NEET ಪರೀಕ್ಷೆ ಮಿಸ್ ಮಾಡಿಕೊಳ್ಳಲಿದ್ದಾರೆ ಗಲ್ಫ್ ದೇಶಗಳಲ್ಲಿ ಸಿಲುಕಿರುವ ವಿದ್ಯಾರ್ಥಿಗಳು!


Team Udayavani, Aug 28, 2020, 7:27 PM IST

NEET ಪರೀಕ್ಷೆಯನ್ನು ಮಿಸ್ ಮಾಡಿಕೊಳ್ಳಲಿದ್ದಾರೆ ಗಲ್ಫ್ ದೇಶಗಳಲ್ಲಿ ಸಿಲುಕಿರುವ ನೂರಾರು ವಿದ್ಯಾರ್ಥಿಗಳು!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ದೇಶದಲ್ಲಿ ಸದ್ಯಕ್ಕೆ NEET ಮತ್ತು JEE ಪರೀಕ್ಷೆಗಳ ಕುರಿತಾಗಿ ಭಾರೀ ಚರ್ಚೆ ನಡೆಯುತ್ತಿದೆ.

ಕೇಂದ್ರ ಸರಕಾರವು ಈ ಎರಡು ಪ್ರವೇಶ ಪರೀಕ್ಷೆಗಳನ್ನು ನಿಗದಿಯಂತೆ ಸೆಪ್ಟಂಬರ್ ತಿಂಗಳಿನಲ್ಲಿ ನಡೆಸಲು ನಿರ್ಧರಿಸಿದೆ ಹಾಗೂ ಇದಕ್ಕೆ ಬೇಕಾಗಿರುವ ಎಲ್ಲಾ ಸಿದ್ಧತೆಗಳನ್ನು ಪ್ರಾರಂಭಿಸಿದೆ.

ದೇಶಾದ್ಯಂತ NEET ಪರೀಕ್ಷೆಗಳು ಸೆಪ್ಟಂಬರ್ 13ರಂದು ನಡೆಯಲಿವೆ.

ಈ ನಡುವೆ ಕೋವಿಡ್ 19 ಸಂಬಂಧಿ ಲಾಕ್ ಡೌನ್ ಕಾರಣದಿಂದ ಗಲ್ಫ್ ದೇಶಗಳಲ್ಲೇ ಉಳಿದುಕೊಂಡಿರುವ ನೂರಾರು ವಿದ್ಯಾರ್ಥಿಗಳು ಈ ಬಾರಿಯ NEET ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗದಿರುವ ಸಂಕಷ್ಟದ ಕುರಿತಾಗಿ ಆನ್ ಮನೋರಮಾ ವರದಿ ಮಾಡಿದೆ.

ಅದರಲ್ಲೂ ವಿದೇಶದಿಂದ ಭಾರತಕ್ಕೆ ಆಗಮಿಸುವವರಿಗೆ ಸಂಬಂಧಿಸಿದ ಕೋವಿಡ್ 19 ನಿಯಮಾವಳಿಗಳೇ ಈ ವಿದ್ಯಾರ್ಥಿಗಳಿಗೆ NEET ಪರೀಕ್ಷೆಗೆ ಹಾಜರಾಗಲು ಪ್ರಮುಖ ತೊಡಕಾಗಿ ಪರಿಣಮಿಸಿದೆ.

ಗಲ್ಫ್ ದೇಶಗಳಿಂದ ಭಾರತಕ್ಕೆ ಬರುವವರು ವಿಮಾನ ಪ್ರಯಾಣಕ್ಕೆ 96 ಗಂಟೆಗಳ ಮೊದಲು ಕೋವಿಡ್ 19 ತಪಾಸಣೆ ಮಾಡಿಸಿಕೊಂಡು ನೆಗೆಟಿವ್ ಪ್ರಮಾಣಪತ್ರವನ್ನು ಪಡೆದುಕೊಳ್ಳಬೇಕು. ಆದರೆ ಈ ಸೌಲಭ್ಯ ಗಲ್ಫ್ ದೇಶಗಳಲ್ಲಿ ಎಲ್ಲಾ ಕಡೆಗಳಲ್ಲಿ ಲಭ್ಯ ಇರುವುದಿಲ್ಲ.

ಈ ಪ್ರಮಾಣ ಪತ್ರವನ್ನು ಪಡೆದುಕೊಂಡು ಭಾರತಕ್ಕೆ ಆಗಮಿಸಿದ ಬಳಿವೂ ಅವರಿಗೆ ನೇರವಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಸಾಧ್ಯವಿಲ್ಲ. ಯಾಕೆಂದರೆ ಹೀಗೆ ಬಂದವರು 14 ದಿನಗಳ ಕಾಲ ಹೋಂ ಕ್ವಾರೆಂಟೈನ್ ಗೆ ಒಳಗಾಗಬೇಕಾಗಿರುತ್ತದೆ.

ಮತ್ತು ಪರೀಕ್ಷೆ ಬರೆಯಲು ಗಲ್ಫ್ ದೇಶದಿಂದ ಇಲ್ಲಿಗೆ ಬಂದು ಮತ್ತೆ ಮರಳಿ ಅಲ್ಲಿಗೆ ತೆರಳುವುದು ಅವರಿಗೆ ಹಣಕಾಸಿನ ಹೊರೆಯೂ ಆಗಲಿದೆ.

ಗಲ್ಫ್ ದೇಶಗಳಲ್ಲಿರುವ ಸುಮಾರು 3000 ವಿದ್ಯಾರ್ಥಿಗಳು ಈಗಾಗಲೇ NEET ಪರೀಕ್ಷೆಗಳಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಕೇರಳದಲ್ಲಿ ಕ್ವಾರೆಂಟೈನ್ ಸೌಲಭ್ಯವಿರುವ ಕೆಲವು ವಿದ್ಯಾರ್ಥಿಗಳು ಮಾತ್ರವೇ ಇದೀಗ ಪರೀಕ್ಷೆಗೆ ಹಾಜರಾಗಲು ರಾಜ್ಯಕ್ಕೆ ಬಂದಿದ್ದಾರೆ.

ಗಲ್ಫ್ ದೇಶದಗಳಲ್ಲಿ ಇರುವ ಈ ವಿದ್ಯಾರ್ಥಿಗಳಿಗೆ ಉಂಟಾಗುವ ತೊಂದರೆಯನ್ನು ಹೋಗಲಾಡಿಸಲು ಗಲ್ಫ್ ನಲ್ಲಿ NEET ಪರೀಕ್ಷಾ ಕೇಂದ್ರಗಳನ್ನು ತೆರೆಯಬೇಕು ಎಂಬ ಆಗ್ರಹ ಈಗಾಗಲೇ ಕೇಳಿಬಂದಿದೆ. ಈ ವಿಚಾರವಾಗಿ ಕತಾರ್ KMCC ಈಗಾಗಲೇ ನ್ಯಾಯಾಲಯದ ಮೆಟ್ಟಿಲನ್ನೂ ಹತ್ತಿದೆ.

ಇದನ್ನು ಹೊರತಾಗಿಸಿದರೆ ಆನ್ ಲೈನ್ ಪರೀಕ್ಷೆಗಳನ್ನು ನಡೆಸುವುದೂ ಇದಕ್ಕೊಂದು ಪರಿಹಾರವಾಗಬಹುದು ಎಂದು ಹಲವು ಹೆತ್ತವರು ಅಭಿಪ್ರಾಯಪಡುತ್ತಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.