ತಲಾಖ್ ಕೊಟ್ಟ ಪತಿ ವಿರುದ್ಧ ದೂರು ನೀಡಿದ ಪತ್ನಿಯನ್ನು ಬೆಂಕಿಹಚ್ಚಿ ಕೊಂದ ಗಂಡ


Team Udayavani, Aug 19, 2019, 3:25 PM IST

Complaint

ಶ್ರಾವಸ್ತಿ(ಉತ್ತರಪ್ರದೇಶ): ತಲಾಖ್ ಮೂಲಕ ವಿಚ್ಛೇದನ ನೀಡಿದ್ದ ಗಂಡನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮುಂದಾಗಿದ್ದ ಪತ್ನಿ(22ವರ್ಷ)ಯನ್ನು ಗಂಡ ಹಾಗೂ ಮಾವ ಜೀವಂತವಾಗಿ ಸುಟ್ಟುಹಾಕಿರುವ ಹೃದಯವಿದ್ರಾವಕ ಘಟನೆ ಉತ್ತರಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ನಡೆದಿದೆ.

ಮುಸ್ಲಿಂ ಮಹಿಳೆ(ವಿವಾಹ ರಕ್ಷಣಾ ಹಕ್ಕುಗಳ ಕಾಯ್ದೆ) ಕಾಯ್ದೆ 2019 ಜುಲೈ 25ರಂದು ಲೋಕಸಭೆಯಲ್ಲಿ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿತ್ತು. ಈ ಮಸೂದೆ ಪ್ರಕಾರ, ಬರವಣಿಗೆ ಮೂಲಕವಾಗಲಿ, ಮೌಖಿಕವಾಗಿ ಹಾಗೂ ವಿದ್ಯುನ್ಮಾನ ಸಂಪರ್ಕದ ಮೂಲಕ ತ್ರಿವಳಿ ತಲಾಖ್ ನೀಡುವುದು ಕಾನೂನು ಬಾಹಿರ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ತ್ರಿವಳಿ ತಲಾಖ್ ಆರೋಪ ಸಾಬೀತಾದಲ್ಲಿ ಮೂರು ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

ಮೊಬೈಲ್ ಕರೆ ಮಾಡಿ ತಲಾಖ್ ಕೊಟ್ಟಿದ್ದ ಪತಿ:

ಸಂತ್ರಸ್ತೆಯ ತಂದೆಯ ದೂರಿನ ಪ್ರಕಾರ, ಆಗಸ್ಟ್ 6ರಂದು ಮುಂಬೈನಲ್ಲಿ ಉದ್ಯೋಗದಲ್ಲಿರುವ ಗಂಡ ನಫೀಸ್ ಹೆಂಡತಿಗೆ(ಸಯೀದಾ) ಮೊಬೈಲ್ ಕರೆ ಮಾಡಿ ತಲಾಖ್ ನೀಡಿದ್ದ. ಈ ಹಿನ್ನೆಲೆಯಲ್ಲಿ ಮಗಳು ಸಯೀದಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ತೆರಳಿದ್ದಳು. ಆದರೆ ಪೊಲೀಸರು ಪತಿ ಮುಂಬೈಯಿಂದ ಬರಲಿ ಇತ್ಯರ್ಥಪಡಿಸುವ ಭರವಸೆ ನೀಡಿ ಸಯೀದಾಳನ್ನು ವಾಪಸ್ ಕಳುಹಿಸಿಕೊಟ್ಟಿರುವುದಾಗಿ ತಂದೆ ತಿಳಿಸಿದ್ದಾರೆ.

ಪತಿ ತನಗೆ ನಿರಂತರವಾಗಿ ಹೊಡೆಯುತ್ತಿದ್ದರು. ಆದರೆ ಯಾವತ್ತೂ ನಾನು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಈಗ ತಲಾಖ್ ನೀಡಿದ್ದಾರೆ ಎಂದು ಸಯೀದಾ ಮತ್ತು ಪತಿ ನಫೀಸ್ ನನ್ನು ಠಾಣೆಗೆ ಕರೆಯಿಸಿದ್ದಾಗ ಆರೋಪಿಸಿದ್ದಳು. ಕೊನೆಗೆ ಪೊಲೀಸರ ಮಧ್ಯಸ್ಥಿಕೆಯಲ್ಲಿ ರಾಜಿ ಮಾಡಿಸಿದ್ದರು. ತನಗೆ ಮತ್ತೊಂದು ಅವಕಾಶ ಕೊಡಿ ಎಂದು ಪತಿ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದ ಎಂದು ಸಯೀದಾ ತಂದೆ ರಮ್ಜಾನ್ ಅಲಿ ಖಾನ್ ವಿವರಿಸಿದ್ದಾರೆ.

ಕಳೆದ ವಾರ ದಂಪತಿಯನ್ನು ಠಾಣೆಗೆ ಕರೆಯಿಸಿ, ನಫೀಸ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮುನ್ನ, ನೀವಿಬ್ಬರೂ ಒಟ್ಟಿಗೆ ಇರಿ ಎಂದು ಸಲಹೆ ನೀಡಿ ಕಳುಹಿಸಿಕೊಟ್ಟಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹೋದ ವಿಚಾರಕ್ಕೆ ಸಂಬಂಧಿಸಿದಂತೆ ಪತಿ, ಪತ್ನಿ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಗಂಡ ಮತ್ತು ಮಾವ ಆಕೆಯನ್ನು ಹೊರಗೆ ತಳ್ಳಿ, ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿರುವುದಾಗಿ ವರದಿ ತಿಳಿಸಿದೆ. ಈ ಘಟನೆಗೆ ಸಯೀದಾಳ ಅಪ್ರಾಪ್ತ ವಯಸ್ಸಿನ ಮಗಳು ಪ್ರತ್ಯಕ್ಷ ಸಾಕ್ಷಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ದೂರನ್ನು ದಾಖಲಿಸಿಕೊಂಡಿರುವ ಪೊಲೀಸರು ನಫೀಸ್ ಹಾಗೂ ತಂದೆಯನ್ನು ಬಂಧಿಸಿದ್ದು, ಉಳಿದವರನ್ನು ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದೂರಿನಲ್ಲಿ ಎಂಟು ಮಂದಿಯ ಹೆಸರನ್ನು ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಉಳಿದವರನ್ನು ಬಂಧಿಸಲು ಕಾರ್ಯಪ್ರವೃತ್ತರಾಗಿರುವುದಾಗಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಬಿಎಸ್ ದುಬೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.