ಹೇಳಿಕೆ ತಿರುಚಿದ್ದಕ್ಕೆ ಸಚಿವ ಗಡ್ಕರಿ ಕೆಂಡ: ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ
Team Udayavani, Aug 25, 2022, 8:00 PM IST
ನವದೆಹಲಿ: ತಮ್ಮ ಹೇಳಿಕೆಗಳನ್ನು ತಿರುಚಿ ರಾಜಕೀಯ ಲಾಭಕ್ಕಾಗಿ ಕಥೆ ಕಟ್ಟುತ್ತಿರುವವರ ವಿರುದ್ಧ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ಹರಿಹಾಯ್ದಿದ್ದಾರೆ. ಜತೆಗೆ, ಸರ್ಕಾರ ಮತ್ತು ಪಕ್ಷದ ಹಿತಾಸಕ್ತಿಯಿಂದ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸುಳಿವನ್ನೂ ನೀಡಿದ್ದಾರೆ.
ಕಳೆದ ವಾರವಷ್ಟೇ ಬಿಜೆಪಿ ಸಂಸದೀಯ ಮಂಡಳಿಯಿಂದ ಗಡ್ಕರಿ ಅವರನ್ನು ಕೈಬಿಡಲಾಗಿತ್ತು. ತದನಂತರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, ಗ್ರಾಮವೊಂದರ ರಸ್ತೆ ನಿರ್ಮಾಣದ ವೇಳೆ ಅಧಿಕಾರಿಯೊಬ್ಬರಿಗೆ ತಾವು ಎಚ್ಚರಿಕೆ ನೀಡಿದ್ದನ್ನು ಸ್ಮರಿಸಿದ್ದ ಅವರು, “ಪರಿಣಾಮಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ಕೆಲಸವನ್ನು ನಾನು ಮಾಡುತ್ತೇನೆ. ಸಾಧ್ಯವಿದ್ದರೆ ನನ್ನ ಜೊತೆಗೆ ನಿಲ್ಲಿ. ಇಲ್ಲದಿದ್ದರೂ ನಾನೇನೂ ಚಿಂತೆ ಮಾಡುವುದಿಲ್ಲ ಎಂದಿದ್ದೆ’ ಎಂದು ಹೇಳಿದ್ದರು. ಇದನ್ನು ಕೆಲವು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ “ಗಡ್ಕರಿ ಅವರು ಸಂಸದೀಯ ಮಂಡಳಿಯಲ್ಲಿ ಹುದ್ದೆ ಕಳೆದುಕೊಂಡಿದ್ದನ್ನು ಪರೋಕ್ಷವಾಗಿ ಪ್ರಸ್ತಾಪಿಸಿ ಈ ಹೇಳಿಕೆ ನೀಡಿದ್ದರು’ ಎಂದು ಪ್ರಕಟಿಸಲಾಗಿದೆ.
ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗಡ್ಕರಿ, “ಇಂಥ ದುರುದ್ದೇಶಪೂರಿತ ಅಜೆಂಡಾಗಳಿಂದ ನಾನು ಡಿಸ್ಟರ್ಬ್ ಆಗಲ್ಲ. ಆದರೆ, ಇನ್ನು ಮುಂದೆ ಈ ರೀತಿ ನನ್ನ ಹೇಳಿಕೆ ತಿರುಚಿದರೆ ಕಾನೂನು ಕ್ರಮ ಕೈಗೊಳ್ಳಲು ನಾನು ಹಿಂಜರಿಯುವುದಿಲ್ಲ’ ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.