ ಮೊದಲಿನಂತೆ ಉಕ್ಕತೊಡಗಿತು. ಜೀವನಾಡಿಗೆ ಪುನಶ್ಚೇತನ ನೀಡಿದ ಗ್ರಾಮಸ್ಥರು ಕುಣಿದು ಕುಪ್ಪಳಿಸಿದರು. ಈಗ ಕುಟ್ಟೆಂಪೆರೂರ್‌ ನದಿಗೆ ಮರುಜೀವ ಸಿಕ್ಕಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.