ಹೇಗಿದೆ ನಮ್ಮ ಆಡಳಿತ?: ಜನರ ಅಭಿಪ್ರಾಯ ಕೇಳಿದ ಪ್ರಧಾನಿ


Team Udayavani, Aug 11, 2021, 7:20 AM IST

ಹೇಗಿದೆ ನಮ್ಮ ಆಡಳಿತ?: ಜನರ ಅಭಿಪ್ರಾಯ ಕೇಳಿದ ಪ್ರಧಾನಿ

ಹೊಸದಿಲ್ಲಿ: ಎನ್‌ಡಿಎ ನೇತೃತ್ವದ ಸರಕಾರದ ಸಾಧನೆ, ಕೆಲಸ ಹೇಗಿದೆ ಎಂಬುದನ್ನು ತಿಳಿಯಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಕೊರೊನಾ ಪರಿಸ್ಥಿತಿ ನಿಭಾಯಿಸಿದ ರೀತಿ, ರಾಮಮಂದಿರ ನಿರ್ಮಾಣ, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಸಹಿತ ಪ್ರಮುಖ ವಿಚಾರಗಳ ಬಗ್ಗೆ ಜನರ ಅಭಿಪ್ರಾಯ ತಿಳಿಯಲು ತೀರ್ಮಾನಿಸಿದ್ದಾರೆ.

ಉತ್ತರಪ್ರದೇಶ ಸೇರಿ ಐದು ರಾಜ್ಯಗಳಿಗೆ ಮುಂದಿನ ವರ್ಷದ ಮೊದಲರ್ಧದಲ್ಲಿ ಚುನಾ ವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಈ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಪ್ರಧಾನಮಂತ್ರಿಗಳ ಮೊಬೈಲ್‌ ಆ್ಯಪ್‌ನಲ್ಲಿ ಈ ಬಗ್ಗೆ ಪ್ರಶ್ನೆಗಳನ್ನು ಅಪ್‌ಲೋಡ್‌ ಮಾಡಲಾಗಿದೆ.

ಅಭಿಪ್ರಾಯ ಹಂಚಿಕೊಳ್ಳಿ: ರಾಮ ಮಂದಿರ ನಿರ್ಮಾಣ, ತ್ರಿವಳಿ ತಲಾಖ್‌ ರದ್ದು ಕಾಯ್ದೆ, ವಿಶೇಷ ಮಾನ್ಯತೆ ರದ್ದು, ಶಿಕ್ಷಣ, ಕೊರೊನಾ ಪರಿಸ್ಥಿತಿ ನಿರ್ವಹಣೆ, ಉದ್ಯೋಗ, ಶುಚಿತ್ವ, ವಿದ್ಯುತ್‌, ರಸ್ತೆಗಳು ಮತ್ತು ಮೂಲಸೌಕರ್ಯ ಗಳು, ಭ್ರಷ್ಟಾಚಾರ, ಕಾನೂನು ಮತ್ತು ಸುವ್ಯ ವಸ್ಥೆಗಳ ಸಹಿತ ಒಟ್ಟು 13 ವಿಚಾರಗಳ ಬಗ್ಗೆ ಅಭಿಮತ ಆಹ್ವಾನಿಸಲಾಗಿದೆ.

ಎರಡನೇ ಭಾಗ:

ಎರಡನೇ ಭಾಗದಲ್ಲಿ “ಒಪ್ಪಿಕೊಳ್ಳು ತ್ತೀರಾ’ ಮತ್ತು “ಅಸಮ್ಮತಿ ಸೂಚಿಸುತ್ತೀರಾ’ ಎಂಬ ಆಯ್ಕೆ ನೀಡಲಾಗಿದೆ. ಅಲ್ಲಿ “ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷದ ಅಧಿಕಾರ ಇದ್ದರೆ ಅಭಿವೃದ್ಧಿಗೆ ನೆರವಾಗು ತ್ತದೆಯೇ’, “ನಾಲ್ಕು ವರ್ಷಗಳ ಅವಧಿಯಲ್ಲಿ ರಾಜ್ಯ ಸರಕಾರಗಳು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿವೆಯೇ?’, “ಮುಂದಿನ ವರ್ಷಗಳಲ್ಲಿ ರಾಜ್ಯದ ಭವಿಷ್ಯ ಉಜ್ವಲವಾಗಿ ಬೆಳಗಲಿದೆಯೇ?’, “ರಾಜ್ಯ ಸರಕಾರದ ಒಟ್ಟಾರೆ ಸಾಧನೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು?’ ಎಂಬ ಪ್ರಶ್ನೆಗಳನ್ನು ಕೇಳಲಾಗಿದೆ.

“ಮತ ಚಲಾಯಿಸುವ ಸಂದರ್ಭದಲ್ಲಿ ಅಭ್ಯರ್ಥಿಯ ಜಾತಿ, ಧರ್ಮ, ಅವರು ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಗಮನಿಸುತ್ತೀರಾ’ ಎಂದೂ ಕೇಳಲಾಗಿದೆ.

ಅಭ್ಯರ್ಥಿಗಳ ಆಯ್ಕೆಗೆ ಸಹಕಾರಿ?: ಮುಂದಿನ ವರ್ಷದ ಮೊದಲ ಭಾಗದಲ್ಲಿ ಉತ್ತರಪ್ರದೇಶ, ಪಂಜಾಬ್‌, ಉತ್ತರಾಖಂಡ, ಗೋವಾ, ಮಣಿಪುರ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ಸಮೀಕ್ಷೆ ನಡೆಸುವುದರಿಂದ ಈ ಐದು ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಯಾರಿಗೆ ಟಿಕೆಟ್‌ ನೀಡಬಹುದು ಎಂಬ ಬಗೆಗಿನ ಲೆಕ್ಕಾಚಾರವೂ ಇದೆ. ಐದು ರಾಜ್ಯಗಳಲ್ಲಿರುವ ಬಿಜೆಪಿ ಮುಖಂಡರ ಪೈಕಿ ಮೂವರು ಪ್ರಮುಖರ ನಾಯಕರ ಹೆಸರನ್ನೂ ಉಲ್ಲೇಖೀಸುವಂತೆ ಕೋರಿರುವುದು ಮಹತ್ವದ್ದು.

ಸರಕಾರದ ಮೌಲ್ಯಮಾಪನ: ಆಯಾ ರಾಜ್ಯ ಸರಕಾರಗಳು ರಸ್ತೆ, ಇಂಧನ, ಕುಡಿಯುವ ನೀರು, ಕೈಗೆಟಕುವ ದರದಲ್ಲಿ ಆರೋಗ್ಯ ವ್ಯವಸ್ಥೆ, ಶಿಕ್ಷಣ, ಪಡಿತರ ಸಂಬಂಧಿ ವಿಚಾರಗಳು, ಕಾನೂನು ಮತ್ತು ಸುವ್ಯವಸ್ಥೆ, ಉದ್ಯೋಗ ಸೃಷ್ಟಿ, ಗ್ರಾಮೀಣ ಪ್ರದೇಶದಲ್ಲಿ ವಿದ್ಯುದೀಕರಣ, ರೈತರ ಕಲ್ಯಾಣ ಕ್ಷೇತ್ರಗಳಲ್ಲಿ ಯಾವ ಸಾಧನೆ ಮಾಡಲಾಗಿದೆ ಎಂದೂ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಜನರಿಗೆ ಹೆಚ್ಚು ಅನುಕೂಲವಾಗಿರುವ ಯೋಜನೆ ಯಾವುದು ಎಂಬ ಬಗ್ಗೆಯೂ ಅಭಿಪ್ರಾಯ ಆಹ್ವಾನಿಸಲಾಗಿದೆ. ಬಿಜೆಪಿಗೆ ಮತ ಹಾಕಲು ತಿಳಿಸುತ್ತೀರಾ- ಹೌದು ಅಥವಾ ಇಲ್ಲ ಎಂಬ ಉತ್ತರದೊಂದಿಗೆ ಸಮೀಕ್ಷೆ ಮುಕ್ತಾಯವಾಗುತ್ತದೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.