Budget 2024; ಬಿಹಾರ, ಆಂಧ್ರಕ್ಕೆ ಸಿಂಹಪಾಲು ಸಿಕ್ಕಿದ್ದು ಹೇಗೆ?


Team Udayavani, Jul 24, 2024, 6:35 AM IST

How did Bihar and Andhra get the major share in budget 2024

ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ಬಿಹಾರ ಮತ್ತು ಆಂಧ್ರಪ್ರದೇಶ ರಾಜ್ಯಗಳಿಗೆ ಅನುದಾನದಲ್ಲಿ ಅಗ್ರಸ್ಥಾನ ಸಿಕ್ಕಿದೆ.

ಕೇಂದ್ರದ ಎನ್‌ಡಿಎ ಸರ್ಕಾರದ ಪ್ರಮುಖ ಪಿಲ್ಲರ್‌ಗಳು ಎಂದೇ ಬಿಂಬಿತವಾದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ, ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಮೋದಿ 3.0 ಸರ್ಕಾರಕ್ಕೆ ಕಾರಣೀಭೂತವಾದವು. ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಕ್ಕೆ ಕುಸಿದಾಗ ತಲಾ 16 ಮತ್ತು 12 ಜನ ಲೋಕಸಭಾ ಸದಸ್ಯರನ್ನು ಹೊಂದಿರುವ ಈ ಪಕ್ಷಗಳು ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಹೆಗಲಾದವು. ಇದನ್ನೇ ಅಸ್ತ್ರವಾಗಿಟ್ಟುಕೊಂಡ ಈ ಎರಡು ಪಕ್ಷಗಳು ಈಗ ಕೇಂದ್ರ ಬಜೆಟ್‌ನಲ್ಲಿ ಸಾಕಷ್ಟು ಅನುದಾನ ಪಡೆಯುವ ಮೂಲಕ ಗೆಲುವಿನ ನಗೆ ಬೀರಿವೆ.

ಆರಂಭದಲ್ಲಿ ಕೇಂದ್ರ ಸಂಪುಟದಲ್ಲಿ ಪ್ರಮುಖ ಖಾತೆಗಳು, ಸ್ಪೀಕರ್‌ ಪೋಸ್ಟ್‌, ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಪಡೆಯಲು ಈ ಎರಡೂ ಪಕ್ಷಗಳು ಪಟ್ಟು ಹಾಕಲಿವೆ ಎಂದು ಊಹಿಸಲಾಗಿತ್ತು. ಆದರೆ ವಿಶೇಷ ಸ್ಥಾನಮಾನದ ಬದಲು “ವಿಶೇಷ ಸಹಾಯ’ ಪಡೆಯುವಲ್ಲಿ ಟಿಡಿಪಿ ಮತ್ತು ಜೆಡಿಯು ಯಶಸ್ವಿಯಾಗಿವೆ. ನಿರ್ಮಲಾ ಸೀತಾರಾಮನ್‌ ಅವರು ಆಂಧ್ರಕ್ಕೆ ವಿಶೇಷ ಯೋಜನೆಗಳನ್ನು ಪ್ರಕಟಿಸುತ್ತಿದ್ದಂತೆ ಟಿಡಿಪಿ ಸದಸ್ಯರು ಥಂಬ್‌ ಎತ್ತಿ ಗೆಲುವಿನ ನಗೆ ಸೂಸಿದರು.

ಬಿಹಾರಕ್ಕೆ ಸಿಕ್ಕಿದ್ದೇನು?

ಬಿಹಾರಕ್ಕೆ ವಿಶೇಷ ಅನುದಾನಗಳನ್ನು ನೀಡಲಾಗಿದ್ದು ಮೂಲಭೂತ ಸೌಕರ್ಯದ ಅಭಿವೃದ್ಧಿಗಾಗಿ ಒಟ್ಟು 26,000 ಕೋಟಿ ರೂ. ನೀಡಲಾಗಿದೆ. ಇದರ ಅಡಿಯಲ್ಲಿ ಬಿಹಾರದ ಹಲವು ಪ್ರಮುಖ ರಸ್ತೆ ಮಾರ್ಗಗಳ ಅಭಿವೃದ್ಧಿಗಾಗಿ ಅನುದಾನ ನೀಡಲಾಗಿದೆ. ಇದು ಪಾಟ್ನಾ-ಪೂರ್ನಿಯಾ ಎಕ್ಸ್‌ಪ್ರೆಸ್‌ ವೇ, ಬಕ್ಸಾರ್‌-ಬಗಲ್ಪುರ ಎಕ್ಸ್‌ಪ್ರೆಸ್‌ ವೇ, ಬೋಧಗಯಾ-ರಾಜಗೀರ್‌-ವೈಶಾಲಿ-ದರ್ಬಾಂಗ ರಸ್ತೆ ಜತೆಗೆ ಬಕ್ಸಾರ್‌ನಲ್ಲಿ ಗಂಗಾ ನದಿಗೆ ದ್ವಿಪಥ ಸೇತುವೆ ನಿರ್ಮಾಣದ ಯೋಜನೆಯನ್ನು ಒಳಗೊಂಡಿದೆ. ಪ್ರವಾಹದಿಂದ ನಲುಗುತ್ತಿರುವ ಪೂರ್ವ ರಾಜ್ಯಕ್ಕೆ ನೆರೆ ನಿರ್ವಹಣೆಗಾಗಿ 11,500 ಕೋಟಿ ರೂ. ಅನುದಾನ ನೀಡಲಾಗಿದೆ.

ವಿದ್ಯುತ್‌ಗಾಗಿ 21 ಸಾವಿರ ಕೋಟಿ ರೂ.:  ಬಿಹಾರದಲ್ಲಿ ವಿದ್ಯುತ್‌ ಸ್ಥಾವರಕ್ಕಾಗಿ 21,400 ಕೋಟಿ ರೂ. ಅನುದಾನ ಘೋಷಣೆಯಾಗಿದ್ದು, ಪೀರ್‌ಪೈಂತಿಯಲ್ಲಿ 2400 ಮೆಗಾ ವ್ಯಾಟ್‌ನ ವಿದ್ಯುತ್‌ ಸ್ಥಾವರವನ್ನು ನಿರ್ಮಿಸಲಾಗುವುದು. ಜತೆಗೆ ಬಿಹಾರದಲ್ಲಿ ಹೊಸ ವಿಮಾನ ನಿಲ್ದಾಣಗಳು, ವೈದ್ಯಕೀಯ ಕಾಲೇಜುಗಳು ಹಾಗೂ ಕ್ರೀಡಾ ಮೂಲಸೌಕರ್ಯಕ್ಕೂ ಒತ್ತು ನೀಡಲಾಗಿದೆ.

ಬಿಹಾರ ಪ್ರವಾಸೋದ್ಯಮಕ್ಕೆ ಒತ್ತು: ಬಿಹಾರದಲ್ಲಿ ಜಾಗತಿಕ ಪ್ರವಾಸೋದ್ಯಮ ವೃದ್ಧಿಯಾಗುವ ಸಲುವಾಗಿ ಇಲ್ಲಿನ ಪುರಾತನ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಮನ್ನಣೆ ನೀಡಲಾಗಿದೆ. ಕಾಶಿ ವಿಶ್ವನಾಥ ಕಾರಿಡಾರ್‌ ರೀತಿಯಲ್ಲಿಯೇ ಬೋಧಗಯಾದಲ್ಲಿರುವ ಮಹಾಬೋಧಿ ದೇವಾಲಯದಲ್ಲೂ ವಿಶ್ವ ದರ್ಜೆಯ ಕಾರಿಡಾರ್‌ ನಿರ್ಮಿಸಲು ಅನುದಾನ ಘೋಷಣೆಯಾಗಿದೆ. ಭಾರತದ ಪ್ರಾಚೀನ ವಿಶ್ವವಿದ್ಯಾಯಲವಾದ ನಳಂದಾವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ.  ಇದರ ಜತೆಗೆ ನಳಂದ-ರಾಜಗೀರ್‌ ಕಾರಿಡಾರ್‌ ಅಡಿ ರಾಜ್‌ಗೀರ್‌ ಅಥವಾ “ಪುರಾತನ ರಾಜಗೃಹ’ದ ಸರ್ವತೋಮುಖ ಬೆಳವಣಿಗೆಗಾಗಿ ಒತ್ತು ನೀಡಲಾಗಿದೆ.

“ವಿಕಸಿತ ಭಾರತ’ ಸಾಧನೆಗಾಗಿ ಪೂರ್ವೋದಯ ಯೋಜನೆಯನ್ನು ಪರಿಚಯಿಸಿದ್ದು, ಇದರ ಅಡಿಯಲ್ಲಿ ಪೂರ್ವ ರಾಜ್ಯಗಳಾದ ಬಿಹಾರ, ಜಾರ್ಖಂಡ್‌, ಪಶ್ಚಿಮ ಬಂಗಾಳ, ಒಡಿಶಾ ಹಾಗೂ ಆಂಧ್ರ ಪ್ರದೇಶಗಳ ಮೂಕಸೌಕರ್ಯಕ್ಕಾಗಿ ವಿಶೇಷ ಅನುದಾನ ನೀಡಲಾಗುತ್ತಿದೆ. ಇದಲ್ಲದೇ ಬಿಹಾರದ ಸರ್ವತೋಮುಖ ಅಭಿವೃದ್ಧಿಗಾಗಿ ಬಾಹ್ಯ ಸಹಾಯದ ಘೋಷಣೆಯಾಗಿದ್ದು, ಬಂಡವಾಳ ಹೂಡಿಕೆಗಳನ್ನು ಬೆಂಬಲಿಸುವ ಸಲುವಾಗಿ ಹೆಚ್ಚುವರಿ ಆರ್ಥಿಕ ಸಹಾಯ ಒದಗಿಸಲಾಗುವುದು.

ಆತ್ಮನಿರ್ಭರ ಬಿಹಾರ ನಿರ್ಮಾಣ

ಬಿಹಾರಕ್ಕೆ ನೀಡಿರುವ ಕೊಡುಗೆಗಳನ್ನು ಸ್ವಾಗತಿಸಿರುವ ಆಡಳಿತಾರೂಡ ಜೆಡಿಯು, ರಾಜ್ಯವನ್ನು ಆತ್ಮನಿರ್ಭರಗೊಳಿಸುವಲ್ಲಿ ಈ ಯೋಜನೆಗಳು ಮಹತ್ವದ ಹೆಜ್ಜೆಯಾಗಿವೆ ಎಂದಿದೆ. ಬಿಹಾರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ 26,000 ಕೋಟಿ ರೂ. ಹಾಗೂ ಪ್ರವಾಹಪೀಡಿತ ಪ್ರದೇಶಗಳ ನಿರ್ವಹಣೆಗಾಗಿ 11,500 ಕೋಟಿ ರೂ. ನೀಡುವ ಮೂಲಕ ವಿಶೇಷ ಆರ್ಥಿಕ ನೆರವು ನೀಡಲಾಗಿದೆ ಎಂದು ಉಲ್ಲೇಖೀಸಿದೆ.

ಟಾಪ್ ನ್ಯೂಸ್

Padubidri: ರಿಕ್ಷಾ, ಬೈಕ್‌ಗಳ ಮಧ್ಯೆ ಅಪಘಾತ: ಬೈಕ್‌ ಸವಾರನ ಮೂಳೆ ಮುರಿತ

Padubidri: ರಿಕ್ಷಾ, ಬೈಕ್‌ಗಳ ಮಧ್ಯೆ ಅಪಘಾತ: ಬೈಕ್‌ ಸವಾರನ ಮೂಳೆ ಮುರಿತ

Augusta scam broker Michael granted bail after 6 years in custody

Augusta scam: 6 ವರ್ಷಗಳ ಕಸ್ಟಡಿ ಬಳಿಕ ಅಗಸ್ಟಾ ಹಗರಣ ದಲ್ಲಾಳಿ ಮೈಕೆಲ್‌ಗೆ ಜಾಮೀನು

Belthangady ಮುಂಡಾಜೆ ಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Belthangady ಮುಂಡಾಜೆ ಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

TTD-Donate

TTD: ತಿರುಪತಿ ದೇಗುಲದ ಉಚಿತ ಅನ್ನಪ್ರಸಾದ ಟ್ರಸ್ಟ್‌ಗೆ ಮುಂಬೈ ವ್ಯಕ್ತಿ 11ಕೋಟಿ ರೂ.ದೇಣಿಗೆ!

Udupi: ಲಾರಿಗೆ ಸ್ಕೂಟರ್‌ ಢಿಕ್ಕಿ: ಸವಾರ ಸಾವು

Udupi: ಲಾರಿಗೆ ಸ್ಕೂಟರ್‌ ಢಿಕ್ಕಿ: ಸವಾರ ಸಾವು

Bidar: A man from Chillargi village who was on his way to the Kumbh Mela passed away in road accident!

Bidar: ರಸ್ತೆ ಅಪಘಾತದಲ್ಲಿ ಕುಂಭಮೇಳಕ್ಕೆ ತೆರಳುತ್ತಿದ್ದ ಚಿಲ್ಲರ್ಗಿ ಗ್ರಾಮದ ವ್ಯಕ್ತಿ ಸಾವು!

Bird flu outbreak: Ban on transportation of poultry and products from Udgir

Bidar: ಹಕ್ಕಿ ಜ್ವರ ಹೆಚ್ಚಳ: ಉದಗಿರನಿಂದ ಕೋಳಿ, ಉತ್ಪನ್ನಗಳ ಸಾಗಾಟಕ್ಕೆ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumbh stampede: Ashutosh sinha protest against the government

Kumbh stampede: ಸರ್ಕಾರದ ವಿರುದ್ಧ “ಅಸ್ಥಿ ಕುಡಿಕೆ’ ಪ್ರತಿಭಟನೆ

Augusta scam broker Michael granted bail after 6 years in custody

Augusta scam: 6 ವರ್ಷಗಳ ಕಸ್ಟಡಿ ಬಳಿಕ ಅಗಸ್ಟಾ ಹಗರಣ ದಲ್ಲಾಳಿ ಮೈಕೆಲ್‌ಗೆ ಜಾಮೀನು

TTD-Donate

TTD: ತಿರುಪತಿ ದೇಗುಲದ ಉಚಿತ ಅನ್ನಪ್ರಸಾದ ಟ್ರಸ್ಟ್‌ಗೆ ಮುಂಬೈ ವ್ಯಕ್ತಿ 11ಕೋಟಿ ರೂ.ದೇಣಿಗೆ!

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ  ಮಮತಾ ವಾಗ್ದಾಳಿ

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ

Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!

Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sullia ಬಸ್‌ ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Sullia ಬಸ್‌ ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Kumbh stampede: Ashutosh sinha protest against the government

Kumbh stampede: ಸರ್ಕಾರದ ವಿರುದ್ಧ “ಅಸ್ಥಿ ಕುಡಿಕೆ’ ಪ್ರತಿಭಟನೆ

Road Mishap ಸ್ಕೂಟಿಗೆ ಗೂಡ್ಸ್‌ ರಿಕ್ಷಾ ಢಿಕ್ಕಿ; ಸವಾರ ಸಾವು

Road Mishap ಸ್ಕೂಟಿಗೆ ಗೂಡ್ಸ್‌ ರಿಕ್ಷಾ ಢಿಕ್ಕಿ; ಸವಾರ ಸಾವು

Padubidri: ರಿಕ್ಷಾ, ಬೈಕ್‌ಗಳ ಮಧ್ಯೆ ಅಪಘಾತ: ಬೈಕ್‌ ಸವಾರನ ಮೂಳೆ ಮುರಿತ

Padubidri: ರಿಕ್ಷಾ, ಬೈಕ್‌ಗಳ ಮಧ್ಯೆ ಅಪಘಾತ: ಬೈಕ್‌ ಸವಾರನ ಮೂಳೆ ಮುರಿತ

Augusta scam broker Michael granted bail after 6 years in custody

Augusta scam: 6 ವರ್ಷಗಳ ಕಸ್ಟಡಿ ಬಳಿಕ ಅಗಸ್ಟಾ ಹಗರಣ ದಲ್ಲಾಳಿ ಮೈಕೆಲ್‌ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.