![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 3, 2021, 7:45 AM IST
ಕೋಲ್ಕತ್ತಾ: ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ತಮ್ಮ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದ ಸಿಎಂ ಮಮತಾ ಬ್ಯಾನರ್ಜಿ, ನಂದಿಗ್ರಾಮದಲ್ಲಿ ತಮ್ಮ ಒಂದು ಕಾಲದ ಆಪ್ತ, ಬಿಜೆಪಿ ನಾಯಕ ಸುವೇಂದು ಅಧಿಕಾರಿ ವಿರುದ್ಧ ಸೋಲುಂಡಿದ್ದಾರೆ.
ಸದ್ಯ ದೀದಿ ಸೋತಿರುವ ಕಾರಣ ಅವರು “ಸಿಎಂ” ಹುದ್ದೆಗೆ ಏರಲು ಆಗುತ್ತದೆಯೇ ಎಂಬ ಪ್ರಶ್ನೆ ಹಲವರದ್ದು. ಅದಕ್ಕೆ ಉತ್ತರ ಇಲ್ಲಿದೆ: ದೀದಿ ಸಿಎಂ ಹುದ್ದೆಗೆ ಏರಲು ಸಾಧ್ಯವಿದೆ. ಇಲ್ಲಿ ಅವರಿಗೆ 2 ಆಯ್ಕೆಗಳಿವೆ.
ಇದನ್ನೂ ಓದಿ:ಅಸ್ಸಾಂನಲ್ಲಿ ಕಮಲ 2ನೇ ಇನ್ನಿಂಗ್ಸ್
ಮೊದಲನೆಯದ್ದು, ಟಿಎಂಸಿಯ ನೂತನ ಶಾಸಕರು ಮಮತಾರನ್ನು ಶಾಸಕಾಂಗ ಪಕ್ಷದ ನಾಯಕಿ ಎಂದು ಘೋಷಿಸುವುದು. ಇದಾದ ಬಳಿಕ 6 ತಿಂಗಳ ಒಳಗಾಗಿ ವಿಧಾನಪರಿಷತ್ ಸದಸ್ಯೆ (ಎಂಎಲ್ಸಿ)ಯಾಗಿ ಆಯ್ಕೆಯಾಗಿ ಮಮತಾ ಸಿಎಂ ಹುದ್ದೆಗೆ ಏರಬಹುದು.
ಎರಡನೆಯದ್ದು, ಖಾಲಿಯಿರುವ ಯಾವುದಾದರೂ ಕ್ಷೇತ್ರ (ಉದಾ: ಖರ್ದಾಹಾ)ದಲ್ಲಿ ನಾಮಪತ್ರ ಸಲ್ಲಿಸಿ, 6 ತಿಂಗಳೊಳಗೆ ಉಪಚುನಾವಣೆಯಲ್ಲಿ ಗೆದ್ದು ಬಂದು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಬಹುದು. ನಿತೀಶ್ ಕುಮಾರ್, ಯೋಗಿ ಆದಿತ್ಯನಾಥ್, ಉದ್ಧವ್ ಠಾಕ್ರೆ, ಮಾಯಾವತಿ, ಅಖೀಲೇಶ್, ಮನೋಹರ್ ಪರ್ರಿಕರ್ ಮತ್ತಿತರರು ಕೂಡ ಈ ರೀತಿಯ ಅವಕಾಶ ಬಳಸಿಕೊಂಡು ಸಿಎಂ ಹುದ್ದೆಗೆ ಏರಿದ್ದರು.
ಇದನ್ನೂ ಓದಿ: ಹಣ ಕೊಟ್ಟು ಮತ ನೀಡಿ ಎನ್ನುವ ನೀಚರ ಕಪಾಳಕ್ಕೆ ಬಾರಿಸಿ: ನಟ ಉಪೇಂದ್ರ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.