![1-dee](https://www.udayavani.com/wp-content/uploads/2025/02/1-dee-1-415x221.jpg)
![1-dee](https://www.udayavani.com/wp-content/uploads/2025/02/1-dee-1-415x221.jpg)
Team Udayavani, Nov 9, 2021, 12:51 PM IST
ನಾಗಪುರ: ದೀಪಾವಳಿಯಂದು ಪತಿ ಡೈನಿಂಗ್ ಟೇಬಲ್ ತರಲಿಲ್ಲ ಎಂದು ಪತ್ನಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಡ್ಕೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಟೇಕ್ ಆಫ್ ಸಿಟಿ ಪರಿಸರದಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ಸಂಗೀತಾ ರಾಜನ್ ಪಾಟೀಲ್ ಎಂದು ಗುರುತಿಸಲಾಗಿದೆ.
ಸಂಗೀತಾ ಅವರ ಪತಿ ರಾಜನ್ ಖಾಸಗಿಯಾಗಿ ಕೆಲಸ ಮಾಡುತ್ತಿದ್ದಾರೆ. ದೀಪಾವಳಿಯಂದು ಡೈನಿಂಗ್ ಟೇಬಲ್ ತರುವಂತೆ ಸಂಗೀತಾ ಪತಿಗೆ ಪದೇ ಪದೇ ಒತ್ತಾಯಿಸುತ್ತಿದ್ದಳು. ಆದರೆ ಬಜೆಟ್ ಕೊರತೆಯಿಂದ ಕೆಲವು ದಿನಗಳ ಬಳಿಕ ಡೈನಿಂಗ್ ಟೇಬಲ್ ತರುತ್ತೇನೆ ಎಂದು ಸಂಗೀತಾಗೆ ರಾಜನ್ ಹೇಳಿದ್ದ. ಆದರೆ ಅಸಮಾಧಾನಗೊಂಡ ಸಂಗೀತಾ ಶನಿವಾರ ಅಪರಾಹ್ನ 4 ಗಂಟೆ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜೇಂದ್ರ ಶಂಕರ ಪಾಟೀಲ್ ನೀಡಿದ ಮಾಹಿತಿ ಮೇರೆಗೆ ಹುಕ್ಕೇಕೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.