![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 14, 2021, 3:14 PM IST
ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಗೋವಾದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜರಿವಾಲ್ ನುಡಿದರು.
ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು- ದೆಹಲಿಯ ಜನರು ಉಚಿತ ವಿದ್ಯುತ್ ಪಡೆಯಲು ಸಾಧ್ಯವಿದೆ, ಅಂತೆಯೇ ಗೋವಾದ ಜನರಿಗೂ ಕೂಡ ಏಕೆ ಉಚಿತ ವಿದ್ಯುತ್ ನೀಡಬಾರದು. ಮುಂದಿನ ಚುನಾವಣೆಯಲ್ಲಿ ತಾವು ಬಿಜೆಪಿ ಅಥವಾ ಕಾಂಗ್ರೇಸ್ ಪರ ಮತ ಚಲಾಯಿಸುವುದಿಲ್ಲ ಎಂದು ಸಾವಿರಾರು ಜನ ಗೋವಾದ ಜನರು ಹೇಳುತ್ತಾರೆ. ಗೋವಾ ಬದಲಾವಣೆಯನ್ನು ಜನರು ಬಯಸಿದ್ದಾರೆ ಶುದ್ಧ ರಾಜಕೀಯವನ್ನು ಬಯಸಿದ್ದಾರೆ ಇದನ್ನು ಆಮ್ ಆದ್ಮಿ ಪಕ್ಷ ನೀಡಲಿದೆ ಎಂದು ಅರವಿಂದ ಕೇಜರಿವಾಲ್ ನುಡಿದರು.
ಕಳೆದ ಗೋವಾ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೇಸ್ ಮತ್ತು ಇತರ ಪಕ್ಷಗಳಿಂದ ಬಿಜೆಪಿ ಸೇರಿದ ಶಾಸಕರ ವಿರುದ್ಧ ಕೇಜರಿವಾಲ್ ವಾಗ್ದಾಳಿ ನಡೆಸಿದರು. ಕಳೆದ ಬಾರಿ ಚುನಾವಣೆಯಲ್ಲಿ ಬಹುಮತದ ಆಧಾರದಲ್ಲಿ ಗಮನಿಸಿದರೆ ಪ್ರತಿಪಕ್ಷದಲ್ಲಿ ಇರಬೇಕಾದವರು ಈಗ ಗೋವಾ ರಾಜ್ಯ ಆಳುತ್ತಿದ್ದಾರೆ, ಅಧಿಕಾರದಲ್ಲಿರಬೇಕಾದವರು ಪ್ರತಿಪಕ್ಷದಲ್ಲಿದ್ದಾರೆ. ಈಗ ಅಧಿಕಾರದಲ್ಲಿದ್ದವರು ಹೇಳಿಕೊಂಡಂತೆ ಜನರ ಕೆಲಸ ಮಾಡಿದ್ದಾರೆಯೇ..? ಎಂದು ಕೇಜರಿವಾಲ್ ಪ್ರಶ್ನಿಸಿದರು. ಈ ಪತ್ರಿಕಾಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.